AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯ ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನ ಪ್ರವಾಸ ಭಾಗ್ಯ: ಹಾಜರಾತಿ ಹೆಚ್ಚಿಸಲು ಶಿಕ್ಷಕನ ವಿನೂತನ ಕೆಲಸ

ಬೆಳಗಾವಿಯ ಸೋನಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಪ್ರಕಾಶ್ ದೇವಣ್ಣವರ್​ ಅವರು ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಿಸುವ ನಿಟ್ಟಿನಲ್ಲಿ ವಿಮಾನ ಪ್ರವಾಸವನ್ನು ಏರ್ಪಡಿಸಿದ್ದಾರೆ. 17 ವಿದ್ಯಾರ್ಥಿಗಳು ಆಯ್ಕೆ ಆಗಿದ್ದು, ಎರಡೂವರೆ ಲಕ್ಷ ರೂಪಾಯಿ ವೆಚ್ಚದ ಈ ಪ್ರವಾಸದಿಂದ ಶಾಲಾ ಹಾಜರಾತಿಯಲ್ಲಿ ಗಮನಾರ್ಹ ಏರಿಕೆಯಾಗಿದೆ ಎಂದು ಶಿಕ್ಷಕರು ತಿಳಿಸಿದ್ದಾರೆ.

ಬೆಳಗಾವಿಯ ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನ ಪ್ರವಾಸ ಭಾಗ್ಯ: ಹಾಜರಾತಿ ಹೆಚ್ಚಿಸಲು ಶಿಕ್ಷಕನ ವಿನೂತನ ಕೆಲಸ
ಬೆಳಗಾವಿಯ ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನ ಪ್ರವಾಸ ಭಾಗ್ಯ: ಹಾಜರಾತಿ ಹೆಚ್ಚಿಸಲು ಶಿಕ್ಷಕನ ವಿನೂತನ ಕೆಲಸ
ಸಹದೇವ್​ ಮಾನೆ
| Edited By: |

Updated on: Nov 08, 2024 | 3:11 PM

Share

ಬೆಳಗಾವಿ, ನವೆಂಬರ್​ 08: ಸರ್ಕಾರಿ ಶಾಲೆಗೆ ವಿದ್ಯಾರ್ಥಿಗಳು ಬರುತ್ತಿಲ್ಲ ಎಂಬ ಮಾತಿದೆ. ಹೀಗಾಗಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡುತ್ತಿದೆ. ಶಿಕ್ಷಕರು ಕೂಡ ಮನೆ ಮನೆಗೆ ತೆರಳಿ ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸುವಂತೆ ಮನವಿ ಮಾಡಿದ್ದು ಇದೆ. ಆದರೆ ಇಲ್ಲೊಬ್ಬರು ಶಿಕ್ಷಕರು ಮಕ್ಕಳ ಹಾಜರಾತಿ ಹೆಚ್ಚಿಸುವ ಸಲುವಾಗಿ ವಿನೂತನ ಪ್ರಯತ್ನ ಮಾಡಿದ್ದಾರೆ. ಅದೇನೆಂದರೆ ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನ (Flight) ಪ್ರವಾಸ ಭಾಗ್ಯ ಕಲ್ಪಿಸಿದ್ದಾರೆ.

17 ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ ಭಾಗ್ಯ 

ಹೌದು. ಬೆಳಗಾವಿ ತಾಲೂಕಿನ ಸೋನಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಮಕ್ಕಳಿಗೆ ವಿಮಾನ ಪ್ರವಾಸ ಭಾಗ್ಯ ಸಿಕ್ಕಿದೆ. ನಿಯಮಿತವಾಗಿ ಶಾಲೆ ಬರುತ್ತಿದ್ದ ಒಟ್ಟು 17 ವಿದ್ಯಾರ್ಥಿಗಳು ಆಯ್ಕೆ ಮಾಡಲಾಗಿದ್ದು, ಎರಡೂವರೆ ಲಕ್ಷ ರೂ. ಖರ್ಚು ಮಾಡಿ ಶಿಕ್ಷಕ ಪ್ರಕಾಶ್ ದೇವಣ್ಣವರ್​ ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ: ಶಾಲಾ ವಿದ್ಯಾರ್ಥಿಗಳಿಗಿಲ್ಲ ಶೂ ಭಾಗ್ಯ: ಕಂಪನಿ ವಿರುದ್ಧ ದಂಡಾಸ್ತ್ರಕ್ಕೆ ಮುಂದಾದ ಬಿಬಿಎಂಪಿ

ಶಿಕ್ಷಕ ಪ್ರಕಾಶ್ ದೇವಣ್ಣವರ್​​ ವಿದ್ಯಾರ್ಥಿಗಳಿಂದ ತಲಾ ಮೂರು ಸಾವಿರ ರೂ. ಹಣ ಪಡೆದುಕೊಂಡಿದ್ದು, ಇನ್ನೂಳಿದ ಎರಡು ಲಕ್ಷ ರೂ. ಸ್ವಂತ ಹಣ ಖರ್ಚು ಮಾಡಿ ಎರಡು ದಿನದ ಪ್ರವಾಸ ಕರೆದುಕೊಂಡು ಹೋಗಿದ್ದಾರೆ.

ನಿನ್ನೆ ಸಂಜೆ ಬೆಳಗಾವಿಯಿಂದ ಹೈದ್ರಾಬಾದ್ ಹೋಗಿರುವ ಮಕ್ಕಳು. ಹೈದ್ರಾಬಾದ್​​ನಲ್ಲಿ ರಾಮೋಜಿ ಫಿಲ್ಮ್ ಸಿಟಿ, ಚಾರ್ ಮಿನಾರ್, ಗೋಲ್ಕೊಂಡ ಕೋಟೆ ಸೇರಿ ಹಲವು ಕಡೆ ಪ್ರವಾಸ ಮಾಡಲಿದ್ದಾರೆ. ಬಳಿಕ ನಾಳೆ ಬೆಳಗಾವಿಗೆ ವಾಪಾಸ್ ಆಗಲಿದ್ದಾರೆ.

ಇದನ್ನೂ ಓದಿ: ಗುಡ್​ನ್ಯೂಸ್: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಫ್ರೀ ಟ್ಯೂಷನ್ ಭಾಗ್ಯ.. !

ಗ್ರಾಮೀಣ ಭಾಗದಲ್ಲಿ ಶಿಕ್ಷಣಕ್ಕೆ ಹೆಚ್ಚಾಗಿ ಆಸಕ್ತಿ ತೋರುತ್ತಿಲ್ಲ. ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಕೂಡ ಕಡಿಮೆ ಇದೆ. ಹೀಗಾಗಿ ಹಾಜರಾತಿ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ವಿಮಾನ ಪ್ರವಾಸ ಭಾಗ್ಯವನ್ನು ನೀಡಲಾಯಿತು. ಇದರಿಂದ ಮಕ್ಕಳ ಸಂಖ್ಯೆ ಹೆಚ್ಚಾಗಿದೆ ಎಂದು ಶಿಕ್ಷಕ ಪ್ರಕಾಶ್ ದೇವಣ್ಣವರ್​ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ