AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ 2ನೇ ಹಂತದ ಮತದಾನ: ನಾಳೆ ಯಲ್ಲಮ್ಮ ದೇವಿ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ

ಮೊದಲ ಹಂತದಲ್ಲಿ ದಕ್ಷಿಣ ಕರ್ನಾಟಕದ 14 ಕ್ಷೇತ್ರಗಳಲ್ಲಿ ಏಪ್ರಿಲ್‌ 26 ರಂದು ಮತದಾನ ನಡೆದಿತ್ತು. ಮೇ 7 ರಂದು ಅಂದರೆ ನಾಳೆ ಉಳಿದ 14 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯಲಿದೆ. 2ನೇ ಹಂತದ ಮತದಾನ ಹಿನ್ನೆಲೆ ನಾಳೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ಗುಡ್ಡಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ.

ರಾಜ್ಯದಲ್ಲಿ 2ನೇ ಹಂತದ ಮತದಾನ: ನಾಳೆ ಯಲ್ಲಮ್ಮ ದೇವಿ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ
ರಾಜ್ಯದಲ್ಲಿ 2ನೇ ಹಂತದ ಮತದಾನ: ನಾಳೆ ಯಲ್ಲಮ್ಮ ದೇವಿ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ
ಸಹದೇವ್​ ಮಾನೆ
| Edited By: |

Updated on: May 06, 2024 | 5:01 PM

Share

ಬೆಳಗಾವಿ, ಮೇ 06: ರಾಜ್ಯದ 14 ಲೋಕಸಭಾ (Lok Sabha Elections) ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದೆ. ಈಗಾಗಲೇ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. 2ನೇ ಹಂತದ ಮತದಾನ ಹಿನ್ನೆಲೆ ನಾಳೆ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ಗುಡ್ಡಕ್ಕೆ (Yellamma Gudda) ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ. ಪ್ರತಿ ಮಂಗಳವಾರ ಲಕ್ಷಾಂತರ ಜನ ಮತದಾನ ಬಿಟ್ಟು ದೇಗುಲಕ್ಕೆ ಆಗಮಿಸುವ ಸಾಧ್ಯತೆ ಹಿನ್ನೆಲೆ ಜಿಲ್ಲಾಡಳಿತ ನಾಳೆ ಯಲ್ಲಮ್ಮ ದೇವಿ ದರ್ಶನಕ್ಕೆ ಭಕ್ತರಿಗೆ ನಿರ್ಬಂಧಿಸಲಾಗಿದೆ.

ಈಗಾಗಲೇ ಬ್ಯಾರಿಕೆಡ್ ಹಾಕಿ ದೇವಸ್ಥಾನದ ಒಳಗೆ ಯಾರು ಬರದಂತೆ ಬಂದ ಮಾಡಲಾಗಿದೆ. ದೇವಿಗೆ ಎಂದಿನಂತೆ ಪೂಜಾ ಕಾರ್ಯಗಳು ನಡೆಯಲಿವೆ. ನಾಳೆ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿ ಮತ ಚಲಾಯಿಸಿ. ದೇವಸ್ಥಾನಕ್ಕೆ ಯಾರು ಬಾರದಂತೆ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಬಿ ಮಹೇಶ್ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಮೇ 7ರಂದು ರಾಜ್ಯದಲ್ಲಿ ಮತದಾನ; ಬ್ಯಾಂಕು, ಶಾಲೆ, ಕಚೇರಿಗಳಿಗೆ ರಜೆಯಾ? ಇಲ್ಲಿದೆ ಡೀಟೇಲ್ಸ್

ರಾಜ್ಯದಲ್ಲಿ‌ 2ನೇ ಹಂತದ ಲೋಕಸಭಾ ಕ್ಷೇತ್ರಗಳ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕೊನೆ ಹಂತದ ತಯಾರಿ ನಡೆಯುತ್ತಿದೆ. ಮತಗಟ್ಟೆಗಳತ್ತ ಇವಿಎಂ, ವಿವಿ ಪ್ಯಾಟ್ ಜೊತೆಗೆ ಸಿಬ್ಬಂದಿ ಶಿಫ್ಟ್ ಮಾಡಿದ್ದಾರೆ.

ಚುನಾವಣೆ ಪ್ರಕ್ರಿಯೆ ಅಧ್ಯಯನಕ್ಕೆ 28 ದೇಶಗಳಿಂದ ಪ್ರತಿನಿಧಿ ಬಂದಿದ್ದಾರೆ. ಕಾಂಬೋಡಿಯ, ಮಾಲ್ಡೊವಾ, ನೇಪಾಳ, ಸಿಷೆಲ್, ತುನಿಷಿಯಾದಿಂದ ಬೆಳಗಾವಿಗೆ ಐದು ದೇಶಗಳ 10 ಪ್ರತಿನಿಧಿಗಳ ತಂಡ ಆಗಮಿಸಿದ್ದಾರೆ.  ಚುನಾವಣೆ ಸಿದ್ದತೆ, ವಿವಿ ಹಂತದ ಪ್ರಕ್ರಿಯೆ ‌ವಿಕ್ಷಣೆ ಮತ್ತು ಅಧ್ಯಯನಕ್ಕೆ ಆಗಮಿಸಿದ್ದಾರೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ವಿವಾದಾತ್ಮಕ ಹೇಳಿಕೆ; ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ನೋಟಿಸ್ ನೀಡಿದ ಚುನಾವಣಾ ಅಧಿಕಾರಿಗಳು

ಮೊದಲ ಹಂತದಲ್ಲಿ ದಕ್ಷಿಣ ಕರ್ನಾಟಕದ 14 ಕ್ಷೇತ್ರಗಳಲ್ಲಿ ಏಪ್ರಿಲ್‌ 26 ರಂದು ಮತದಾನ ನಡೆದಿತ್ತು. ಮೇ 7 ರಂದು ಅಂದರೆ ನಾಳೆ ಉಳಿದ 14 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯಲಿದೆ. ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ