AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರಬೇತಿ ವೇಳೆ ಬೋಟ್​ ಮಗುಚಿ ಇಬ್ಬರು ಕಮಾಂಡೋಗಳು ಸಾವು: ನಾಲ್ವರು ಪಾರು

ತರಬೇತಿ ವೇಳೆ ಬೋಟ್ ಮಗುಚಿ ಇಬ್ಬರು ಜೂನಿಯರ್ ಕಮಾಂಡೋಗಳು ಸಾವನ್ನಪ್ಪಿರುವಂತಹ ಘಟನೆ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಘಡ ತಾಲೂಕಿನ ಹಾಜಗೋಳಿ ಬಳಿ ದುರ್ಘಟನೆ ನಡೆದಿದೆ. ಒಟ್ಟು 6 ಜನರ ಪೈಕಿ ಈಜಿ ಪ್ರಾಣಾಪಾಯದಿಂದ ನಾಲ್ವರು ಕಮಾಂಡೋಗಳು ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಜೆಎಲ್‌ ವಿಂಗ್ ಕಮಾಂಡೋ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತರಬೇತಿ ವೇಳೆ ಬೋಟ್​ ಮಗುಚಿ ಇಬ್ಬರು ಕಮಾಂಡೋಗಳು ಸಾವು: ನಾಲ್ವರು ಪಾರು
ತರಬೇತಿ ವೇಳೆ ಬೋಟ್​ ಮಗುಚಿ ಇಬ್ಬರು ಕಮಾಂಡೋಗಳು ಸಾವು: ನಾಲ್ವರು ಪಾರು
Sahadev Mane
| Edited By: |

Updated on: Sep 08, 2024 | 2:51 PM

Share

ಬೆಳಗಾವಿ, ಸೆಪ್ಟೆಂಬರ್​ 08: ತರಬೇತಿ ವೇಳೆ ಬೋಟ್ ಮಗುಚಿ ಇಬ್ಬರು ಜೂನಿಯರ್ ಕಮಾಂಡೋಗಳು (commandos) ಸಾವನ್ನಪ್ಪಿರುವಂತಹ ಘಟನೆ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಘಡ ತಾಲೂಕಿನ ಹಾಜಗೋಳಿ ಬಳಿ ನಡೆದಿದೆ. ರಾಜಸ್ಥಾನದ ವಿಜಯಕುಮಾರ್(28) ಮತ್ತು ಪಶ್ಚಿಮ ಬಂಗಾಳದ ದಿವಾಕರ್ ರಾಯ್(26) ಮೃತ ಜೂನಿಯರ್ ಕಮಾಂಡೋಗಳು. ತಿಲಾರಿ ಡ್ಯಾಂ ಹಿನ್ನೀರಿನಲ್ಲಿ ನದಿ ದಾಟುವ ತರಬೇತಿ ನೀಡುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

ಒಟ್ಟು ಆರು ಜನರಿದ್ದ ಬೋಟ್​ನಿಂದ ನಾಲ್ವರು ಈಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಜೆಎಲ್​ವಿಂಗ್ ಕಮಾಂಡೋ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಸರ್ಕಾರಿ ಬಸ್ ಹರಿದ: ಸಾವು

ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಸರ್ಕಾರಿ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ  ಜಿಲ್ಲೆಯ ಅಥಣಿ ಪಟ್ಟಣದ ಗಲಗಲಿ ಆಸ್ಪತ್ರೆ ಬಳಿ ನಡೆದಿದೆ. ಸುನೀಲ್ ಬಂಡರಗರ್ (10) ಮೃತ ಬಾಲಕ. ಟ್ಯೂಷನ್ ಮುಗಿಸಿ ಮೂತ್ರ ವಿಸರ್ಜನೆಗೆ ಗೆಳೆಯರ ಜೊತೆಗೆ ಹೊರ ಬಂದಿದ್ದಾಗ ಅವಘಡ ಸಂಭವಿಸಿದೆ.

ಇದನ್ನೂ ಓದಿ: ಕಲಬುರಗಿ: ಮಾರಕಾಸ್ತ್ರಗಳಿಂದ ಹೊಡೆದು ವ್ಯಕ್ತಿಯ ಭೀಕರ ಕೊಲೆ

ಮಕ್ಕಳು ನಿಂತಿದ್ದನ್ನ ಗಮನಿಸಿದರೂ ಚಾಲಕ ಮಕ್ಕಳ ಮೇಲೆ ಬಸ್ ಹರಿಸಿದ್ದಾನೆ. ಚಾಲಕನ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಥಣಿಯಿಂದ ಕಾರವಾರದ ಕಡೆ ಸರ್ಕಾರಿ ಬಸ್ ಹೋಗುತಿತ್ತು. ಭೀಕರ ರಸ್ತೆ ಅಪಘಾತ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೈಕ್​ ಮತ್ತು ಆಟೋ ಮಧ್ಯೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ತುಮಕೂರು: ಬೈಕ್ ಮತ್ತು​ ಆಟೋ ಮಧ್ಯೆ ಡಿಕ್ಕಿಯಾಗಿ ಮೂವರು ವ್ಯಕ್ತಿಗಳು ಗಂಭೀರ ಗಾಯಗೊಂಡಿರುವಂತಹ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ರಾಜವಂತಿ ಬಳಿ ನಡೆದಿದೆ. ಬೈಕ್​ ಡಿಕ್ಕಿಯಾದ ಬಳಿಕ ಆಟೋ ಪಲ್ಟಿಯಾಗಿ ಮೂವರಿಗೆ ಗಾಯಗಳಿವೆ. ಗಾಯಾಳುಗಳಿಗೆ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾರಿ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು

ಬಳ್ಳಾರಿ: ಜಿಲ್ಲೆ ಸಂಡೂರು ತಾಲೂಕಿನ‌ ದೋಣಿಮಲೈ ಕ್ರಾಸ್ ಬಳಿಯ ನಾರಿ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಸಂಡೂರು ನಿವಾಸಿ ಫಾರುಕ್ (45) ಮೃತ ದುರ್ದೈವಿ. ಬಾಬಯ್ ದೇವಸ್ಥಾನಕ್ಕೆ ಹೋಗಿ ಮರಳಿ ಬರುವಾಗ ದುರ್ಘಟನೆ ನಡೆದಿದೆ. ಸೇತುವೆ ಮೇಲಿಂದ ಆಯತಪ್ಪಿ ಹಳ್ಳಕ್ಕೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಹಾಲು ತರಲು ಹೋದ ಮಹಿಳೆಯನ್ನು ಎಳೆದೊಯ್ಯಲು ಯತ್ನ: ಖದೀಮನನ್ನು ನಗ್ನಗೊಳಿಸಿ ಥಳಿಸಿದ ಯುವಕರು

ಸದ್ಯ ಅಧಿಕಾರಿಗಳು ಹಳ್ಳದ ನೀರಿನಿಂದ ಮೃತದೇಹವನ್ನು ಹೊರ ತೆಗೆದಿದ್ದಾರೆ. ಮೃತ ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ಯುಡಿಆರ್​ ಅಡಿಯಲ್ಲಿ ಸಂಡೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ