AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ರೈತರ ಪ್ರತಿಭಟನಾ ಹಾದಿಯೂ ಭಿನ್ನ, ನಡಿಗೆಯೂ ಭಿನ್ನ

ಬೆಳಗಾವಿ: ಕೃಷ್ಣಾ ನದಿಯ ಪ್ರವಾಹಕ್ಕೆ ಸಿಕ್ಕಿ ಜಿಲ್ಲೆಯ ರೈತರ ಜೀವನ ಪತರಗುಟ್ಟಿದೆ. ಪರಿಹಾರವನ್ನೇ ಕಾಣದೆ ಜನ ಜೀವನ ತತ್ತರಿಸಿದೆ. ಈ ಮಧ್ಯೆ, ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಕಾಂಗ್ರೆಸ್ ಭಾರಿ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಸಲುವಾಗಿ ರೈತನೊಬ್ಬ ತನ್ನ ಕಾಲಿಗೆ ಕಟ್ಟಿಗೆ ಕಟ್ಟಿಕೊಂಡು ಜಮಖಂಡಿಯಿಂದ ನಗರಕ್ಕೆ ನಡೆದುಬಂದಿದ್ದಾನೆ. ಪ್ರತಿಭಟನೆಯ ಹಾದಿಯೂ ಭಿನ್ನ, ನಡಿಗೆಯೂ ಭಿನ್ನ ಜಮಖಂಡಿ‌ ಮೂಲದ ರೈತ ಬಾಹುಬಲಿ ನೆರೆ ಪರಿಹಾರ ಕೋರಿ ಹೀಗೆ ವಿಭಿನ್ನ ನಡಿಗೆ ಹಾಕಿದ್ದಾನೆ. ಮಾಜಿ ಸಚಿವ ಎಸ್.ಆರ್.ಪಾಟೀಲ್ ಮತ್ತು ಶಾಸಕ ಆನಂದ […]

ಬೆಳಗಾವಿ ರೈತರ ಪ್ರತಿಭಟನಾ ಹಾದಿಯೂ ಭಿನ್ನ, ನಡಿಗೆಯೂ ಭಿನ್ನ
ಸಾಧು ಶ್ರೀನಾಥ್​
|

Updated on: Sep 24, 2019 | 11:24 AM

Share

ಬೆಳಗಾವಿ: ಕೃಷ್ಣಾ ನದಿಯ ಪ್ರವಾಹಕ್ಕೆ ಸಿಕ್ಕಿ ಜಿಲ್ಲೆಯ ರೈತರ ಜೀವನ ಪತರಗುಟ್ಟಿದೆ. ಪರಿಹಾರವನ್ನೇ ಕಾಣದೆ ಜನ ಜೀವನ ತತ್ತರಿಸಿದೆ. ಈ ಮಧ್ಯೆ, ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಕಾಂಗ್ರೆಸ್ ಭಾರಿ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಸಲುವಾಗಿ ರೈತನೊಬ್ಬ ತನ್ನ ಕಾಲಿಗೆ ಕಟ್ಟಿಗೆ ಕಟ್ಟಿಕೊಂಡು ಜಮಖಂಡಿಯಿಂದ ನಗರಕ್ಕೆ ನಡೆದುಬಂದಿದ್ದಾನೆ.

ಪ್ರತಿಭಟನೆಯ ಹಾದಿಯೂ ಭಿನ್ನ, ನಡಿಗೆಯೂ ಭಿನ್ನ ಜಮಖಂಡಿ‌ ಮೂಲದ ರೈತ ಬಾಹುಬಲಿ ನೆರೆ ಪರಿಹಾರ ಕೋರಿ ಹೀಗೆ ವಿಭಿನ್ನ ನಡಿಗೆ ಹಾಕಿದ್ದಾನೆ. ಮಾಜಿ ಸಚಿವ ಎಸ್.ಆರ್.ಪಾಟೀಲ್ ಮತ್ತು ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ಆಗಮಿಸಿದ ರೈತ ಬಾಹುಬಲ  ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದಾನೆ.

ನೆರೆ ಪರಿಹಾರಕ್ಕಾಗಿ ಆಗ್ರಹಿಸಿ, ಬಾಗಲಕೋಟೆ ಜಿಲ್ಲೆಯಿಂದ ಬೆಳಗಾವಿಗೆ ಆಗಮಿಸಿ ಕಾಂಗ್ರೆಸ್ ಪ್ರತಿಭಟನಾ ರ್ಯಾಲಿ ನಡೆಸಿದೆ. ಬಾಗಲಕೋಟೆ ಜಿಲ್ಲೆಯೂ ಪ್ರವಾಹಕ್ಕೆ ತುತ್ತಾಗಿದ್ದು, ಶಾಸಕ‌ ಆನಂದ ನ್ಯಾಮಗೌಡರ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ರ್ಯಾಲಿ, ಸೆ.21ರಂದು ಜಮಖಂಡಿಯಿಂದ ಹೊರಟಿತ್ತು. ಕಾಂಗ್ರೆಸ್ ಬಾವುಟ ಹಾಕಿಕೊಂಡು ಹಲಗಿ ಮತ್ತು ಸನಾಯಿ ಬಾರಿಸುತ್ತಾ ಸ್ಥಳೀಯ ಕೈ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಕಾಂಗ್ರೆಸ್ ರ್ಯಾಲಿಗೆ ಚುನಾವಣಾ ನೀತಿಸಂಹಿತೆ ತೊಡರುಗಾಲು ನೆರೆ ಪರಿಹಾರ ತರುವಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯತೆಗೆ ರ್ಯಾಲಿಯಲ್ಲಿ ಭಾರಿ ಖಂಡನೆ ವ್ಯಕ್ತವಾಗಿದೆ. ಆದ್ರೆ ಕಾಂಗ್ರೆಸ್ ಪಕ್ಷದ ಈ ಪ್ರತಿಭಟನಾ ರ್ಯಾಲಿಗೆ ಚುನಾವಣಾ ನೀತಿಸಂಹಿತೆ ಅಡ್ಡಿಯಾಗಿದೆ. ಡಿಸಿ ಕಚೇರಿ ಮುಂದೆ ರ್ಯಾಲಿಗೆ ಅನುಮತಿ ಸಿಗದ ಹಿನ್ನೆಲೆ, ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನಾ ರ್ಯಾಲಿ ಮುಕ್ತಾಯಗೊಳ್ಳುವ ಅಂದಾಜಿದೆ.

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್