AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಮದ್ಯ ಪ್ರಿಯರ ಪ್ರತಿಭಟನೆ, ಬೇಡಿಕೆಗಳನ್ನು ಕೇಳಿ ಸಚಿವ ಸಂತೋಷ್ ಲಾಡ್ ಶಾಕ್!

ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಲವು ಸಂಘಟನೆಗಳು ಸುರ್ವಣ ವಿಧಾನಸೌಧದ ಬಳಿ ಪ್ರತಿಭಟನೆಗಳನ್ನು ನಡೆಸುತ್ತಿವೆ. ಈ ನಡುವೆ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘ ಕೂಡ ಪ್ರತಿಭಟನೆ ಆರಂಭಿಸಿದ್ದು, ಮದ್ಯ ಪ್ರಿಯರ ಬೇಡಿಕೆಗಳನ್ನು ಕೇಳಿ ಸಚಿವ ಸಂತೋಷ್ ಲಾಡ್ ಶಾಕ್ ಆಗಿದ್ದಾರೆ.

ಬೆಳಗಾವಿಯಲ್ಲಿ ಮದ್ಯ ಪ್ರಿಯರ ಪ್ರತಿಭಟನೆ, ಬೇಡಿಕೆಗಳನ್ನು ಕೇಳಿ ಸಚಿವ ಸಂತೋಷ್ ಲಾಡ್ ಶಾಕ್!
ಬೆಳಗಾವಿಯಲ್ಲಿ ಮದ್ಯ ಪ್ರಿಯರ ಪ್ರತಿಭಟನೆ, ಬೇಡಿಕೆಗಳನ್ನು ಕೇಳಿ ಸಚಿವ ಸಂತೋಷ್ ಲಾಡ್ ಶಾಕ್
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: Rakesh Nayak Manchi|

Updated on:Dec 14, 2023 | 3:46 PM

Share

ಬೆಳಗಾವಿ, ಡಿ.14: ಅಧಿವೇಶನದ (Belagavi Session) ನಡುವೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಲವು ಸಂಘಟನೆಗಳು ಸುರ್ವಣ ವಿಧಾನಸೌಧದ ಬಳಿ ಪ್ರತಿಭಟನೆಗಳನ್ನು (Protest) ನಡೆಸುತ್ತಿವೆ. ಈ ನಡುವೆ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ತುಂಬುವ ಮದ್ಯ ಪ್ರಿಯರು ಕೂಡ ಪ್ರತಿಭಟನೆಗೆ ಇಳಿದಿದ್ದಾರೆ. ಇವರ ವಿವಿಧ ಬೇಡಿಕೆಗಳನ್ನು ಕೇಳಿ ಸಚಿವ ಸಂತೋಷ್ ಲಾಡ್ ಅವರು ಅಚ್ಚರಿ ಹಾಗೂ ಶಾಕ್ ಆಗಿದ್ದಾರೆ.

ಸುವರ್ಣಗಾರ್ಡನ್ ಟೆಂಟ್‌ನಲ್ಲಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘ ಪ್ರತಿಭಟನೆ ನಡೆಸುತ್ತಿದ್ದು, “ನಿತ್ಯ ದುಡಿ.. ಸತ್ಯ ನುಡಿ.. ಸ್ವಲ್ಪ ಕುಡಿ.. ಮನೆಗೆ ನಡಿ” ಎಂಬ ಘೋಷವಾಕ್ಯದಡಿ ಹೋರಾಟ ನಡೆಸುತ್ತಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಚಿವ ಸಂತೋಷ್ ಲಾಡ್, ಪ್ರತಿಭಟನಾನಿರತ ಮದ್ಯಪ್ರಿಯರ ಜೊತೆ ಕುಳಿತು ಶಾಂತಚಿತ್ತದಿಂದ ಸಮಸ್ಯೆ ಆಲಿಸಿದರು.

ಇದನ್ನೂ ಓದಿ: BBMP ವಾರ್ಡ್ ಮರು ವಿಂಗಡಣೆ ಬಳಿಕ RTE ಶಿಕ್ಷಣದಿಂದ ವಂಚಿತರಾದ ಬಡ ಮಕ್ಕಳು, ಬೆಳಗಾವಿ ಸುವರ್ಣ ಸೌಧದ ಮುಂದೆ ಪ್ರತಿಭಟನೆ 

ಈ ವೇಳೆ ಮದ್ಯಪ್ರಿಯರ ಮನವಿ ಕೇಳಿ ಸಚಿವ ಸಂತೋಷ್ ಲಾಡ್‌ ಅವರು ಅಚ್ವರಿಗೊಳಗಾಗಿದ್ದಾರೆ. ಹಾಗಿದ್ದರೆ ಮದ್ಯ ಪ್ರಿಯರು ಮುಂದಿಟ್ಟ ಬೇಡಿಕೆಗಳು ಯಾವುವು? ಈ ಕೆಳಗಿನಂತಿವೆ.

  1. ಮದ್ಯಪ್ರಿಯರ ಕಲ್ಯಾಣ ನಿಧಿ ಸ್ಥಾಪಿಸಬೇಕು
  2. ಮದ್ಯ ಮಾರಾಟದಿಂದ ಬರುವ ಆದಾಯದ ಶೇಕಡ 10 ರಷ್ಟು ಮೀಸಲಿಡಬೇಕು
  3. ಲೀವರ್ ಸಮಸ್ಯೆಯಿಂದ ಬಳಲುವವರಿಗೆ ಚಿಕಿತ್ಸೆ ಕೊಡಿಸಬೇಕು
  4. ‘ಕುಡುಕ’ ಎಂಬ ಪದ ನಿಷೇಧಿಸಿ ಮದ್ಯ ಪ್ರಿಯರು ಎಂದು ಮಾಡಬೇಕು
  5. ಒಬ್ಬರಿಗೆ ಒಂದು ಕ್ವಾರ್ಟರ್ ನಿಗದಿ ಮಾಡಬೇಕು
  6. ಬಾರ್‌ಗಳಲ್ಲಿ ಸ್ವಚ್ಛತೆ ಕಾಪಾಡಬೇಕು
  7. ಬಾರ್‌ಗಳ ಬಳಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಬೇಕು
  8. ಮದ್ಯಪ್ರಿಯರ ಭವನ ಸ್ಥಾಪಿಸಬೇಕು
  9. ಡಿಸೆಂಬರ್ 31 ಮದ್ಯಾಪನ ಪ್ರಿಯರ ದಿನ ಎಂದು ಘೋಷಣೆ ಮಾಡಬೇಕು
  10. ಮದ್ಯ ಸೇವಿಸಿ ಮೃತಪಟ್ಟರೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಬೇಕು
  11. ಮದ್ಯಪಾನ ಪ್ರಿಯರ ಕುಟುಂಬದಲ್ಲಿ ವಿವಾಹವಾದರೆ ಎರಡು ಲಕ್ಷ ರೂ. ಪ್ರೋತ್ಸಾಹ ಧನ ನೀಡಬೇಕು

ಹೀಗೆ ವಿವಿಧ ಬೇಡಿಕೆಗಳನ್ನು ಮದ್ಯ ಪ್ರಿಯರು ಸಚಿವ ಸಂತೋಷ್ ಲಾಡ್ ಮುಂದಿಟ್ಟಿದ್ದಾರೆ. ಮದ್ಯಪ್ರಿಯರ ಮನವಿಯನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಸಂತೋಷ್ ಲಾಡ್ ಭರವಸೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:20 pm, Thu, 14 December 23

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್