Gamblers jump into Malaprabha river ಜೂಜಾಡುತ್ತಿದ್ದ ವೇಳೆ ಪೊಲೀಸ್ ದಾಳಿಗೆ ಹೆದರಿ ಮಲಪ್ರಭಾ ನದಿಗೆ ಹಾರಿದ ಇಬ್ಬರು

Gamblers jump into Malaprabha river ಬೆಳಗಾವಿ ಜಿಲ್ಲೆಯ ರಾಮದುರ್ಗ ಹೊರವಲಯದಲ್ಲಿ ಜೂಜಾಡುತ್ತಿದ್ದಾಗ ಪೊಲೀಸರ ದಾಳಿಗೆ ಹೆಸರಿ, ಅವರಿಂದ ತಪ್ಪಿಸಿಕೊಳ್ಳುವ ಧಾವಂತದಲ್ಲಿ 6 ಯುವಕರು ಮಲಪ್ರಭಾ ನದಿಗೆ ಹಾರಿದ್ದಾರೆ. 6 ಜನರ ಪೈಕಿ ಇಬ್ಬರು ನಾಪತ್ತೆಯಾಗಿದ್ದಾರೆ. ಮಂಜು ಬಂಡಿವಡ್ಡರ್ (30) ಮತ್ತು ಸಮೀರ್ ಬಟಕುರ್ಕಿ (22) ನೀರುಪಾಲು ಆಗಿದ್ದಾರೆ.

Gamblers jump into Malaprabha river ಜೂಜಾಡುತ್ತಿದ್ದ ವೇಳೆ ಪೊಲೀಸ್ ದಾಳಿಗೆ ಹೆದರಿ ಮಲಪ್ರಭಾ ನದಿಗೆ ಹಾರಿದ ಇಬ್ಬರು
ಜೂಜಾಡುತ್ತಿದ್ದ ವೇಳೆ ಪೊಲೀಸ್ ದಾಳಿಗೆ ಹೆದರಿ ಮಲಪ್ರಭಾ ನದಿಗೆ ಹಾರಿದ ಇಬ್ಬರು
ಸಾಧು ಶ್ರೀನಾಥ್​

Updated on: Feb 08, 2021 | 5:09 PM

ಬೆಳಗಾವಿ:ಜಿಲ್ಲೆಯ ರಾಮದುರ್ಗ ಹೊರವಲಯದಲ್ಲಿ ಜೂಜಾಡುತ್ತಿದ್ದಾಗ ಪೊಲೀಸರ ದಾಳಿಗೆ ಹೆಸರಿ, ಅವರಿಂದ ತಪ್ಪಿಸಿಕೊಳ್ಳುವ ಧಾವಂತದಲ್ಲಿ 6 ಯುವಕರು ಮಲಪ್ರಭಾ ನದಿಗೆ ಹಾರಿದ್ದಾರೆ. 6 ಜನರ ಪೈಕಿ ಇಬ್ಬರು ನಾಪತ್ತೆಯಾಗಿದ್ದಾರೆ. ಮಂಜು ಬಂಡಿವಡ್ಡರ್ (30) ಮತ್ತು ಸಮೀರ್ ಬಟಕುರ್ಕಿ (22) ನೀರುಪಾಲು ಆಗಿದ್ದಾರೆ.

ರಾಮದುರ್ಗ ಹೊರವಲಯದಲ್ಲಿ ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಪೊಲೀಸರು ಬಂಧಿಸುತ್ತಾರೆಂಬ ಭಯದಿಂದ ನದಿಗೆ ಹಾರಿದ್ದ 6 ಜನರ ಪೈಕಿ ನಾಲ್ವರು ಈಜಿ ದಡ ಸೇರಿದ್ದಾರೆ. ನೀರುಪಾಲಾಗಿರುವ ಇಬ್ಬರು ಯುವಕರಿಗಾಗಿ ಅಗ್ನಿಶಾಮಕ, ಪೊಲೀಸರಿಂದ ಶೋಧಕಾರ್ಯ ಮುಂದುವರಿದಿದೆ. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us