AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi Session: ಕಲಾಪದಲ್ಲಿ ಮರಾಠಿ ಭಾಷೆಯಲ್ಲಿ ಮಾತನಾಡಿದ ಖಾನಾಪುರ ಶಾಸಕ ವಿಠಲ ಹಲಗೇಕರ್; ಲಕ್ಷ್ಮಣ್ ಸವದಿ ಆಕ್ಷೇಪ

ಬೆಳಗಾವಿ ಅಧಿವೇಶನದ ಕೊನೆಯ ದಿನವಾದ ಇಂದು ಖಾನಾಪುರ ಕ್ಷೇತ್ರದ ಬಿಜೆಪಿ ಶಾಸಕ ವಿಠಲ ಹಲಗೇಕರ್ ಅವರು ಮರಾಠಿ ಭಾಷೆಯಲ್ಲಿ ಮಾತನಾಡಿದರು. ಇದಕ್ಕೆ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಕ್ಷೇಪ ವ್ಯಕ್ತಪಡಿಸಿದರು. ಮಧ್ಯಪ್ರವೇಶಿಸಿದ ಸ್ಪೀಕರ್ ಯುಟಿ ಖಾದರ್, ಜನವರಿಯಲ್ಲಿ ನಡೆಯುವ ಅಧಿವೇಶನದಲ್ಲಿ ಕನ್ನಡದಲ್ಲೇ ಮಾತನಾಡುವಂತೆ ಹೇಳಿದರು.

Belagavi Session: ಕಲಾಪದಲ್ಲಿ ಮರಾಠಿ ಭಾಷೆಯಲ್ಲಿ ಮಾತನಾಡಿದ ಖಾನಾಪುರ ಶಾಸಕ ವಿಠಲ ಹಲಗೇಕರ್; ಲಕ್ಷ್ಮಣ್ ಸವದಿ ಆಕ್ಷೇಪ
ಬಿಜೆಪಿ ಶಾಸಕ ವಿಠಲ ಹಲಗೇಕರ್ ಮತ್ತು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ
Follow us
ಕಿರಣ್​ ಹನಿಯಡ್ಕ
| Updated By: Rakesh Nayak Manchi

Updated on:Dec 15, 2023 | 2:14 PM

ವಿಧಾನಸಭೆ, ಡಿ.15: ಬೆಳಗಾವಿ ಅಧಿವೇಶನದ (Belagavi Session) ಕೊನೆಯ ದಿನವಾದ ಇಂದು ಖಾನಾಪುರ ಕ್ಷೇತ್ರದ ಬಿಜೆಪಿ ಶಾಸಕ ವಿಠಲ ಹಲಗೇಕರ್ (Vitthal Halgekar) ಅವರು ಮರಾಠಿ ಭಾಷೆಯಲ್ಲಿ ಮಾತನಾಡಿದರು. ಇದಕ್ಕೆ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ (Laxman Savadi) ಆಕ್ಷೇಪ ವ್ಯಕ್ತಪಡಿಸಿದಾಗ ಇಬ್ಬರ ನಡುವೆ ಮಾತಿಗೆ ಮಾತು ಬೆಳೆಯಿತು.

ವಿಧಾನಸಭೆ ಕಲಾಪದಲ್ಲಿ ಉತ್ತರ ಕರ್ನಾಟಕ ಸಮಸ್ಯೆ ಕುರಿತ ಚರ್ಚೆ ವೇಳೆ ಖಾನಾಪುರ ಶಾಸಕ ವಿಠಲ ಹಲಗೇಕರ್ ಅವರು ಮರಾಠಿಯಲ್ಲಿ ಮಾತನಾಡಿದರು. ಖಾನಾಪುರ ಕ್ಷೇತ್ರದ ಅಂಗನವಾಡಿಗೆ ಮರಾಠಿ ಟೀಚರ್ ನೇಮಕ ಮಾಡುವಂತೆ ಒತ್ತಾಯಿಸಿದರು.

ಇದನ್ನೂ ಓದಿ: Belagavi Session: ಬೆಳಗಾವಿ ಅಧಿವೇಶನಕ್ಕೆ ಇಂದು ತೆರೆ: ಚರ್ಚೆ ಆಗಿದ್ದೇನು, ಬಾಕಿ ಉಳಿದಿದ್ದೇನು?

ಕನ್ನಡ ಬಿಟ್ಟು ಮರಾಠಿ ಭಾಷೆಯಲ್ಲಿ ಮಾತನಾಡಿದ್ದಕ್ಕೆ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಸ್ಪೀಕರ್ ಯುಟಿ ಖಾದರ್, ಕನ್ನಡ ಭಾಷೆ ಬೆಳೆಯಬೇಕಾದರೆ ಬೇರೆ ಭಾಷೆಯನ್ನು ದ್ವೇಷಿಸಬೇಡಿ ಎಂದು ಸವದಿಗೆ ಹಿತವಚನ ನೀಡಿದರು.

ಈ ವೇಳೆ ಎದ್ದುನಿಂತ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೇಗ ಭಾಷಣ ಮುಗಿಸಲು ಹೇಳಿ ಎಂದು ಸ್ಪೀಕರ್ ಅವರಲ್ಲಿ ಮನವಿ ಮಾಡಿದರು. ಮಾತು ಮುಂದುವರಿಸಿದ ವಿಠಲ ಹಲಗೇಕರ್, ಸವದಿ ಅವರು ಸದನದಲ್ಲಿ ಕನ್ನಡ ಮಾತಾಡಿ ಹೊರಗೆ ಮರಾಠಿ ಮಾತನಾಡುತ್ತಾರೆ ಎಂದು ಹೇಳಿದರು. ಮತ್ತೆ ಮಧ್ಯಪ್ರವೇಶಿಸಿದ ಸ್ಪೀಕರ್, ಜನವರಿ ಅಧಿವೇಶನದಲ್ಲಿ ಕನ್ನಡದಲ್ಲಿ ಮಾತಾಡಿ ಎಂದು ಹಲಗೇಕರ್​ಗೆ ಸೂಚಿಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:12 pm, Fri, 15 December 23

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ