AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಮದ್ಯ ಪ್ರಿಯರ ಪ್ರತಿಭಟನೆ, ಬೇಡಿಕೆಗಳನ್ನು ಕೇಳಿ ಸಚಿವ ಸಂತೋಷ್ ಲಾಡ್ ಶಾಕ್!

ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಲವು ಸಂಘಟನೆಗಳು ಸುರ್ವಣ ವಿಧಾನಸೌಧದ ಬಳಿ ಪ್ರತಿಭಟನೆಗಳನ್ನು ನಡೆಸುತ್ತಿವೆ. ಈ ನಡುವೆ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘ ಕೂಡ ಪ್ರತಿಭಟನೆ ಆರಂಭಿಸಿದ್ದು, ಮದ್ಯ ಪ್ರಿಯರ ಬೇಡಿಕೆಗಳನ್ನು ಕೇಳಿ ಸಚಿವ ಸಂತೋಷ್ ಲಾಡ್ ಶಾಕ್ ಆಗಿದ್ದಾರೆ.

ಬೆಳಗಾವಿಯಲ್ಲಿ ಮದ್ಯ ಪ್ರಿಯರ ಪ್ರತಿಭಟನೆ, ಬೇಡಿಕೆಗಳನ್ನು ಕೇಳಿ ಸಚಿವ ಸಂತೋಷ್ ಲಾಡ್ ಶಾಕ್!
ಬೆಳಗಾವಿಯಲ್ಲಿ ಮದ್ಯ ಪ್ರಿಯರ ಪ್ರತಿಭಟನೆ, ಬೇಡಿಕೆಗಳನ್ನು ಕೇಳಿ ಸಚಿವ ಸಂತೋಷ್ ಲಾಡ್ ಶಾಕ್
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: Rakesh Nayak Manchi

Updated on:Dec 14, 2023 | 3:46 PM

ಬೆಳಗಾವಿ, ಡಿ.14: ಅಧಿವೇಶನದ (Belagavi Session) ನಡುವೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಲವು ಸಂಘಟನೆಗಳು ಸುರ್ವಣ ವಿಧಾನಸೌಧದ ಬಳಿ ಪ್ರತಿಭಟನೆಗಳನ್ನು (Protest) ನಡೆಸುತ್ತಿವೆ. ಈ ನಡುವೆ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ತುಂಬುವ ಮದ್ಯ ಪ್ರಿಯರು ಕೂಡ ಪ್ರತಿಭಟನೆಗೆ ಇಳಿದಿದ್ದಾರೆ. ಇವರ ವಿವಿಧ ಬೇಡಿಕೆಗಳನ್ನು ಕೇಳಿ ಸಚಿವ ಸಂತೋಷ್ ಲಾಡ್ ಅವರು ಅಚ್ಚರಿ ಹಾಗೂ ಶಾಕ್ ಆಗಿದ್ದಾರೆ.

ಸುವರ್ಣಗಾರ್ಡನ್ ಟೆಂಟ್‌ನಲ್ಲಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘ ಪ್ರತಿಭಟನೆ ನಡೆಸುತ್ತಿದ್ದು, “ನಿತ್ಯ ದುಡಿ.. ಸತ್ಯ ನುಡಿ.. ಸ್ವಲ್ಪ ಕುಡಿ.. ಮನೆಗೆ ನಡಿ” ಎಂಬ ಘೋಷವಾಕ್ಯದಡಿ ಹೋರಾಟ ನಡೆಸುತ್ತಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಚಿವ ಸಂತೋಷ್ ಲಾಡ್, ಪ್ರತಿಭಟನಾನಿರತ ಮದ್ಯಪ್ರಿಯರ ಜೊತೆ ಕುಳಿತು ಶಾಂತಚಿತ್ತದಿಂದ ಸಮಸ್ಯೆ ಆಲಿಸಿದರು.

ಇದನ್ನೂ ಓದಿ: BBMP ವಾರ್ಡ್ ಮರು ವಿಂಗಡಣೆ ಬಳಿಕ RTE ಶಿಕ್ಷಣದಿಂದ ವಂಚಿತರಾದ ಬಡ ಮಕ್ಕಳು, ಬೆಳಗಾವಿ ಸುವರ್ಣ ಸೌಧದ ಮುಂದೆ ಪ್ರತಿಭಟನೆ 

ಈ ವೇಳೆ ಮದ್ಯಪ್ರಿಯರ ಮನವಿ ಕೇಳಿ ಸಚಿವ ಸಂತೋಷ್ ಲಾಡ್‌ ಅವರು ಅಚ್ವರಿಗೊಳಗಾಗಿದ್ದಾರೆ. ಹಾಗಿದ್ದರೆ ಮದ್ಯ ಪ್ರಿಯರು ಮುಂದಿಟ್ಟ ಬೇಡಿಕೆಗಳು ಯಾವುವು? ಈ ಕೆಳಗಿನಂತಿವೆ.

  1. ಮದ್ಯಪ್ರಿಯರ ಕಲ್ಯಾಣ ನಿಧಿ ಸ್ಥಾಪಿಸಬೇಕು
  2. ಮದ್ಯ ಮಾರಾಟದಿಂದ ಬರುವ ಆದಾಯದ ಶೇಕಡ 10 ರಷ್ಟು ಮೀಸಲಿಡಬೇಕು
  3. ಲೀವರ್ ಸಮಸ್ಯೆಯಿಂದ ಬಳಲುವವರಿಗೆ ಚಿಕಿತ್ಸೆ ಕೊಡಿಸಬೇಕು
  4. ‘ಕುಡುಕ’ ಎಂಬ ಪದ ನಿಷೇಧಿಸಿ ಮದ್ಯ ಪ್ರಿಯರು ಎಂದು ಮಾಡಬೇಕು
  5. ಒಬ್ಬರಿಗೆ ಒಂದು ಕ್ವಾರ್ಟರ್ ನಿಗದಿ ಮಾಡಬೇಕು
  6. ಬಾರ್‌ಗಳಲ್ಲಿ ಸ್ವಚ್ಛತೆ ಕಾಪಾಡಬೇಕು
  7. ಬಾರ್‌ಗಳ ಬಳಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಬೇಕು
  8. ಮದ್ಯಪ್ರಿಯರ ಭವನ ಸ್ಥಾಪಿಸಬೇಕು
  9. ಡಿಸೆಂಬರ್ 31 ಮದ್ಯಾಪನ ಪ್ರಿಯರ ದಿನ ಎಂದು ಘೋಷಣೆ ಮಾಡಬೇಕು
  10. ಮದ್ಯ ಸೇವಿಸಿ ಮೃತಪಟ್ಟರೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಬೇಕು
  11. ಮದ್ಯಪಾನ ಪ್ರಿಯರ ಕುಟುಂಬದಲ್ಲಿ ವಿವಾಹವಾದರೆ ಎರಡು ಲಕ್ಷ ರೂ. ಪ್ರೋತ್ಸಾಹ ಧನ ನೀಡಬೇಕು

ಹೀಗೆ ವಿವಿಧ ಬೇಡಿಕೆಗಳನ್ನು ಮದ್ಯ ಪ್ರಿಯರು ಸಚಿವ ಸಂತೋಷ್ ಲಾಡ್ ಮುಂದಿಟ್ಟಿದ್ದಾರೆ. ಮದ್ಯಪ್ರಿಯರ ಮನವಿಯನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಸಂತೋಷ್ ಲಾಡ್ ಭರವಸೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:20 pm, Thu, 14 December 23

1 ನಿಮಿಷದಲ್ಲಿ 10 ಯೋಗದ ಆಸನ: ವಿಶ್ವ ದಾಖಲೆ ಬರೆದ ಹಾಸನದ ಬಾಲಕಿ
1 ನಿಮಿಷದಲ್ಲಿ 10 ಯೋಗದ ಆಸನ: ವಿಶ್ವ ದಾಖಲೆ ಬರೆದ ಹಾಸನದ ಬಾಲಕಿ
ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ