AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi Session: ಕಲಾಪದಲ್ಲಿ ಮರಾಠಿ ಭಾಷೆಯಲ್ಲಿ ಮಾತನಾಡಿದ ಖಾನಾಪುರ ಶಾಸಕ ವಿಠಲ ಹಲಗೇಕರ್; ಲಕ್ಷ್ಮಣ್ ಸವದಿ ಆಕ್ಷೇಪ

ಬೆಳಗಾವಿ ಅಧಿವೇಶನದ ಕೊನೆಯ ದಿನವಾದ ಇಂದು ಖಾನಾಪುರ ಕ್ಷೇತ್ರದ ಬಿಜೆಪಿ ಶಾಸಕ ವಿಠಲ ಹಲಗೇಕರ್ ಅವರು ಮರಾಠಿ ಭಾಷೆಯಲ್ಲಿ ಮಾತನಾಡಿದರು. ಇದಕ್ಕೆ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಕ್ಷೇಪ ವ್ಯಕ್ತಪಡಿಸಿದರು. ಮಧ್ಯಪ್ರವೇಶಿಸಿದ ಸ್ಪೀಕರ್ ಯುಟಿ ಖಾದರ್, ಜನವರಿಯಲ್ಲಿ ನಡೆಯುವ ಅಧಿವೇಶನದಲ್ಲಿ ಕನ್ನಡದಲ್ಲೇ ಮಾತನಾಡುವಂತೆ ಹೇಳಿದರು.

Belagavi Session: ಕಲಾಪದಲ್ಲಿ ಮರಾಠಿ ಭಾಷೆಯಲ್ಲಿ ಮಾತನಾಡಿದ ಖಾನಾಪುರ ಶಾಸಕ ವಿಠಲ ಹಲಗೇಕರ್; ಲಕ್ಷ್ಮಣ್ ಸವದಿ ಆಕ್ಷೇಪ
ಬಿಜೆಪಿ ಶಾಸಕ ವಿಠಲ ಹಲಗೇಕರ್ ಮತ್ತು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ
ಕಿರಣ್​ ಹನಿಯಡ್ಕ
| Edited By: Rakesh Nayak Manchi|

Updated on:Dec 15, 2023 | 2:14 PM

Share

ವಿಧಾನಸಭೆ, ಡಿ.15: ಬೆಳಗಾವಿ ಅಧಿವೇಶನದ (Belagavi Session) ಕೊನೆಯ ದಿನವಾದ ಇಂದು ಖಾನಾಪುರ ಕ್ಷೇತ್ರದ ಬಿಜೆಪಿ ಶಾಸಕ ವಿಠಲ ಹಲಗೇಕರ್ (Vitthal Halgekar) ಅವರು ಮರಾಠಿ ಭಾಷೆಯಲ್ಲಿ ಮಾತನಾಡಿದರು. ಇದಕ್ಕೆ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ (Laxman Savadi) ಆಕ್ಷೇಪ ವ್ಯಕ್ತಪಡಿಸಿದಾಗ ಇಬ್ಬರ ನಡುವೆ ಮಾತಿಗೆ ಮಾತು ಬೆಳೆಯಿತು.

ವಿಧಾನಸಭೆ ಕಲಾಪದಲ್ಲಿ ಉತ್ತರ ಕರ್ನಾಟಕ ಸಮಸ್ಯೆ ಕುರಿತ ಚರ್ಚೆ ವೇಳೆ ಖಾನಾಪುರ ಶಾಸಕ ವಿಠಲ ಹಲಗೇಕರ್ ಅವರು ಮರಾಠಿಯಲ್ಲಿ ಮಾತನಾಡಿದರು. ಖಾನಾಪುರ ಕ್ಷೇತ್ರದ ಅಂಗನವಾಡಿಗೆ ಮರಾಠಿ ಟೀಚರ್ ನೇಮಕ ಮಾಡುವಂತೆ ಒತ್ತಾಯಿಸಿದರು.

ಇದನ್ನೂ ಓದಿ: Belagavi Session: ಬೆಳಗಾವಿ ಅಧಿವೇಶನಕ್ಕೆ ಇಂದು ತೆರೆ: ಚರ್ಚೆ ಆಗಿದ್ದೇನು, ಬಾಕಿ ಉಳಿದಿದ್ದೇನು?

ಕನ್ನಡ ಬಿಟ್ಟು ಮರಾಠಿ ಭಾಷೆಯಲ್ಲಿ ಮಾತನಾಡಿದ್ದಕ್ಕೆ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಸ್ಪೀಕರ್ ಯುಟಿ ಖಾದರ್, ಕನ್ನಡ ಭಾಷೆ ಬೆಳೆಯಬೇಕಾದರೆ ಬೇರೆ ಭಾಷೆಯನ್ನು ದ್ವೇಷಿಸಬೇಡಿ ಎಂದು ಸವದಿಗೆ ಹಿತವಚನ ನೀಡಿದರು.

ಈ ವೇಳೆ ಎದ್ದುನಿಂತ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೇಗ ಭಾಷಣ ಮುಗಿಸಲು ಹೇಳಿ ಎಂದು ಸ್ಪೀಕರ್ ಅವರಲ್ಲಿ ಮನವಿ ಮಾಡಿದರು. ಮಾತು ಮುಂದುವರಿಸಿದ ವಿಠಲ ಹಲಗೇಕರ್, ಸವದಿ ಅವರು ಸದನದಲ್ಲಿ ಕನ್ನಡ ಮಾತಾಡಿ ಹೊರಗೆ ಮರಾಠಿ ಮಾತನಾಡುತ್ತಾರೆ ಎಂದು ಹೇಳಿದರು. ಮತ್ತೆ ಮಧ್ಯಪ್ರವೇಶಿಸಿದ ಸ್ಪೀಕರ್, ಜನವರಿ ಅಧಿವೇಶನದಲ್ಲಿ ಕನ್ನಡದಲ್ಲಿ ಮಾತಾಡಿ ಎಂದು ಹಲಗೇಕರ್​ಗೆ ಸೂಚಿಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:12 pm, Fri, 15 December 23

Follow Us
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ