AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಅಧಿವೇಶನ: ಕೋರಂಗೆ ಬೇಗ ಬಂದ ಸದಸ್ಯರಿಗೆ ವಿಶೇಷ ಟೀ ಕಪ್ ವಿತರಣೆ, ತಡವಾಗಿ ಬಂದವರಿಗೆ ಪ್ರಶಸ್ತಿ: ಸ್ಪೀಕರ್ ಯುಟಿ ಖಾದರ್

ನಾಳೆಯಿಂದ (ಡಿ.4) ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಆರಂಭವಾಗಲಿದೆ. ಇಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಕೋರಂ ಗೆ ಬೇಗ ಬಂದವರಿಗೆ ಗುರುತಿಸಲು ಪ್ರಶಸ್ತಿ ನೀಡುತ್ತೇವೆ ಎಂದು ಯುಟಿ ಖಾದರ್ ತಿಳಿಸಿದರು.

ಬೆಳಗಾವಿ ಅಧಿವೇಶನ: ಕೋರಂಗೆ ಬೇಗ ಬಂದ ಸದಸ್ಯರಿಗೆ ವಿಶೇಷ ಟೀ ಕಪ್ ವಿತರಣೆ, ತಡವಾಗಿ ಬಂದವರಿಗೆ ಪ್ರಶಸ್ತಿ: ಸ್ಪೀಕರ್ ಯುಟಿ ಖಾದರ್
ಸ್ಪೀಕರ್ ಯುಟಿ ಖಾದರ್
Follow us
Anil Kalkere
| Updated By: Rakesh Nayak Manchi

Updated on: Dec 03, 2023 | 4:15 PM

ಬೆಳಗಾವಿ, ಡಿ.3: ಅಧಿವೇಶನದಲ್ಲಿ (Belagavi Session) ಪ್ರತಿ ನಿತ್ಯ ಕೋರಂಗೆ ಬೇಗ ಬರುವ ಸದಸ್ಯರಿಗೆ ರಾಜ್ಯ ಮತ್ತು ರಾಷ್ಟ್ರೀಯ ಚಿಹ್ನೆ ಇರುವ ಟೀ ಕಪ್ ನೀಡಲಾಗುತ್ತದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ (UT Khader) ಹೇಳಿದರು. ಅಲ್ಲದೆ, ತಡವಾಗಿ ಅಥವಾ ಗೈರಾದ ಸದಸ್ಯರಿಗೆ ಬೇಗ ಬರುವಂತೆ ಪ್ರಶಸ್ತಿ ನೀಡಲಾಗುತ್ತದೆ ಎಂದರು.

ನಾಳೆಯಿಂದ ಅಧಿವೇಶನ ಆರಂಭಗೊಳ್ಳಲಿರುವ ಹಿನ್ನೆಲೆ ಸುವರ್ಣ ವಿಧಾನಸೌಧದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್ ಹಾಗೂ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಜಂಟಿ ಸುದ್ದಿಗೋಷ್ಠಿ ನಡೆಸಿದರು.

ಯುಟಿ ಖಾದರ್ ಮಾತನಾಡಿ, ಕೋರಂಗೆ ಬೇಗ ಬಂದವರಿಗೆ ಗುರುತಿಸಲು ಪ್ರಶಸ್ತಿ ನೀಡುತ್ತೇವೆ. ಈ ಸಲ ಸ್ಟೇಟ್ ಹಾಗೂ ನ್ಯಾಷನಲ್ ಸಿಂಬಲ್ ಇರುವ ಟೀ ಕಪ್ ನೀಡಲಾಗುತ್ತದೆ. ಒಮ್ಮೆ ಕೋರಂಗೆ ಬೇಗ ಬಂದವರಿಗೆ ಒಂದು ಕಪ್, ಎರಡು ಸಲ ಬೇಗ ಬಂದರೆ ಎರಡು ಕಪ್, ಹತ್ತ ಸಲ ಬೇಗ ಬಂದರೆ ಹತ್ತು ಟೀ ಕಪ್ ವಿತರಿಸಲಾಗುತ್ತದೆ. ಅತಿ ಹೆಚ್ಚು ಗೈರು ಆದವರಿಗೆ ಬೇಗ ಬರುವಂತೆ ಪ್ರಶಸ್ತಿ ನೀಡುತ್ತೇವೆ ಎಂದು ನಗುತ್ತಲೇ ಹೇಳಿದರು.

ನಾಳೆ‌ಯಿಂದ 16ನೇ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದೆ. ಶನಿವಾರ, ಭಾನುವಾರ ರಜೆ ಇರುತ್ತದೆ. ವಿಧಾನಮಂಡಲದ ಅಧಿವೇಶಕ್ಕೆ ಬರುವ ಶಾಸಕರು, ಪತ್ರಕರ್ತರು ಹಾಗೂ ಅಧಿಕಾರಿಗಳಿಗೆ ಉತ್ತಮ ವ್ಯವಸ್ಥೆ ಕಲ್ಪಿಸಲಾಗಿದೆ. ಅಧಿಕಾರಿ ವರ್ಗದವರಿಗೂ ವ್ಯವಸ್ಥೆ ಮಾಡಲಾಗಿದೆ. ಉತ್ತಮವಾದ ಊಟದ ವ್ಯವಸ್ಥೆ ಮತ್ತು ಅಗತ್ಯ ಇರುವ ಉತ್ತಮ ವಾತಾವರಣ ನೀಡಲು ತೀರ್ಮಾನಿಸಿದ್ದೇವೆ ಎಂದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: MES ಮಹಾಮೇಳಕ್ಕೆ ಪೊಲೀಸ್ ಆಯುಕ್ತರಿಂದ ಅನುಮತಿ ನಿರಾಕರಣೆ

ವಿಧಾನಮಂಡಲ ನಡೆಯುವ ವೇಳೆ ಅಧಿಕಾರಿಗಳು ಎಲ್ಲ ತಯಾರಿ ಮಾಡಿಕೊಂಡಿದ್ದಾರೆ. ಮತ್ತಷ್ಟು ಚೆನ್ನಾಗಿ ಅಧಿವೇಶನ ನಡೆಸುವ ಹಿನ್ನೆಲೆಯಲ್ಲಿ ಆಹಾರ ಮತ್ತು ವಸತಿ ವಿಚಾರವಾಗಿ ಹೆಚ್ಚಿನ ಗುಣಮಟ್ಟದ ವ್ಯವಸ್ಥೆ ಕಲ್ಪಿಸಲಾಗಿದೆ. ಹಟ್ಟಿ ಕಾಫಿ ಎಂಬ ಕೆಫೆ ತೆರೆದಿದ್ದೇವೆ ಎಂದರು.

ವಿಧಾನಸಭೆ ಸೌದರ್ಯ ಹೆಚ್ಚಿಸಲು ಶಾಶ್ವತವಾಗಿ ಎಲ್​ಇಡಿ ವ್ಯವಸ್ಥೆ ಮಾಡಲಾಗುತ್ತಿದೆ. ಈ‌ ಹಿಂದೆ ಅಧಿವೇಶನದಲ್ಲಿ ಮಾತ್ರ 15 ದಿನ ಅಳವಡಿಕೆ ಮಾಡಲಾಗಿತ್ತು. ಇನ್ನು ಮುಂದೆ ಪ್ರತಿ ಶನಿವಾರ, ಭಾನುವಾರ ವಿದ್ಯುತ್ ದೀಪಗಳಿಂದ ಅಲಂಕರಿಸಾಗುತ್ತದೆ. ರಾಷ್ಟ್ರೀಯ ಹಬ್ಬಗಳ ದಿನದಂದು ಸುವರ್ಣಸೌಧದ ವಿದ್ಯುತ್ ದೀಪಗಳಿಂದ ಕಂಗೊಳಿಸಲಿದೆ ಎಂದರು.

ಮಕ್ಕಳಿಗೆ ಚಾಕಲೇಟ್ ವಿತರಣೆ

ಅಧಿವೇಶನ ವೀಕ್ಷಣೆ ಮಾಡಲು ಬರುವ ಶಾಲಾ ಮಕ್ಕಳಿಗೆ ಆಡಿಟೋರಿಯಂ ಹಾಲ್​ನಲ್ಲಿ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಕಾಯುವ ಅವಶ್ಯಕತೆ ಇಲ್ಲ. ಸಂವಿಧಾನ ಪೀಠಿಕೆ ವಿಚಾರವಾಗಿ ಸಂಪನ್ಮೂಲ ವ್ಯಕ್ತಿಗಳಿಂದ ಮಕ್ಕಳಿಗೆ ತಿಳಿಸಿಕೊಡಲಾಗುತ್ತದೆ. ಹಿಂದೆ 10 ನಿಮಿಷ ಮಾತ್ರ ಕೂರಲು ಅವಕಾಶ ಇರುತ್ತಿತ್ತು. ಈ ಬಾರಿ ಮಕ್ಕಳಿಗೆ 30 ನಿಮಿಷಕಾಲ ಅವಕಾಶ ಹೆಚ್ಚಿಸಲಾಗಿದೆ. ಮಕ್ಕಳಿಗೆ ಚಾಕಲೇಟ್ ಹಾಗೂ ತಂಪುಪಾನಿಯ ವಿತರಿಸಲು ಮುಂದಾಗಿದ್ದೇವೆ ಎಂದರು.

ಸುವರ್ಣ ಸಂಭ್ರಮದ ಕಾಲಘಟ್ಟದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. ಅಧಿವೇಶನ ಪ್ರಾರಂಭವಾಗುವವರೆಗೆ ಈ ಕಾರ್ಯಕ್ರಮ ನಡೆಯಲಿದೆ. 12 ರಂದು‌ ಸುವರ್ಣ ಸಂಭ್ರಮದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಆಳ್ವಾಸ್ ವಿದ್ಯಾಸಂಸ್ಥೆಯಿಂದ‌ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ ಎಂದರು.

ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ಯುಟಿ ಖಾದರ್ ಪ್ರತಿಕ್ರಿಯೆ

ತೆಲಂಗಾಣ ಚುನಾವಣೆ ಪ್ರಚಾರದ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ಸದನದಲ್ಲಿ ವಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಈ ವಿಚಾರವಾಗಿ ಮಾತನಾಡಿದ ಯುಟಿ ಖಾದರ್, ನಮಗೆ ಇರುವುದು 10 ದಿವಸ. ಈ ಹತ್ತು ದಿನದಲ್ಲಿ‌ ರಾಜ್ಯ ಉತ್ತರ ಕರ್ನಾಟಕ ಬಗ್ಗೆ ಚರ್ಚೆ ಆಗಬೇಕು. ಜನರಿಗೆ ಅಗತ್ಯವಿರುವ ವಿಚಾರಗಳ ಬಗ್ಗೆ ಚರ್ಚೆ ಆಗಬೇಕು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!