AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿಗೆ ಎಸ್​ಸಿ ಎಸ್​ಟಿ ಅನುದಾನ: ರಾಜ್ಯ ಸರ್ಕಾರದ ವಿರುದ್ಧ ಸುವರ್ಣ ವಿಧಾನಸೌಧ ಬಳಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಲಿತರಿಗೆ ಮೀಸಲಿಟ್ಟ ಅನುದಾನ ನಮ್ಮ ಮಕ್ಕಳ ಶಿಕ್ಷಣಕ್ಕೆ, ಅಭಿವೃದ್ಧಿಗೆ ಮೀಸಲಿಡಬೇಕು. ನಮಗೆ ಮೀಸಲಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು ಸುವರ್ಣ ಸೌಧ ಬಳಿ ದಲಿತ ಸಂಘರ್ಷ ಸಮಿತಿಯ ಪ್ರತಿಭಟನಾ ನಿರತರು ಆಗ್ರಹಿಸಿದ್ದಾರೆ.

ಗ್ಯಾರಂಟಿಗೆ ಎಸ್​ಸಿ ಎಸ್​ಟಿ ಅನುದಾನ: ರಾಜ್ಯ ಸರ್ಕಾರದ ವಿರುದ್ಧ ಸುವರ್ಣ ವಿಧಾನಸೌಧ ಬಳಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
ಬೆಳಗಾವಿಯ ಸುವರ್ಣ ಸೌಧ (ಸಾಂದರ್ಭಿಕ ಚಿತ್ರ)
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ| Edited By: |

Updated on: Dec 06, 2023 | 5:27 PM

Share

ಬೆಳಗಾವಿ, ಡಿಸೆಂಬರ್ 6: ಎಸ್​ಸಿ ಎಸ್​ಟಿ (SC ST) ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ (Congress Government) ‘ಗ್ಯಾರಂಟಿ’ ಯೋಜನೆಗಳಿಗೆ ಬಳಕೆ ಮಾಡುತ್ತಿರುವುದರ ವಿರುದ್ಧ ರಾಜ್ಯ ದಲಿತ ಸಂಘರ್ಷ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ವಿಚಾರವಾಗಿ ಬೆಳಗಾವಿಯ ಸುವರ್ಣ ವಿಧಾನಸೌಧ (Suvarna Vidhana Soudha) ಬಳಿಯ ಸುವರ್ಣ ಗಾರ್ಡನ್ ಟೆಂಟ್‌ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿದೆ.

ದಲಿತರಿಗೆ ಮೀಸಲಿಟ್ಟ ಅನುದಾನ ನಮ್ಮ ಮಕ್ಕಳ ಶಿಕ್ಷಣಕ್ಕೆ, ಅಭಿವೃದ್ಧಿಗೆ ಮೀಸಲಿಡಬೇಕು. ನಮಗೆ ಮೀಸಲಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು ಪ್ರತಿಭಟನಾ ನಿರತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಷ್ಟೇ ಅಲ್ಲದೆ, ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಪ್ರಭುನಗರ ಜನತಾ ಪ್ಲಾಟ್‌ನ 80 ಕುಟುಂಬಗಳಿಗೆ ಸೇರಿದ ಜಮೀನು ಖಾಸಗಿಯವರಿಗೆ ವರ್ಗಾವಣೆ ಮಾಡಿರುವ ಆರೋಪಕ್ಕೆ ಸಂಬಂಧಿಸಿ 80 ಕುಟುಂಬಗಳಿಗೆ ಇ-ಸ್ವತ್ತು ಒದಗಿಸುವಂತೆ ಆಗ್ರಹಿಸಲಾಗಿದೆ.

ಇದನ್ನೂ ಓದಿ: ಐಸಿಸ್ ನಂಟು ಹೊಂದಿರುವನ ಜತೆ ವೇದಿಕೆ ಹಂಚಿಕೊಂಡ ಸಿಎಂ: ಫೋಟೋ ಬಿಡುಗಡೆ ಮಾಡಿದ ಯತ್ನಾಳ್​

ಕಿತ್ತೂರು, ಖಾನಾಪುರ ವಿಧಾನಸಭಾ ಕ್ಷೇತ್ರವನ್ನು ಬೆಳಗಾವಿಗೆ ಸೇರಿಸಲು ಆಗ್ರಹ

ಕಿತ್ತೂರು, ಖಾನಾಪುರ ವಿಧಾನಸಭಾ ಕ್ಷೇತ್ರಗಳನ್ನು ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಸೇರಿಸಲೂ ಪ್ರತಿಭಟನೆ ವೇಳೆ ಆಗ್ರಹಹಿಸಲಾಗಿದೆ. ಸದ್ಯ ಕಿತ್ತೂರು, ಖಾನಾಪುರ ವಿಧಾನಸಭಾ ಕ್ಷೇತ್ರಗಳು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಇವೆ. ಉತ್ತರ ಕನ್ನಡ ಸಂಸದರು ಕೇವಲ ಮತ ಕೇಳಲು ಬರ್ತಾರೆ, ಆಮೇಲೆ ಬರೋದೇ ಇಲ್ಲ. ಹೀಗಾಗಿ ಬೆಳಗಾವಿ ಜಿಲ್ಲೆಯ ಕಿತ್ತೂರು, ಖಾನಾಪುರ ಎರಡೂ ಕ್ಷೇತ್ರಗಳನ್ನು ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಸೇರಿಸಲು ಒತ್ತಾಯಿಸಿಯೂ ಧರಣಿ ನಡೆಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ