AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನೆ ಪುಂಡಾಟ.. 2ನೇ ದಿನವೂ ಕೆಎಸ್ಅರ್‌ಟಿಸಿ ಬಸ್‌ ಸಂಚಾರ ಸ್ಥಗಿತ

ಬೆಳಗಾವಿ ಮಾರ್ಗವಾಗಿ ನಿತ್ಯ ಮಹಾರಾಷ್ಟ್ರಕ್ಕೆ 400ಕ್ಕೂ ಹೆಚ್ಚು ಬಸ್‌ಗಳ ಸಂಚರಿಸುತ್ತಿದ್ದವು. ಮಹಾರಾಷ್ಟ್ರದಿಂದ ಬೆಳಗಾವಿಗೆ 58 ಬಸ್‌ಗಳ ಬರುತ್ತಿದ್ದವು. ಆದ್ರೆ ಶಿವಸೇನೆ ಪುಂಡಾಟದಿಂದಾಗಿ ಕರ್ನಾಟಕ, ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತಗೊಂಡಿದೆ.

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನೆ ಪುಂಡಾಟ.. 2ನೇ ದಿನವೂ ಕೆಎಸ್ಅರ್‌ಟಿಸಿ ಬಸ್‌ ಸಂಚಾರ ಸ್ಥಗಿತ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Mar 14, 2021 | 11:24 AM

Share

ಬೆಳಗಾವಿ: ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನೆ ಪುಂಡಾಟ ಮುಂದುವರೆದ ಹಿನ್ನೆಲೆಯಲ್ಲಿ 2ನೇ ದಿನವೂ ಕೆಎಸ್​ಆರ್​‌ಟಿಸಿ ಬಸ್‌ ಸಂಚಾರ ಸ್ಥಗಿತಗೊಂಡಿದೆ. ಕರ್ನಾಟಕ ಗಡಿವರೆಗೆ ಮಾತ್ರ KSRTC ಬಸ್ ಸಂಚಾರವಿದ್ದು ಕರ್ನಾಟಕ, ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಜನ ಸಾಮಾನ್ಯರು ಕಷ್ಟಪಡುವಂತಾಗಿದೆ.

ಬೆಳಗಾವಿ ಮಾರ್ಗವಾಗಿ ನಿತ್ಯ ಮಹಾರಾಷ್ಟ್ರಕ್ಕೆ 400ಕ್ಕೂ ಹೆಚ್ಚು ಬಸ್‌ಗಳ ಸಂಚರಿಸುತ್ತಿದ್ದವು. ಮಹಾರಾಷ್ಟ್ರದಿಂದ ಬೆಳಗಾವಿಗೆ 58 ಬಸ್‌ಗಳ ಬರುತ್ತಿದ್ದವು. ಆದ್ರೆ ಶಿವಸೇನೆ ಪುಂಡಾಟದಿಂದಾಗಿ ಕರ್ನಾಟಕ, ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತಗೊಂಡಿದೆ. ಗಡಿ ಭಾಗದವರೆಗೆ ಮಾತ್ರ ಕರ್ನಾಟಕ ಸಾರಿಗೆ ಬಸ್‌ಗಳ ಸಂಚರಿಸುತ್ತಿವೆ. ನಿನ್ನೆ(ಮಾರ್ಚ್ 13) ಕೊಲ್ಹಾಪುರ, ಕಾಗಲ್ ಗ್ರಾಮದಲ್ಲಿ ಶಿವಸೇನೆ ಮತ್ತೆ ಪುಂಡಾಟ‌ ಮೆರೆದಿತ್ತು. NWKRTC ಚಿಕ್ಕೋಡಿ ವಿಭಾಗದ ಬಸ್‌ಗೆ ಕಪ್ಪು ಮಸಿ ಬಳೆದಿತ್ತು.

ಶಿವಸೇನೆ ಕೆಲ ದಿನಗಳ ಹಿಂದೆ ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜ ತೆರವಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ ರದ್ಧಾಂತ ಮಾಡಿದ್ದರು. ಬಳಿಕ ಕೊಲ್ಹಾಪುರದಲ್ಲಿ ಮಳಿಗೆಗಳ ಮೇಲಿದ್ದ ಕನ್ನಡದ ಅಕ್ಷರಗಳಿಗೆ ಕಪ್ಪು ಮಸಿ ಬಳಿದು ದರ್ಪ ಪ್ರದರ್ಶಿಸಿದ್ದರು. ಮಹಾಲಕ್ಷ್ಮಿ ಯಾತ್ರಿ ನಿವಾಸದ ಕಟ್ಟಡ ಸೇರಿದಂತೆ ಮಳಿಗೆಗಳಲ್ಲಿ ಹಾಕಿದ್ದ ಕನ್ನಡ ಅಕ್ಷರಗಳಿರುವ ಬೋರ್ಡ್​ಗಳಿಗೆ ಕಪ್ಪು ಮಸಿ ಬಳಿದು ಮಳಿಗೆ ಮಾಲೀಕರಿಗೆ ಶಿವಸೇನೆ ಮುಖಂಡ ಸಂಜಯ್ ಪವಾರ್‌ ಬೆದರಿಕೆ ಒಡ್ಡಿದ್ದರು. ಈ ರೀತಿ ದಿನೇ ದಿನೇ ಶಿವಸೇನೆ ಪುಂಡಾಟ ಹೆಚ್ಚಾಗುತ್ತಿದೆ.

ಇದನ್ನೂ ಓದಿ: ಬೆಳಗಾವಿ: ಕನ್ನಡ ಅಕ್ಷರಗಳಿಗೆ ಕಪ್ಪು ಮಸಿ ಬಳಿದು ಶಿವಸೇನೆ ಪುಂಡಾಟ

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ