Gamblers jump into Malaprabha river ಜೂಜಾಡುತ್ತಿದ್ದ ವೇಳೆ ಪೊಲೀಸ್ ದಾಳಿಗೆ ಹೆದರಿ ಮಲಪ್ರಭಾ ನದಿಗೆ ಹಾರಿದ ಇಬ್ಬರು

Gamblers jump into Malaprabha river ಬೆಳಗಾವಿ ಜಿಲ್ಲೆಯ ರಾಮದುರ್ಗ ಹೊರವಲಯದಲ್ಲಿ ಜೂಜಾಡುತ್ತಿದ್ದಾಗ ಪೊಲೀಸರ ದಾಳಿಗೆ ಹೆಸರಿ, ಅವರಿಂದ ತಪ್ಪಿಸಿಕೊಳ್ಳುವ ಧಾವಂತದಲ್ಲಿ 6 ಯುವಕರು ಮಲಪ್ರಭಾ ನದಿಗೆ ಹಾರಿದ್ದಾರೆ. 6 ಜನರ ಪೈಕಿ ಇಬ್ಬರು ನಾಪತ್ತೆಯಾಗಿದ್ದಾರೆ. ಮಂಜು ಬಂಡಿವಡ್ಡರ್ (30) ಮತ್ತು ಸಮೀರ್ ಬಟಕುರ್ಕಿ (22) ನೀರುಪಾಲು ಆಗಿದ್ದಾರೆ.

Gamblers jump into Malaprabha river ಜೂಜಾಡುತ್ತಿದ್ದ ವೇಳೆ ಪೊಲೀಸ್ ದಾಳಿಗೆ ಹೆದರಿ ಮಲಪ್ರಭಾ ನದಿಗೆ ಹಾರಿದ ಇಬ್ಬರು
ಜೂಜಾಡುತ್ತಿದ್ದ ವೇಳೆ ಪೊಲೀಸ್ ದಾಳಿಗೆ ಹೆದರಿ ಮಲಪ್ರಭಾ ನದಿಗೆ ಹಾರಿದ ಇಬ್ಬರು

Updated on: Feb 08, 2021 | 5:09 PM

ಬೆಳಗಾವಿ:ಜಿಲ್ಲೆಯ ರಾಮದುರ್ಗ ಹೊರವಲಯದಲ್ಲಿ ಜೂಜಾಡುತ್ತಿದ್ದಾಗ ಪೊಲೀಸರ ದಾಳಿಗೆ ಹೆಸರಿ, ಅವರಿಂದ ತಪ್ಪಿಸಿಕೊಳ್ಳುವ ಧಾವಂತದಲ್ಲಿ 6 ಯುವಕರು ಮಲಪ್ರಭಾ ನದಿಗೆ ಹಾರಿದ್ದಾರೆ. 6 ಜನರ ಪೈಕಿ ಇಬ್ಬರು ನಾಪತ್ತೆಯಾಗಿದ್ದಾರೆ. ಮಂಜು ಬಂಡಿವಡ್ಡರ್ (30) ಮತ್ತು ಸಮೀರ್ ಬಟಕುರ್ಕಿ (22) ನೀರುಪಾಲು ಆಗಿದ್ದಾರೆ.

ರಾಮದುರ್ಗ ಹೊರವಲಯದಲ್ಲಿ ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಪೊಲೀಸರು ಬಂಧಿಸುತ್ತಾರೆಂಬ ಭಯದಿಂದ ನದಿಗೆ ಹಾರಿದ್ದ 6 ಜನರ ಪೈಕಿ ನಾಲ್ವರು ಈಜಿ ದಡ ಸೇರಿದ್ದಾರೆ. ನೀರುಪಾಲಾಗಿರುವ ಇಬ್ಬರು ಯುವಕರಿಗಾಗಿ ಅಗ್ನಿಶಾಮಕ, ಪೊಲೀಸರಿಂದ ಶೋಧಕಾರ್ಯ ಮುಂದುವರಿದಿದೆ. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.