AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ-ಮೈಸೂರು ವಿಶ್ವಮಾನವ ಎಕ್ಸಪ್ರೆಸ್​​ ಪುನಾರಂಭ ಸೇರಿ, ಇತರೆ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ: ಇಲ್ಲಿದೆ ಮಾಹಿತಿ

ಹಾವೇರಿ ಮತ್ತು ಬ್ಯಾಡಗಿ ನಡುವಿನ ರೈಲ್ವೆ ಹಳಿಗಳಲ್ಲಿ ನಡೆಯುತ್ತಿರುವ ನಿರ್ವಹಣೆ ಕಾರ್ಯದಿಂದಾಗಿ, ಹಲವು ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆಗಳಾಗಿವೆ. ವಿಶ್ವಮಾನವ ಎಕ್ಸ್‌ಪ್ರೆಸ್ ಸೇರಿದಂತೆ ಹಲವು ರೈಲುಗಳು ತಡವಾಗಿ ಹೊರಡುತ್ತಿವೆ ಅಥವಾ ಮಾರ್ಗ ಮಧ್ಯೆ ನಿಲ್ಲಿಸಲಾಗುತ್ತಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ. ಬದಲಾವಣೆಯಾದ ವೇಳಾಪಟ್ಟಿ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಳಗಾವಿ-ಮೈಸೂರು ವಿಶ್ವಮಾನವ ಎಕ್ಸಪ್ರೆಸ್​​ ಪುನಾರಂಭ ಸೇರಿ, ಇತರೆ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ: ಇಲ್ಲಿದೆ ಮಾಹಿತಿ
ವಿಶ್ವಮಾನವ ಎಕ್ಸಪ್ರೆಸ್ (ಸಂಗ್ರಹ ಚಿತ್ರ)
ಗಂಗಾಧರ​ ಬ. ಸಾಬೋಜಿ
|

Updated on: May 06, 2025 | 8:15 AM

Share

ಬೆಂಗಳೂರು, ಮೇ 06: ವಿಶ್ವಮಾನವ ಎಕ್ಸ್‌ಪ್ರೆಸ್ (Vishwamanava Express) ಪುನರಾರಂಭ ಮತ್ತು ಇತರೆ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆಗೆ ಬಗ್ಗೆ ನೈರುತ್ಯ ರೈಲ್ವೆ (SWR) ಮಾಹಿತಿ ನೀಡಿದೆ. ಹಾವೇರಿ ಮತ್ತು ಬ್ಯಾಡಗಿ ನಿಲ್ದಾಣಗಳ ನಡುವಿನ ರೈಲ್ವೆ ಹಳಿಯಲ್ಲಿ ಅಗತ್ಯ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳು ನಡೆಯುತ್ತಿರುವುದರಿಂದ, ಕೆಲ ರೈಲುಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗುತ್ತಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ. ಹಾಗಾದರೆ ಯಾವೆಲ್ಲಾ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಯಾವೆಲ್ಲಾ ರೈಲುಗಳ ವೇಳಾಪಟ್ಟಿ ಬದಲಾವಣೆ

ಈ ಬಗ್ಗೆ ನೈರುತ್ಯ ರೈಲ್ವೆ ತನ್ನ ಅಧಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಯಾವೆಲ್ಲಾ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಆಗಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಇದನ್ನೂ ಓದಿ
Image
ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ
Image
ಜಿಲೇಬಿಯಲ್ಲಿ ಕೃತಕ ಬಣ್ಣ ಶಂಕೆ: ಮಾದರಿ ಸಂಗ್ರಹಕ್ಕೆ ಮುಂದಾದ ಆಹಾರ ಇಲಾಖೆ
Image
ಬೆಂಗಳೂರು ಮೆಟ್ರೋ ನಿಲ್ದಾಣದ ಆವರಣದಲ್ಲಿ ಉಗುಳಿದ ಪ್ರಯಾಣಿಕನಿಗೆ ದಂಡ
Image
ಮನೆ ಬಾಗಿಲಿಗೆ ಡ್ರೋನ್ ಡೆಲಿವರಿ! ಬೆಂಗಳೂರು ಅಪಾರ್ಟ್​ಮೆಂಟ್ ಹೊಸ ಪ್ರಯೋಗ

ನೈರುತ್ಯ ರೈಲ್ವೆ ಟ್ವೀಟ್​

  • ರೈಲು ಸಂಖ್ಯೆ 17325: ಬೆಳಗಾವಿ-ಮೈಸೂರು ವಿಶ್ವಮಾನವ ದೈನಂದಿನ ಎಕ್ಸ್‌ಪ್ರೆಸ್ ರೈಲು ಈ ಮೊದಲು ಮೇ 5, 6, 8, 9, 11, 12, 13, 15 ಮತ್ತು 16, 2025ರಂದು ಬೆಳಗಾವಿಯಿಂದ 60 ನಿಮಿಷಗಳ ಕಾಳ ತಡವಾಗಿ ಹೊರಡಲಿದೆ. ಮತ್ತು ಮಾರ್ಗ ಮಧ್ಯೆ 45 ನಿಮಿಷಗಳ ಕಾಲ ನಿಲ್ಲಿಸಲಾಗುವುದು ಎಂದು ತಿಳಿಸಲಾಗಿತ್ತು. ಆದರೆ, ಈಗ ಈ ರೈಲು ಮೇ 5, 2025 ರಿಂದ ತನ್ನ ಮೊದಲಿನ ವೇಳಾಪಟ್ಟಿಯ ಪ್ರಕಾರ ಎಂದಿನಂತೆ ಸಂಚಾರ ಆರಂಭಿಸಲಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರು ಮೆಟ್ರೋ ನಿಲ್ದಾಣದ ಆವರಣದಲ್ಲಿ ಉಗುಳಿದ ಪ್ರಯಾಣಿಕ: ದಂಡ ವಿಧಿಸಿದ ಬಿಎಂಆರ್​ಸಿಎಲ್​​

  • ಮೇ 6, 8, 13, 15 ಮತ್ತು 20, 2025 ರಂದು ಬಿಕಾನೇರ್​ನಿಂದ ಹೊರಡುವ ರೈಲು ಸಂಖ್ಯೆ 16588 ಬಿಕಾನೇರ್​-ಯಶವಂತಪುರ ದ್ವಿ-ಸಾಪ್ತಾಹಿಕ ಎಕ್ಸಪ್ರೆಸ್​​​​ ರೈಲು ಮಾರ್ಗ ಮಧ್ಯೆ 75 ನಿಮಿಷಗಳ ಕಾಲ ನಿಲ್ಲಿಸಲಾಗುವುದು.

ಇದನ್ನೂ ಓದಿ: ಮನೆ ಬಾಗಿಲಿಗೆ ಡ್ರೋನ್ ಡೆಲಿವರಿ! ಹೊಸ ಪ್ರಯೋಗ ಆರಂಭಿಸಿದ ಬೆಂಗಳೂರು ಅಪಾರ್ಟ್​ಮೆಂಟ್

  • ಮೇ 5, 6, 8, 9, 11, 12, 13, 15, 16, 18, 19, 20, 22 ಮತ್ತು 23, 2025 ರಂದು ಹೊರಡುವ ರೈಲು ಸಂಖ್ಯೆ 17347 ಹುಬ್ಬಳ್ಳಿ-ಚಿತ್ರದುರ್ಗ ಡೈಲಿ ಎಕ್ಸ್‌ಪ್ರೆಸ್ ಹುಬ್ಬಳ್ಳಿಯಿಂದ 75 ನಿಮಿಷಗಳ ಕಾಲ ತಡವಾಗಿ ಹೊರಡಲಿದೆ ಮತ್ತು ಮಾರ್ಗ ಮಧ್ಯೆ 25 ನಿಮಿಷಗಳ ಕಾಲ ನಿಲ್ಲಿಸಲಾಗುವುದು ಎಂದು ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೀಗರನ್ನು ಒಮ್ಮೆ ನಂಬಿ ಮೋಸ ಹೋಗಿದ್ದೇನೆ, ಪುನಃ ನಂಬಲಾರೆ: ಕೆಜಿಎಫ್ ಬಾಬು
ಬೀಗರನ್ನು ಒಮ್ಮೆ ನಂಬಿ ಮೋಸ ಹೋಗಿದ್ದೇನೆ, ಪುನಃ ನಂಬಲಾರೆ: ಕೆಜಿಎಫ್ ಬಾಬು
ಯುವಕನಿಗೆ ಮಹಿಳೆಯ ವಯಸ್ಸು ಗೊತ್ತಾಗದಿರೋದು ಅಚ್ಚರಿಯ ಸಂಗತಿ
ಯುವಕನಿಗೆ ಮಹಿಳೆಯ ವಯಸ್ಸು ಗೊತ್ತಾಗದಿರೋದು ಅಚ್ಚರಿಯ ಸಂಗತಿ
ಕೇಸ್ ದಾಖಲಾಗಿರುವುದು ರಾಜಕೀಯ ಪಿತೂರಿಯ ಭಾಗ: ಭೈರತಿ ಬಸವರಾಜ
ಕೇಸ್ ದಾಖಲಾಗಿರುವುದು ರಾಜಕೀಯ ಪಿತೂರಿಯ ಭಾಗ: ಭೈರತಿ ಬಸವರಾಜ
ಕುತ್ತಿಗೆಗೆ ನಾಗರಹಾವು ಸುತ್ತಿಕೊಂಡು ಬೈಕ್ ಓಡಿಸುತ್ತಿದ್ದ ವ್ಯಕ್ತಿ ಸಾವು
ಕುತ್ತಿಗೆಗೆ ನಾಗರಹಾವು ಸುತ್ತಿಕೊಂಡು ಬೈಕ್ ಓಡಿಸುತ್ತಿದ್ದ ವ್ಯಕ್ತಿ ಸಾವು
ಧರ್ಮದ ಹೆಸರಲ್ಲಿ ದ್ವೇಷಸಾಧನೆ ಸಲ್ಲದು: ಶ್ರೀಶೈಲ ಜಗದ್ಗುರುಗಳು
ಧರ್ಮದ ಹೆಸರಲ್ಲಿ ದ್ವೇಷಸಾಧನೆ ಸಲ್ಲದು: ಶ್ರೀಶೈಲ ಜಗದ್ಗುರುಗಳು
‘ಜಾಕಿ’ ಹಾಗೂ ‘ಎಕ್ಕ’ ಚಿತ್ರಕ್ಕಿರೋ ಹೋಲಿಕೆ ಏನು? ವಿವರಿಸಿದ ಯುವ
‘ಜಾಕಿ’ ಹಾಗೂ ‘ಎಕ್ಕ’ ಚಿತ್ರಕ್ಕಿರೋ ಹೋಲಿಕೆ ಏನು? ವಿವರಿಸಿದ ಯುವ
ಸೇತುವೆ ಬಹಳ ಸುಂದರವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ನಿರ್ಮಿಸಲಾಗಿದೆ: ಭಕ್ತರು
ಸೇತುವೆ ಬಹಳ ಸುಂದರವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ನಿರ್ಮಿಸಲಾಗಿದೆ: ಭಕ್ತರು
Daily Devotional: ಗರ್ಭಿಣಿಯರು ದೇವಾಲಯಗಳಿಗೆ ಹೋಗಬಹುದಾ?
Daily Devotional: ಗರ್ಭಿಣಿಯರು ದೇವಾಲಯಗಳಿಗೆ ಹೋಗಬಹುದಾ?
Daily horoscope: ಈ ರಾಶಿಯವರಿಗೆ ಉನ್ನತ ಸ್ಥಾನವನ್ನ ಕಳೆದುಕೊಳ್ಳುವ ಭೀತಿ
Daily horoscope: ಈ ರಾಶಿಯವರಿಗೆ ಉನ್ನತ ಸ್ಥಾನವನ್ನ ಕಳೆದುಕೊಳ್ಳುವ ಭೀತಿ
‘ಬ್ಯಾಂಗಲ್ ಬಂಗಾರಿ ಹಾಡು ಸಿಎಂ ತನಕ ತಲುಪಿದೆ’: ಯುವ ರಾಜ್​ಕುಮಾರ್
‘ಬ್ಯಾಂಗಲ್ ಬಂಗಾರಿ ಹಾಡು ಸಿಎಂ ತನಕ ತಲುಪಿದೆ’: ಯುವ ರಾಜ್​ಕುಮಾರ್