ಮತ್ತೆ ಮುನಿಸಿಕೊಂಡನಾ ಮಳೆರಾಯ: ಬೆಳಗಾವಿಯಲ್ಲಿ ವೃದ್ಧನ ಸಾವು

ಬೆಳಗಾವಿ: ಇತ್ತೀಚೆಗಷ್ಟೇ ರಾಜ್ಯದಲ್ಲಿ ಮಳೆರಾಯನ ಅವಾಂತರ ಎಲ್ಲೆ ಮೀರಿತ್ತು. ಅದರಲ್ಲೂ ಮಹರಾಷ್ಟ್ರದ ಎಲ್ಲೆ ಮೀರಿ ರಾಜ್ಯದೊಳಕ್ಕೆ ನುಸುಳಿದ್ದ ವರುಣ, ಭಾರೀ ಅವಾಂತರ ಸೃಷ್ಟಸಿದ್ದ. ಇನ್ನೂ ಆ ಮಳೆಯ ಹೊಡೆತದಿಂದ ಸುಧಾರಿಸಿಕೊಂಡಿಲ್ಲ ಅನ್ನುತ್ತಿರುವಾಗ ರಾಜ್ಯದಲ್ಲಿ ಮತ್ತೆ ಮಳೆಯ ಕಾಟ ಶುರುವಾಗಿದೆ. ಬೆಳಗಾವಿಯಲ್ಲಿ ಮಳೆ ತೇವದಿಂದ ಗೋಡೆ ಕುಸಿದು ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಸಮಳಗಿ ಗ್ರಾಮದಲ್ಲಿ ಭಾರಿ ಮಳೆಗೆ ಗೋಡೆ ಕುಸಿದು ವೃದ್ಧ ಸಾವಿಗೀಡಾಗಿದ್ದಾರೆ. ಮನೆಯಲ್ಲಿ ಮಲಗಿದ್ದ ವೃದ್ಧ ಲಿಯಾಕತ್ ಮಕಾಂದರ್ ಅಸುನೀಗಿದ್ದಾರೆ. ನಂದಗಡ ಪೊಲೀಸ್ ಠಾಣಾ […]

ಮತ್ತೆ ಮುನಿಸಿಕೊಂಡನಾ ಮಳೆರಾಯ: ಬೆಳಗಾವಿಯಲ್ಲಿ ವೃದ್ಧನ ಸಾವು
ಸಾಧು ಶ್ರೀನಾಥ್​

Updated on: Oct 21, 2019 | 12:42 PM

ಬೆಳಗಾವಿ: ಇತ್ತೀಚೆಗಷ್ಟೇ ರಾಜ್ಯದಲ್ಲಿ ಮಳೆರಾಯನ ಅವಾಂತರ ಎಲ್ಲೆ ಮೀರಿತ್ತು. ಅದರಲ್ಲೂ ಮಹರಾಷ್ಟ್ರದ ಎಲ್ಲೆ ಮೀರಿ ರಾಜ್ಯದೊಳಕ್ಕೆ ನುಸುಳಿದ್ದ ವರುಣ, ಭಾರೀ ಅವಾಂತರ ಸೃಷ್ಟಸಿದ್ದ. ಇನ್ನೂ ಆ ಮಳೆಯ ಹೊಡೆತದಿಂದ ಸುಧಾರಿಸಿಕೊಂಡಿಲ್ಲ ಅನ್ನುತ್ತಿರುವಾಗ ರಾಜ್ಯದಲ್ಲಿ ಮತ್ತೆ ಮಳೆಯ ಕಾಟ ಶುರುವಾಗಿದೆ. ಬೆಳಗಾವಿಯಲ್ಲಿ ಮಳೆ ತೇವದಿಂದ ಗೋಡೆ ಕುಸಿದು ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಸಮಳಗಿ ಗ್ರಾಮದಲ್ಲಿ ಭಾರಿ ಮಳೆಗೆ ಗೋಡೆ ಕುಸಿದು ವೃದ್ಧ ಸಾವಿಗೀಡಾಗಿದ್ದಾರೆ. ಮನೆಯಲ್ಲಿ ಮಲಗಿದ್ದ ವೃದ್ಧ ಲಿಯಾಕತ್ ಮಕಾಂದರ್ ಅಸುನೀಗಿದ್ದಾರೆ. ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 12:34 pm, Mon, 21 October 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us