AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ಅಂಕ ಬಂದ್ರೂ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ವಂಚನೆ: ಬೆಳಗಾವಿಯಲ್ಲಿ 10 ವಿದ್ಯಾರ್ಥಿಗಳಿಗೆ ವಂಚಿಸಿ ಅರೆಸ್ಟ್​​​

ಇತ್ತೀಚೆಗೆ ನೀಟ್​ ಪರೀಕ್ಷೆ ವಿವಾದದ ಸದ್ದು ಮಾಡಿತ್ತು. ಆದರೆ ಇಲ್ಲೊಬ್ಬ ಅಂತಾರಾಜ್ಯ ವ್ಯಕ್ತಿ ಇದೇ ನೀಟ್​ ಪರೀಕ್ಷೆ ಹೆಸರಲ್ಲಿ ಕಡಿಮೆ ಅಂಕ ಬಂದ್ರೂ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ. ವಂಚನೆ ಮಾಡಿರುವಂತಹ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸದ್ಯ ಹೈದರಾಬಾದ್ ಮೂಲದ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದೆ.

ಕಡಿಮೆ ಅಂಕ ಬಂದ್ರೂ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ವಂಚನೆ: ಬೆಳಗಾವಿಯಲ್ಲಿ 10 ವಿದ್ಯಾರ್ಥಿಗಳಿಗೆ ವಂಚಿಸಿ ಅರೆಸ್ಟ್​​​
ಕಡಿಮೆ ಅಂಕ ಬಂದ್ರೂ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ವಂಚನೆ: ಬೆಳಗಾವಿಯಲ್ಲಿ 10 ವಿದ್ಯಾರ್ಥಿಗಳಿಗೆ ವಂಚಿಸಿ ಅರೆಸ್ಟ್​​​
Sahadev Mane
| Edited By: |

Updated on: Jul 15, 2024 | 3:44 PM

Share

ಬೆಳಗಾವಿ, ಜುಲೈ 15: ನೀಟ್ ಪರೀಕ್ಷೆ (NEET exam) ಬರೆದ ವಿದ್ಯಾರ್ಥಿಗಳನ್ನ ಟಾರ್ಗೆಟ್ ಮಾಡಿ ಕಡಿಮೆ ಅಂಕ ಪಡೆದುಕೊಂಡವರಿಗೆ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದ (Fraud) ಅಂತಾರಾಜ್ಯ ವಂಚಕನನ್ನು ಬೆಳಗಾವಿ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ ಮೂಲದ ಅರವಿಂದ್​ ಅರಗೊಂಡ ಬಂಧಿತ ವ್ಯಕ್ತಿ. ಎಂಬಿಎ ಪದವೀಧರನ್ನಾಗಿದ್ದು ಜನರಿಗೆ ವಂಚನೆ ಮಾಡುವುದನ್ನ ವೃತ್ತಿ ಮಾಡಿಕೊಂಡಿದ್ದ. ನಗರದಲ್ಲೇ 10 ಜನರಿಗೆ ಮೋಸ ಮಾಡಿದ್ದು 1 ಕೋಟಿ 8 ಲಕ್ಷ ರೂ. ವಂಚಿಸಿದ್ದಾನೆ.

ಬೆಳಗಾವಿ ಮೂಲದ ಓರ್ವ ವಿದ್ಯಾರ್ಥಿ ತಾಯಿ ನೀಡಿದ ದೂರಿನನ್ವಯ ಆರೋಪಿಯನ್ನು ಬಂಧಿಸಲಾಗಿದೆ. ತಾಂತ್ರಿಕ ಸಾಕ್ಷಿಗಳ ಆಧಾರದ ಮೇಲೆ ಆರೋಪಿಯನ್ನು ಖೆಡ್ಡಾಗೆ ಬೀಳಿಸಲಾಗಿದೆ. ಬಂಧಿತ ಆರೋಪಿಯಿಂದ 12 ಲಕ್ಷ ರೂ. ನಗದು, ಕೃತ್ಯಕ್ಕೆ ಬಳಸಿದ್ದ 12 ಕಂಪ್ಯೂಟರ್, ಒಂದು ಲ್ಯಾಪ್ ಟಾಪ್ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಲವ್​, ಸೆಕ್ಸ್​ ದೋಖಾ: ಇಬ್ಬರು ಯುವತಿಯರಿಗೆ ಮೋಸ, ಮತ್ತೊಬ್ಬಳೊಂದಿಗೆ ಯುವಕ ಪರಾರಿ

2023ರಲ್ಲಿ ಬೆಳಗಾವಿಯಲ್ಲಿ ಅರವಿಂದ್ ನೀಟ್ ಕೌನ್ಸೆಲಿಂಗ್ ಸೆಂಟರ್​ ಓಪನ್ ಮಾಡಿದ್ದ. ಹತ್ತು ಜನ ಟೆಲಿ ಕಾಲರ್ಸ್​​ ನೇಮಕ ಮಾಡಿಕೊಂಡು ವಂಚಿಸುತ್ತಿದ್ದ. ಕಡಿಮೆ ಅಂಕ ಪಡೆದವರಿಗೆ ಫೋನ್ ಮೂಲಕ ಸಂಪರ್ಕಿಸಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ವಿದ್ಯಾರ್ಥಿಗಳು ಸೇರಿದಂತೆ ಪೋಷಕರಿಗೆ ಭರವಸೆ ನೀಡಿ ಮಕ್ಮಲ್ ಟೋಪಿ ಹಾಕಿದ್ದಾನೆ.  ಬಳಿಕ ಕಚೇರಿ ಬಂದ್ ಮಾಡಿ ಮುಂಬೈಗೆ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಸೈಬರ್​ ವಂಚನೆಗೆ ಹೊಸ ದಾರಿ: ಮನೆಗೆ ಬರುತ್ತೆ ಕೂಪನ್​​​, ಸ್ಕ್ಯಾನ್​ ಮಾಡಿದರೆ ನಿಮ್ಮ ಖಾತೆಯಲ್ಲಿನ ಹಣ ಮಾಯ

ಮುಂಬೈನಲ್ಲೂ ನೀಟ್ ಕೌನ್ಸೆಲಿಂಗ್ ಸೆಂಟರ್ ಓಪನ್ ಮಾಡಲು ಸಿದ್ಧತೆ ನಡೆಸಿದ್ದ. ಅಷ್ಟರಲ್ಲೇ ಬಂಧಿಸಲಾಗಿದೆ. ಆ ಮೂಲಕ ಆತನಿಂದ ಮತ್ತಷ್ಟು ಜನರಿಗೆ ವಂಚನೆಯಾಗುವುದು ತಪ್ಪಿದೆ. ಆರೋಪಿ ವಿರುದ್ಧ ಆಂಧ್ರಪ್ರದೇಶ, ಮಧ್ಯಪ್ರದೇಶ ಮತ್ತು ಬೆಂಗಳೂರಿನಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಪೋನ್, ವಿಳಾಸ, ಆಧಾರ್ ಕಾರ್ಡ್ ಬದಲಿಸುತ್ತಿದ್ದ.

ಅಂತರ್​​ ಜಿಲ್ಲಾ ಬೈಕ್ ಕಳ್ಳನ ಬಂಧನ

ಮಂಡ್ಯ: ಜಿಲ್ಲೆಯ ಪಾಂಡವಪುರ ಠಾಣೆ ‌ಪೊಲೀಸರ ಕಾರ್ಯಾಚರಣೆ ನಡೆಸಿ ಅಂತರ್​​ ಜಿಲ್ಲಾ ಬೈಕ್ ಕಳ್ಳನ ಬಂಧನ ಮಾಡಿದ್ದಾರೆ. ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್ ಸಾಗರ ಗ್ರಾಮದ ನಿವಾಸಿ ರಾಜಾಚಾರಿ ಬಂಧಿತ ಆರೋಪಿ. ಬಂಧಿತನಿಂದ 5 ಲಕ್ಷ ರೂ ಮೌಲ್ಯದ 13 ಬೈಕ್​ಗಳನ್ನು ವಶ ಪಡೆಸಿಕೊಳ್ಳಲಾಗಿದೆ. ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಬೈಕ್​ಗಳನ್ನ ಕಳ್ಳತನ ಮಾಡುತ್ತಿದ್ದ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ