AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬು ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರ ಪ್ರತಿಭಟನೆ; ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ

Belagavi news: ಕಬ್ಬು ಬೆಳೆಯ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿದ ರೈತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದು, ಮೂವತ್ತಕ್ಕೂ ಹೆಚ್ಚು ರೈತರನ್ನು ಪೊಲೀಸರು ವಶಕ್ಕೆ ಪಡೆದರು.

ಕಬ್ಬು ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರ ಪ್ರತಿಭಟನೆ; ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ
ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ
TV9 Web
| Edited By: |

Updated on:Oct 21, 2022 | 1:01 PM

Share

ಬೆಳಗಾವಿ: ಕಬ್ಬಿನ ಬೆಲೆಯನ್ನು ಹೆಚ್ಚಳ ಮಾಡುವಂತೆ ಅಗ್ರಹಿಸುತ್ತಿರುವ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಹುಕ್ಕೇರಿ ತಾಲೂಕಿನ ಹತ್ತರಗಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ ರೈತರು ಬಳಿಕ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೊರಟಾಗ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಾಮಕಿ ನಡೆಯಿತು. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ರೈತರನ್ನು ವಶಕ್ಕೆ ಪಡೆದರು.

ಅರೆಬೆತ್ತಲೆಯಾಗಿ ರೈತರ ಪ್ರತಿಭಟನೆ

ಪ್ರತಿ ಟನ್ ಕಬ್ಬಿಗೆ 5500 ರೂಪಾಯಿ ದರ ನಿಗದಿ ಮಾಡುವಂತೆ ಒತ್ತಾಯಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೊರಟ ರೈತರನ್ನು ಹತ್ತರಗಿ ಟೋಲ್‌ಗೇಟ್ ಬಳಿಯೇ ಪೊಲೀಸರು ತಡೆದಿದ್ದಾರೆ. ಈ ವೇಳೆ ಅರೆಬೆತ್ತಲೆಯಾಗಿ ರೈತರು ಪ್ರತಿಭಟನೆ ನಡೆಸಿದ್ದಲ್ಲದೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ ಧರಣಿ ಕುಳಿತ ಮೂವತ್ತಕ್ಕೂ ಅಧಿಕ ರೈತರನ್ನ ಪೊಲೀಸರು ವಶಕ್ಕೆ ಪಡೆದರು. ಅದರಂತೆ ರೈತರು ಮತ್ತು ಪೊಲೀಸರ ನಡುವೆ ನೂಕಾಟ ತಳ್ಳಾಟವೂ ನಡೆದಿದ್ದು, ಪೊಲೀಸರನ್ನು ಬಳಸಿ ಪ್ರತಿಭಟನೆ ಹತ್ತಿಕ್ಕುವ ಕೆಲಸಕ್ಕೆ ಸರ್ಕಾರ ಮುಂದಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ರೈತರ ಪ್ರತಿಭಟನೆ ಹಿನ್ನೆಲೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪ್ರತಿಭಟನಾ ಸ್ಥಳದಲ್ಲಿ ಬಂದೋಬಸ್ತ್ ಮಾಡಲಾಗಿತ್ತು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:01 pm, Fri, 21 October 22

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ