AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 30ರ ವರೆಗೂ ರೇಣುಕಾ ಯಲ್ಲಮ್ಮ ದೇವಿ ಭಕ್ತರಿಗಿಲ್ಲ ದರ್ಶನ ಭಾಗ್ಯ

ಬೆಳಗಾವಿ: ಎರಡು ತಿಂಗಳ ನಂತರ ನಾಳೆಯಿಂದ ರಾಜ್ಯಾದ್ಯಂತ ಎಲ್ಲಾ ದೇವಾಲಯಗಳು ಓಪನ್ ಆಗಲಿವೆ. ದೇವಾಲಯಗಳಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಆದರೆ ರೇಣುಕಾ ಯಲ್ಲಮ್ಮ ದೇವಿ ಭಕ್ತರಿಗೆ ಈ ವಿಷಯದಲ್ಲಿ ನಿರಾಶೆಯಾಗಿದೆ. ಜೂನ್ 30ರ ವರೆಗೆ ಭಕ್ತರಿಗೆ ದೇವಿ ದರ್ಶನ ಸಿಗುವುದಿಲ್ಲ. ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಪ್ರಮುಖ ಶಕ್ತಿಪೀಠ ಯಲ್ಲಮ್ಮ ದೇವಿ ದೇವಸ್ಥಾನ ಜೂನ್ 30ರ ವರೆಗೂ ಬಂದ್ ಮುಂದುವರಿಕೆಯಾಗಲಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ದೇವಸ್ಥಾನಕ್ಕೆ […]

ಜೂನ್ 30ರ ವರೆಗೂ ರೇಣುಕಾ ಯಲ್ಲಮ್ಮ ದೇವಿ ಭಕ್ತರಿಗಿಲ್ಲ ದರ್ಶನ ಭಾಗ್ಯ
ಆಯೇಷಾ ಬಾನು
|

Updated on:Jun 07, 2020 | 3:29 PM

Share

ಬೆಳಗಾವಿ: ಎರಡು ತಿಂಗಳ ನಂತರ ನಾಳೆಯಿಂದ ರಾಜ್ಯಾದ್ಯಂತ ಎಲ್ಲಾ ದೇವಾಲಯಗಳು ಓಪನ್ ಆಗಲಿವೆ. ದೇವಾಲಯಗಳಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಆದರೆ ರೇಣುಕಾ ಯಲ್ಲಮ್ಮ ದೇವಿ ಭಕ್ತರಿಗೆ ಈ ವಿಷಯದಲ್ಲಿ ನಿರಾಶೆಯಾಗಿದೆ. ಜೂನ್ 30ರ ವರೆಗೆ ಭಕ್ತರಿಗೆ ದೇವಿ ದರ್ಶನ ಸಿಗುವುದಿಲ್ಲ.

ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಪ್ರಮುಖ ಶಕ್ತಿಪೀಠ ಯಲ್ಲಮ್ಮ ದೇವಿ ದೇವಸ್ಥಾನ ಜೂನ್ 30ರ ವರೆಗೂ ಬಂದ್ ಮುಂದುವರಿಕೆಯಾಗಲಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ದೇವಸ್ಥಾನಕ್ಕೆ ಮಹಾರಾಷ್ಟ್ರದಿಂದ ಹೆಚ್ಚಿನ ಭಕ್ತರು ಆಗಮಿಸುತ್ತಾರೆ.

ಹೀಗಾಗಿ ಕೊರೊನಾ ಸೋಂಕು ಹರಡುವ ಭೀತಿಯಿಂದ ನಾಳೆ ದೇವಾಲಯ ತೆರೆಯದೆ, ಜೂನ್ 30ರ ವರೆಗೂ ಈ ಹಿಂದಿನ ಆದೇಶ ಯಥಾಸ್ಥಿತಿ ಮುಂದುವರಿಯುತ್ತೆ. ಹೀಗಾಗಿ ಬೆಳಗಾವಿ ಜಿಲ್ಲಾಡಳಿತ ಜೂನ್ 30ರ ವರೆಗೂ ಭಕ್ತರು ದೇವಸ್ಥಾನಕ್ಕೆ ಆಗಮಿಸದಂತೆ ಮನವಿ ಮಾಡಿದ್ದಾರೆ. ಸರ್ಕಾರದ ಮಾರ್ಗಸೂಚಿಯಂತೆ ದಿನನಿತ್ಯದ ಪೂಜೆ ನಡೆಯುತ್ತೆ. ಆದರೆ ದರ್ಶನ ಇರುವುದಿಲ್ಲ.

Published On - 7:49 am, Sun, 7 June 20