AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಯಡವಟ್ಟು; ಮಾಯಪ್ಪನ ಶವವನ್ನು ಪಾಯಪ್ಪನ ಕುಟುಂಬಸ್ಥರಿಗೆ ಹಸ್ತಾಂತರ

ಪಾಯಪ್ಪ ಮೃತಪಟ್ಟಿದ್ದಾನೆಂದು ಮಾಯಪ್ಪನ ಶವವನ್ನು ಪಾಯಪ್ಪ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಇದರಿಂದ ಪಾಯಪ್ಪನೇ ಮೃತಪಟ್ಟಿದ್ದಾನೆಂದು ತಿಳಿದು ಶವ ಪಡೆದ ಕುಟುಂಬಸ್ಥರು ಶವಸಂಸ್ಕಾರ ನೆರವೇರಿಸಿದ್ದಾರೆ.

ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಯಡವಟ್ಟು; ಮಾಯಪ್ಪನ ಶವವನ್ನು ಪಾಯಪ್ಪನ ಕುಟುಂಬಸ್ಥರಿಗೆ ಹಸ್ತಾಂತರ
ಪಾಯಪ್ಪ ಮೃತಪಟ್ಟಿದ್ದಾನೆಂದು ಮಾಯಪ್ಪನ ಶವವನ್ನು ಪಾಯಪ್ಪ ಕುಟುಂಬಸ್ಥರಿಗೆ ಹಸ್ತಾಂತರಿಸಿ ಮಹಾ ಎಡವಟ್ಟು
ಆಯೇಷಾ ಬಾನು
| Updated By: Skanda|

Updated on:May 05, 2021 | 11:10 AM

Share

ಬೆಳಗಾವಿ: 2018ರಲ್ಲಿ ಹಿಂದಿಯಲ್ಲಿ ತೆರೆಕಂಡ ಕರ್ವಾನ್ (Karwaan) ಚಿತ್ರದಲ್ಲಿ ನಟನ ತಂದೆಯ ಶವ ಮತ್ತು ನಟಿಯ ಅಜ್ಜಿಯ ಶವ ಎಕ್ಸ್ ಚೇಂಚ್ ಆಗಿರುತ್ತೆ. ಇದನ್ನೂ ಶವದ ವಾರಸುದಾರರಿಗೆ ತಲುಪಿಸಲು ಪಡುವ ಹರಸಾಹಸ, ಕೆಲವು ಹೊಸ ಹೊಸ ಬದಲಾವಣೆಗಳನ್ನು ಚಿತ್ರದಲ್ಲಿ ತೋರಿಸಲಾಗಿದೆ. ಆದ್ರೆ ಇದನ್ನು ಯಾಕೆ ಹೇಳುತ್ತಿದ್ದೇವೆ ಎಂದರೆ ಇಂತಹದೇ ತಪ್ಪನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆ ಸಿಬ್ಬಂದಿ ಮಾಡಿದ್ದಾರೆ. ಜಿಲ್ಲೆಯ ಆಸ್ಪತ್ರೆ ಸಿಬ್ಬಂದಿಯಿಂದ ಮಹಾ ಎಡವಟ್ಟು ನಡೆದಿದೆ. ಪಾಯಪ್ಪ ಎಂಬ ವ್ಯಕ್ತಿ ಮೃತಪಟ್ಟಿದ್ದಾನೆಂದು ಮಾಯಪ್ಪನ ಶವವನ್ನು ಹಸ್ತಾಂತರಿಸಿ ಬೆಳಗಾವಿ ವೀನಸ್ ಮಲ್ಟಿ ಸ್ಪೆಷಲ್ ಆಸ್ಪತ್ರೆ ಸಿಬ್ಬಂದಿ ಮಹಾ ಎಡವಟ್ಟು ಮಾಡಿದ್ದಾರೆ.

ಪಾಯಪ್ಪ ಮೃತಪಟ್ಟಿದ್ದಾನೆಂದು ಮಾಯಪ್ಪನ ಶವವನ್ನು ಪಾಯಪ್ಪ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಇದರಿಂದ ಪಾಯಪ್ಪನೇ ಮೃತಪಟ್ಟಿದ್ದಾನೆಂದು ತಿಳಿದು ಶವ ಪಡೆದ ಕುಟುಂಬಸ್ಥರು ಶವಸಂಸ್ಕಾರ ನೆರವೇರಿಸಿದ್ದಾರೆ. 3 ದಿನದ ಬಳಿಕ ಪಾಯಪ್ಪ ಮೃತಪಟ್ಟಿಲ್ಲವೆಂದು ಮಾಹಿತಿ ಸಿಕ್ಕಿದೆ. ಹೀಗಾಗಿ ಹೂತಿದ್ದ ಶವ ಹೊರತೆಗೆದು ಮಾಯಪ್ಪನ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ಇಂತಹ ವಿಚಿತ್ರ ಘಟನೆ ನಡೆದಿದೆ. ಮೇ 1ರಂದು ಬೆಳಗಾವಿಯ ವೆನಸ್ ಆಸ್ಪತ್ರೆಗೆ ಮೋಳೆ ಗ್ರಾಮದ ಪಾಯಪ್ಪ ಹಳ್ಳೊಳ್ಳಿ, ಗೋಕಾಕ್‌ನ ಮಾಯಪ್ಪ ಮಾವುರಕರ್ ರೋಗಿಗಳು ಚಿಕಿತ್ಸೆಗಾಗಿ ದಾಖಲಾಗಿದ್ದರು. ಮೇ 2 ರಂದು ಬೆಳಗ್ಗೆ ಚಿಕಿತ್ಸೆ ಫಲಿಸದೇ ಮಾಯಪ್ಪ ಮಾವುರಕರ್ ಮೃತಪಟ್ಟಿದ್ದರು. ಅದರೆ ಮಾಯಪ್ಪ ಮೃತದೇಹವನ್ನು ಪಾಯಪ್ಪ ಕುಟುಂಬಸ್ಥರಿಗೆ‌ ನೀಡಿ ಆಸ್ಪತ್ರೆ ಸಿಬ್ಬಂದಿ ಎಡವಟ್ಟು ಮಾಡಿದ್ದರು.

ಇದನ್ನೂ ಓದಿ: ಭಾರತದಲ್ಲಿ ಒಂದೇ ದಿನ 3,689 ಜನ ಕೊರೊನಾ ಸಾಂಕ್ರಾಮಿಕ ಕಾಯಿಲೆಗೆ ಬಲಿ

Published On - 9:32 am, Tue, 4 May 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ