AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP Candidate Mangala Angadi Temple Run: ನಾಮಪತ್ರ ಸಲ್ಲಿಕೆಗೂ ಮುನ್ನ ಪುತ್ರಿಯರೊಂದಿಗೆ ಶಿವಾಜಿ-ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮಂಗಳಾ ಅಂಗಡಿ

‘ನಮ್ಮ ತಂದೆ ಚುನಾವಣೆಗೆ ಸ್ಪರ್ಧಿಸಿದಾಗ ಅವರ ಜತೆಗಿದ್ದೆವು. ಈಗ ನಮ್ಮ ತಾಯಿಯವರ ಜೊತೆ ನಾವು ಹೋಗುತ್ತೇವೆ’ ಎಂದು ಚುನಾವಣಾ ಪ್ರಕ್ರಿಯೆಯಲ್ಲಿ ತಾಯಿಯ ಜತೆ ನಿಲ್ಲುವುದಾಗಿ ಶ್ರದ್ಧಾ ಶೆಟ್ಟರ್ ಘೋಷಿಸಿದ್ದಾರೆ.

BJP Candidate Mangala Angadi Temple Run: ನಾಮಪತ್ರ ಸಲ್ಲಿಕೆಗೂ ಮುನ್ನ ಪುತ್ರಿಯರೊಂದಿಗೆ ಶಿವಾಜಿ-ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮಂಗಳಾ ಅಂಗಡಿ
ಶಿವಾಜಿ, ಬಸವಣ್ಣ ಪ್ರತಿಮೆಗಳಿಗೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮಾಲಾರ್ಪಣೆ ಮಾಡಿದರು.
guruganesh bhat
|

Updated on:Mar 30, 2021 | 11:39 AM

Share

ಬೆಳಗಾವಿ: ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಹಿನ್ನೆಲೆ ಮಂಗಳಾ ಅಂಗಡಿ ಟೆಂಪಲ್ ರನ್ ಮಾಡಿದ್ದಾರೆ. ಬೆಳಗಾವಿಯ ಆಂಜನೇಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿರುವ ಅವರು, ಬೆಳಗಾವಿಯ ಶಿವಾಜಿ ಉದ್ಯಾನವನದಲ್ಲಿರುವ ಶಿವಾಜಿ ಪ್ರತಿಮೆ ಮಾಲಾರ್ಪಣೆ ಮಾಡಿದ್ದಾರೆ. ಜತೆಗೆ ಬೆಳಗಾವಿಯ ಬಸವೇಶ್ವರ ವೃತ್ತದ ಉದ್ಯಾನವನದಲ್ಲಿರುವ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ್ದಾರೆ.ಈ ಸಂದರ್ಭದಲ್ಲಿ ಮಂಗಳಾ ಅಂಗಡಿ ಜತೆ ಅವರ ಇಬ್ಬರು ಮಕ್ಕಳು, ಸಹೋದರ, ಕುಟುಂಬದ ಸದಸ್ಯರು ಜತೆಯಾಗಿದ್ದಾರೆ.

ಇಷ್ಟೇ ಅಲ್ಲದೇ ಮಂಗಳಾ ಅಂಗಡಿ ಅವರು ನಾಮಪತ್ರ ಸಲ್ಲಿಕೆ ಮುಂಚೆಯೇ ದೇವಸ್ಥಾನಗಳ ದರ್ಶನ ಮುಂದುವರೆಸಿದ್ದಾರೆ. ಬೆಳಗಾವಿ ನಗರದ ಹನುಮಾನ್ ದೇವಸ್ಥಾನಕ್ಕೆ ಭೇಟಿ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು ನಾಮಪತ್ರ ಸಲ್ಲಿಸಲಿರುವ ಮಂಗಳ ಅಂಗಡಿಗೆ ಪುತ್ರಿ ಶ್ರದ್ದಾ ಶೆಟ್ಟರ್, ಸ್ಪೂರ್ತಿ ಪಾಟೀಲ್ ಮತ್ತು ಸಹೋದರ ಚಂದ್ರಪ್ಪ ಅಂಗಡಿ ಸೇರಿ ಜತೆಯಾಗುವ ಸಾಧ್ಯತೆಯಿದೆ.

ಈ ಕುರಿತು ಟಿವಿ9 ಕನ್ನಡಕ್ಕೆ ಪ್ರತಿಕ್ರಿಯೆ ನೀಡಿದ ಮಂಗಳಾ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್, ‘ನಮ್ಮ ತಂದೆ ಚುನಾವಣೆಗೆ ಸ್ಪರ್ಧಿಸಿದಾಗ ಅವರ ಜತೆಗಿದ್ದೆವು. ಈಗ ನಮ್ಮ ತಾಯಿಯವರ ಜೊತೆ ನಾವು ಹೋಗುತ್ತೇವೆ’ ಎಂದು ಚುನಾವಣಾ ಪ್ರಕ್ರಿಯೆಯಲ್ಲಿ ತಾಯಿಯ ಜತೆ ನಿಲ್ಲುವುದಾಗಿ ಘೋಷಿಸಿದ್ದಾರೆ.ನಮ್ಮ ತಂದೆಯವರು ಮಾಡಿದ ಕೆಲಸ ನಮ್ಮ ಕೈಹಿಡಿಯಲಿದೆ. ನಮ್ಮ ತಾಯಿ ಖಂಡಿತವಾಗಿ ಗೆಲುವು ಸಾಧಿಸ್ತಾರೆಂಬ ವಿಶ್ವಾಸ ನಮಗಿದೆ ಎಂದು ಇಬ್ಬರೂ ಪುತ್ರಿಯರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

MANGALA ANGADI SAIBABA

ಸಾಯಿಬಾಬಾ ದೇಗುಲ ದರ್ಶನ

ಇದನ್ನೂ ಓದಿ: ಸಿಡಿ ಪ್ರಕರಣದ ನಂತರ ಮೊದಲ ಬಾರಿಗೆ ಇಂದು ಗೋಕಾಕ್​ಗೆ ರಮೇಶ್ ಜಾರಕಿಹೊಳಿ ಆಗಮಿಸುವ ಸಾಧ್ಯತೆ

ವಿಚಾರಣೆ ವೇಳೆ ತಡಬಡಾಯಿಸಿದ ರಮೇಶ್ ಜಾರಕಿಹೊಳಿ; ಕೆಲ ಪ್ರಶ್ನೆಗಳಿಗೆ ಉತ್ತರಿಸಲು 4 ದಿನಗಳ ಕಾಲಾವಕಾಶ ಕೋರಿಕೆ

Published On - 11:20 am, Tue, 30 March 21

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ