AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi Session: ಕಲಾಪದಲ್ಲಿ ಮರಾಠಿ ಭಾಷೆಯಲ್ಲಿ ಮಾತನಾಡಿದ ಖಾನಾಪುರ ಶಾಸಕ ವಿಠಲ ಹಲಗೇಕರ್; ಲಕ್ಷ್ಮಣ್ ಸವದಿ ಆಕ್ಷೇಪ

ಬೆಳಗಾವಿ ಅಧಿವೇಶನದ ಕೊನೆಯ ದಿನವಾದ ಇಂದು ಖಾನಾಪುರ ಕ್ಷೇತ್ರದ ಬಿಜೆಪಿ ಶಾಸಕ ವಿಠಲ ಹಲಗೇಕರ್ ಅವರು ಮರಾಠಿ ಭಾಷೆಯಲ್ಲಿ ಮಾತನಾಡಿದರು. ಇದಕ್ಕೆ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಕ್ಷೇಪ ವ್ಯಕ್ತಪಡಿಸಿದರು. ಮಧ್ಯಪ್ರವೇಶಿಸಿದ ಸ್ಪೀಕರ್ ಯುಟಿ ಖಾದರ್, ಜನವರಿಯಲ್ಲಿ ನಡೆಯುವ ಅಧಿವೇಶನದಲ್ಲಿ ಕನ್ನಡದಲ್ಲೇ ಮಾತನಾಡುವಂತೆ ಹೇಳಿದರು.

Belagavi Session: ಕಲಾಪದಲ್ಲಿ ಮರಾಠಿ ಭಾಷೆಯಲ್ಲಿ ಮಾತನಾಡಿದ ಖಾನಾಪುರ ಶಾಸಕ ವಿಠಲ ಹಲಗೇಕರ್; ಲಕ್ಷ್ಮಣ್ ಸವದಿ ಆಕ್ಷೇಪ
ಬಿಜೆಪಿ ಶಾಸಕ ವಿಠಲ ಹಲಗೇಕರ್ ಮತ್ತು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ
ಕಿರಣ್​ ಹನಿಯಡ್ಕ
| Edited By: |

Updated on:Dec 15, 2023 | 2:14 PM

Share

ವಿಧಾನಸಭೆ, ಡಿ.15: ಬೆಳಗಾವಿ ಅಧಿವೇಶನದ (Belagavi Session) ಕೊನೆಯ ದಿನವಾದ ಇಂದು ಖಾನಾಪುರ ಕ್ಷೇತ್ರದ ಬಿಜೆಪಿ ಶಾಸಕ ವಿಠಲ ಹಲಗೇಕರ್ (Vitthal Halgekar) ಅವರು ಮರಾಠಿ ಭಾಷೆಯಲ್ಲಿ ಮಾತನಾಡಿದರು. ಇದಕ್ಕೆ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ (Laxman Savadi) ಆಕ್ಷೇಪ ವ್ಯಕ್ತಪಡಿಸಿದಾಗ ಇಬ್ಬರ ನಡುವೆ ಮಾತಿಗೆ ಮಾತು ಬೆಳೆಯಿತು.

ವಿಧಾನಸಭೆ ಕಲಾಪದಲ್ಲಿ ಉತ್ತರ ಕರ್ನಾಟಕ ಸಮಸ್ಯೆ ಕುರಿತ ಚರ್ಚೆ ವೇಳೆ ಖಾನಾಪುರ ಶಾಸಕ ವಿಠಲ ಹಲಗೇಕರ್ ಅವರು ಮರಾಠಿಯಲ್ಲಿ ಮಾತನಾಡಿದರು. ಖಾನಾಪುರ ಕ್ಷೇತ್ರದ ಅಂಗನವಾಡಿಗೆ ಮರಾಠಿ ಟೀಚರ್ ನೇಮಕ ಮಾಡುವಂತೆ ಒತ್ತಾಯಿಸಿದರು.

ಇದನ್ನೂ ಓದಿ: Belagavi Session: ಬೆಳಗಾವಿ ಅಧಿವೇಶನಕ್ಕೆ ಇಂದು ತೆರೆ: ಚರ್ಚೆ ಆಗಿದ್ದೇನು, ಬಾಕಿ ಉಳಿದಿದ್ದೇನು?

ಕನ್ನಡ ಬಿಟ್ಟು ಮರಾಠಿ ಭಾಷೆಯಲ್ಲಿ ಮಾತನಾಡಿದ್ದಕ್ಕೆ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಸ್ಪೀಕರ್ ಯುಟಿ ಖಾದರ್, ಕನ್ನಡ ಭಾಷೆ ಬೆಳೆಯಬೇಕಾದರೆ ಬೇರೆ ಭಾಷೆಯನ್ನು ದ್ವೇಷಿಸಬೇಡಿ ಎಂದು ಸವದಿಗೆ ಹಿತವಚನ ನೀಡಿದರು.

ಈ ವೇಳೆ ಎದ್ದುನಿಂತ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೇಗ ಭಾಷಣ ಮುಗಿಸಲು ಹೇಳಿ ಎಂದು ಸ್ಪೀಕರ್ ಅವರಲ್ಲಿ ಮನವಿ ಮಾಡಿದರು. ಮಾತು ಮುಂದುವರಿಸಿದ ವಿಠಲ ಹಲಗೇಕರ್, ಸವದಿ ಅವರು ಸದನದಲ್ಲಿ ಕನ್ನಡ ಮಾತಾಡಿ ಹೊರಗೆ ಮರಾಠಿ ಮಾತನಾಡುತ್ತಾರೆ ಎಂದು ಹೇಳಿದರು. ಮತ್ತೆ ಮಧ್ಯಪ್ರವೇಶಿಸಿದ ಸ್ಪೀಕರ್, ಜನವರಿ ಅಧಿವೇಶನದಲ್ಲಿ ಕನ್ನಡದಲ್ಲಿ ಮಾತಾಡಿ ಎಂದು ಹಲಗೇಕರ್​ಗೆ ಸೂಚಿಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:12 pm, Fri, 15 December 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ