Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiv Sena ಬೆಳಗಾವಿಯಲ್ಲಿ ಶಿವಸೇನೆ ಕಾರ್ಯಕರ್ತರಿಂದ ಕನ್ನಡ ವಿರೋಧಿ ಘೋಷಣೆ

Shiv Sena ಬೆಳಗಾವಿಯಲ್ಲಿ ಹುತಾತ್ಮ ದಿನ ಆಚರಿಸಿದ ಶಿವಸೇನೆಯ ಸದಸ್ಯರು ಹೀಗೆ ಘೋಷಣೆ ಕೂಗಿದ್ದಾರೆ. ಕರ್ನಾಟಕದ ಕೆಲ ಪ್ರದೇಶ ಮಹಾರಾಷ್ಟ್ರಕ್ಕೆ ಸೇರಬೇಕು ಎಂದಿದ್ದಾರೆ.

Shiv Sena ಬೆಳಗಾವಿಯಲ್ಲಿ ಶಿವಸೇನೆ ಕಾರ್ಯಕರ್ತರಿಂದ ಕನ್ನಡ ವಿರೋಧಿ ಘೋಷಣೆ
ಬೆಳಗಾವಿಯಲ್ಲಿ ಶಿವಸೇನೆ ಪುಂಡಾಟ
Follow us
TV9 Web
| Updated By: ganapathi bhat

Updated on:Apr 06, 2022 | 8:10 PM

ಬೆಳಗಾವಿ: ರಾಜ್ಯದ ಗಡಿಯಲ್ಲಿ ಮಹಾರಾಷ್ಟ್ರ ಪರವಾಗಿರುವವರು ಹಾಗೂ ಶಿವಸೇನೆ ಕಾರ್ಯಕರ್ತರ ಪುಂಡಾಟ ಮತ್ತೆ ಮುಂದುವರಿದಿದೆ. ಕರ್ನಾಟಕದ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಶಿವಸೇನೆಯ ಕೆಲ ಸದಸ್ಯರು ಇಂದು (ಫೆ.8) ನಗರದ ರಾಮಲಿಂಗ ಖಿಂಡ್‌ ಗಲ್ಲಿಯಲ್ಲಿ ಘೋಷಣೆ ಕೂಗಿದ್ದಾರೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿ ಎಂದು ಘೋಷಣೆ ಹಾಕಿದ್ದಾರೆ.

ಬೆಳಗಾವಿಯ ರಾಮಲಿಂಗ ಖಿಂಡ್‌ ಗಲ್ಲಿಯಲ್ಲಿ ಹುತಾತ್ಮ ದಿನ ಆಚರಿಸಿದ ಶಿವಸೇನೆಯ ಸದಸ್ಯರು, ಬಳಿಕ ಹೀಗೆ ಘೋಷಣೆ ಕೂಗಿದ್ದಾರೆ. ಮರಾಠಿ ಹೋರಾಟದಲ್ಲಿ ಮಡಿದವರಿಗೆ ಅಮರ್ ರಹೇ ಎಂದಿದ್ದಾರೆ. ನಂತರ, ಕರ್ನಾಟಕದ ಕೆಲ ಪ್ರದೇಶ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಘೋಷಣೆ ಮಾಡಿದ್ದಾರೆ. ಹುತಾತ್ಮ ದಿನಾಚರಣೆ ನೆಪದಲ್ಲಿ ಪಕ್ಷ ಸಂಘಟನೆಗೂ ಪ್ರಯತ್ನ ನಡೆಸಿದ್ದಾರೆ.

ಮುಂಬರುವ ಬೆಳಗಾವಿ ಕ್ಷೇತ್ರದ ಲೋಕಸಭೆ ಉಪ ಚುನಾವಣೆ, ಬೆಳಗಾವಿ ಪಾಲಿಕೆ, ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಗಳ ಹಿನ್ನೆಲೆಯಲ್ಲಿ ಶಿವಸೇನೆ ಸದಸ್ಯರು ಹೀಗೆ ವರ್ತಿಸಿದ್ದಾರೆ ಎಂದು ಹೇಳಲಾಗಿದೆ. ಮರಾಠಿಗರ ಪ್ರಚೋದಿಸಿ ರಾಜಕೀಯ ಲಾಭ ಪಡೆಯಲು ಯತ್ನಿಸಿದ್ದಾರೆ. ರಾಜಕೀಯ ಲಾಭಕ್ಕಾಗಿ ಗಡಿ ವಿವಾದ ಕೆಣಕುತ್ತಿದ್ದಾರೆ.

ಪದೇಪದೆ ಗಡಿ ವಿವಾದವನ್ನು ಕೆಣಕುತ್ತಿರುವ ಶಿವಸೇನೆ ಪುಂಡರು, ಮರಾಠಿಗರು ಮಹಾರಾಷ್ಟ್ರಕ್ಕೆ ಸೇರಲು ಸಂಘಟಿತರಾಗುವಂತೆ ಕರೆ ನೀಡಿದ್ದಾರೆ. ಶಿವಸೇನೆಯ ಬೆಳಗಾವಿ ಜಿಲ್ಲಾಧ್ಯಕ್ಷ ಪ್ರಕಾಶ್ ಶಿರೋಳ್ಕರ್, ಈ ವಿಧಾನದಲ್ಲಿ ಮರಾಠಿಗರನ್ನು ಒಗ್ಗೂಡಿಸುವ ಪ್ರಯತ್ನ ಮಾಡಿದ್ದಾರೆ. ಪದೇಪದೆ ಗಡಿ ವಿವಾದ ಕೆಣಕುತ್ತಿರುವ ಶಿವಸೇನೆಯ ವಿರುದ್ಧ, ಹಲವು ಕನ್ನಡಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಮತ್ತೆ ನಾಡದ್ರೋಹ ಘೋಷಣೆ ಕೂಗಿದ ಶಿವಸೇನೆಯ ಪುಂಡರ ವಿರುದ್ಧ ಕನ್ನಡಾಭಿಮಾನಿಗಳು ಗರಂ ಆಗಿದ್ದಾರೆ.

SHIV SENA BELAGAVI

ಬೆಳಗಾವಿಯಲ್ಲಿ ಶಿವಸೇನೆ ಪುಂಡಾಟ

ನಾವು ಮುಂಬೈ ಪಡೆದೇ ತೀರುತ್ತೇವೆ: ಡಿಸಿಎಂ ಲಕ್ಷ್ಮಣ್​ ಸವದಿ

ಶಿವಸೇನೆಯವರು ಕನ್ನಡಿಗರಿಗೆ ಚಿರಋಣಿ ಆಗಿರಬೇಕು: ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ

Published On - 6:38 pm, Mon, 8 February 21

ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?