AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ಅಂಕ ಬಂದ್ರೂ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ವಂಚನೆ: ಬೆಳಗಾವಿಯಲ್ಲಿ 10 ವಿದ್ಯಾರ್ಥಿಗಳಿಗೆ ವಂಚಿಸಿ ಅರೆಸ್ಟ್​​​

ಇತ್ತೀಚೆಗೆ ನೀಟ್​ ಪರೀಕ್ಷೆ ವಿವಾದದ ಸದ್ದು ಮಾಡಿತ್ತು. ಆದರೆ ಇಲ್ಲೊಬ್ಬ ಅಂತಾರಾಜ್ಯ ವ್ಯಕ್ತಿ ಇದೇ ನೀಟ್​ ಪರೀಕ್ಷೆ ಹೆಸರಲ್ಲಿ ಕಡಿಮೆ ಅಂಕ ಬಂದ್ರೂ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ. ವಂಚನೆ ಮಾಡಿರುವಂತಹ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸದ್ಯ ಹೈದರಾಬಾದ್ ಮೂಲದ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದೆ.

ಕಡಿಮೆ ಅಂಕ ಬಂದ್ರೂ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ವಂಚನೆ: ಬೆಳಗಾವಿಯಲ್ಲಿ 10 ವಿದ್ಯಾರ್ಥಿಗಳಿಗೆ ವಂಚಿಸಿ ಅರೆಸ್ಟ್​​​
ಕಡಿಮೆ ಅಂಕ ಬಂದ್ರೂ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ವಂಚನೆ: ಬೆಳಗಾವಿಯಲ್ಲಿ 10 ವಿದ್ಯಾರ್ಥಿಗಳಿಗೆ ವಂಚಿಸಿ ಅರೆಸ್ಟ್​​​
Sahadev Mane
| Edited By: |

Updated on: Jul 15, 2024 | 3:44 PM

Share

ಬೆಳಗಾವಿ, ಜುಲೈ 15: ನೀಟ್ ಪರೀಕ್ಷೆ (NEET exam) ಬರೆದ ವಿದ್ಯಾರ್ಥಿಗಳನ್ನ ಟಾರ್ಗೆಟ್ ಮಾಡಿ ಕಡಿಮೆ ಅಂಕ ಪಡೆದುಕೊಂಡವರಿಗೆ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದ (Fraud) ಅಂತಾರಾಜ್ಯ ವಂಚಕನನ್ನು ಬೆಳಗಾವಿ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ ಮೂಲದ ಅರವಿಂದ್​ ಅರಗೊಂಡ ಬಂಧಿತ ವ್ಯಕ್ತಿ. ಎಂಬಿಎ ಪದವೀಧರನ್ನಾಗಿದ್ದು ಜನರಿಗೆ ವಂಚನೆ ಮಾಡುವುದನ್ನ ವೃತ್ತಿ ಮಾಡಿಕೊಂಡಿದ್ದ. ನಗರದಲ್ಲೇ 10 ಜನರಿಗೆ ಮೋಸ ಮಾಡಿದ್ದು 1 ಕೋಟಿ 8 ಲಕ್ಷ ರೂ. ವಂಚಿಸಿದ್ದಾನೆ.

ಬೆಳಗಾವಿ ಮೂಲದ ಓರ್ವ ವಿದ್ಯಾರ್ಥಿ ತಾಯಿ ನೀಡಿದ ದೂರಿನನ್ವಯ ಆರೋಪಿಯನ್ನು ಬಂಧಿಸಲಾಗಿದೆ. ತಾಂತ್ರಿಕ ಸಾಕ್ಷಿಗಳ ಆಧಾರದ ಮೇಲೆ ಆರೋಪಿಯನ್ನು ಖೆಡ್ಡಾಗೆ ಬೀಳಿಸಲಾಗಿದೆ. ಬಂಧಿತ ಆರೋಪಿಯಿಂದ 12 ಲಕ್ಷ ರೂ. ನಗದು, ಕೃತ್ಯಕ್ಕೆ ಬಳಸಿದ್ದ 12 ಕಂಪ್ಯೂಟರ್, ಒಂದು ಲ್ಯಾಪ್ ಟಾಪ್ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಲವ್​, ಸೆಕ್ಸ್​ ದೋಖಾ: ಇಬ್ಬರು ಯುವತಿಯರಿಗೆ ಮೋಸ, ಮತ್ತೊಬ್ಬಳೊಂದಿಗೆ ಯುವಕ ಪರಾರಿ

2023ರಲ್ಲಿ ಬೆಳಗಾವಿಯಲ್ಲಿ ಅರವಿಂದ್ ನೀಟ್ ಕೌನ್ಸೆಲಿಂಗ್ ಸೆಂಟರ್​ ಓಪನ್ ಮಾಡಿದ್ದ. ಹತ್ತು ಜನ ಟೆಲಿ ಕಾಲರ್ಸ್​​ ನೇಮಕ ಮಾಡಿಕೊಂಡು ವಂಚಿಸುತ್ತಿದ್ದ. ಕಡಿಮೆ ಅಂಕ ಪಡೆದವರಿಗೆ ಫೋನ್ ಮೂಲಕ ಸಂಪರ್ಕಿಸಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ವಿದ್ಯಾರ್ಥಿಗಳು ಸೇರಿದಂತೆ ಪೋಷಕರಿಗೆ ಭರವಸೆ ನೀಡಿ ಮಕ್ಮಲ್ ಟೋಪಿ ಹಾಕಿದ್ದಾನೆ.  ಬಳಿಕ ಕಚೇರಿ ಬಂದ್ ಮಾಡಿ ಮುಂಬೈಗೆ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಸೈಬರ್​ ವಂಚನೆಗೆ ಹೊಸ ದಾರಿ: ಮನೆಗೆ ಬರುತ್ತೆ ಕೂಪನ್​​​, ಸ್ಕ್ಯಾನ್​ ಮಾಡಿದರೆ ನಿಮ್ಮ ಖಾತೆಯಲ್ಲಿನ ಹಣ ಮಾಯ

ಮುಂಬೈನಲ್ಲೂ ನೀಟ್ ಕೌನ್ಸೆಲಿಂಗ್ ಸೆಂಟರ್ ಓಪನ್ ಮಾಡಲು ಸಿದ್ಧತೆ ನಡೆಸಿದ್ದ. ಅಷ್ಟರಲ್ಲೇ ಬಂಧಿಸಲಾಗಿದೆ. ಆ ಮೂಲಕ ಆತನಿಂದ ಮತ್ತಷ್ಟು ಜನರಿಗೆ ವಂಚನೆಯಾಗುವುದು ತಪ್ಪಿದೆ. ಆರೋಪಿ ವಿರುದ್ಧ ಆಂಧ್ರಪ್ರದೇಶ, ಮಧ್ಯಪ್ರದೇಶ ಮತ್ತು ಬೆಂಗಳೂರಿನಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಪೋನ್, ವಿಳಾಸ, ಆಧಾರ್ ಕಾರ್ಡ್ ಬದಲಿಸುತ್ತಿದ್ದ.

ಅಂತರ್​​ ಜಿಲ್ಲಾ ಬೈಕ್ ಕಳ್ಳನ ಬಂಧನ

ಮಂಡ್ಯ: ಜಿಲ್ಲೆಯ ಪಾಂಡವಪುರ ಠಾಣೆ ‌ಪೊಲೀಸರ ಕಾರ್ಯಾಚರಣೆ ನಡೆಸಿ ಅಂತರ್​​ ಜಿಲ್ಲಾ ಬೈಕ್ ಕಳ್ಳನ ಬಂಧನ ಮಾಡಿದ್ದಾರೆ. ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್ ಸಾಗರ ಗ್ರಾಮದ ನಿವಾಸಿ ರಾಜಾಚಾರಿ ಬಂಧಿತ ಆರೋಪಿ. ಬಂಧಿತನಿಂದ 5 ಲಕ್ಷ ರೂ ಮೌಲ್ಯದ 13 ಬೈಕ್​ಗಳನ್ನು ವಶ ಪಡೆಸಿಕೊಳ್ಳಲಾಗಿದೆ. ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಬೈಕ್​ಗಳನ್ನ ಕಳ್ಳತನ ಮಾಡುತ್ತಿದ್ದ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA