AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiv Sena ಬೆಳಗಾವಿಯಲ್ಲಿ ಶಿವಸೇನೆ ಕಾರ್ಯಕರ್ತರಿಂದ ಕನ್ನಡ ವಿರೋಧಿ ಘೋಷಣೆ

Shiv Sena ಬೆಳಗಾವಿಯಲ್ಲಿ ಹುತಾತ್ಮ ದಿನ ಆಚರಿಸಿದ ಶಿವಸೇನೆಯ ಸದಸ್ಯರು ಹೀಗೆ ಘೋಷಣೆ ಕೂಗಿದ್ದಾರೆ. ಕರ್ನಾಟಕದ ಕೆಲ ಪ್ರದೇಶ ಮಹಾರಾಷ್ಟ್ರಕ್ಕೆ ಸೇರಬೇಕು ಎಂದಿದ್ದಾರೆ.

Shiv Sena ಬೆಳಗಾವಿಯಲ್ಲಿ ಶಿವಸೇನೆ ಕಾರ್ಯಕರ್ತರಿಂದ ಕನ್ನಡ ವಿರೋಧಿ ಘೋಷಣೆ
ಬೆಳಗಾವಿಯಲ್ಲಿ ಶಿವಸೇನೆ ಪುಂಡಾಟ
TV9 Web
| Edited By: |

Updated on:Apr 06, 2022 | 8:10 PM

Share

ಬೆಳಗಾವಿ: ರಾಜ್ಯದ ಗಡಿಯಲ್ಲಿ ಮಹಾರಾಷ್ಟ್ರ ಪರವಾಗಿರುವವರು ಹಾಗೂ ಶಿವಸೇನೆ ಕಾರ್ಯಕರ್ತರ ಪುಂಡಾಟ ಮತ್ತೆ ಮುಂದುವರಿದಿದೆ. ಕರ್ನಾಟಕದ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಶಿವಸೇನೆಯ ಕೆಲ ಸದಸ್ಯರು ಇಂದು (ಫೆ.8) ನಗರದ ರಾಮಲಿಂಗ ಖಿಂಡ್‌ ಗಲ್ಲಿಯಲ್ಲಿ ಘೋಷಣೆ ಕೂಗಿದ್ದಾರೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿ ಎಂದು ಘೋಷಣೆ ಹಾಕಿದ್ದಾರೆ.

ಬೆಳಗಾವಿಯ ರಾಮಲಿಂಗ ಖಿಂಡ್‌ ಗಲ್ಲಿಯಲ್ಲಿ ಹುತಾತ್ಮ ದಿನ ಆಚರಿಸಿದ ಶಿವಸೇನೆಯ ಸದಸ್ಯರು, ಬಳಿಕ ಹೀಗೆ ಘೋಷಣೆ ಕೂಗಿದ್ದಾರೆ. ಮರಾಠಿ ಹೋರಾಟದಲ್ಲಿ ಮಡಿದವರಿಗೆ ಅಮರ್ ರಹೇ ಎಂದಿದ್ದಾರೆ. ನಂತರ, ಕರ್ನಾಟಕದ ಕೆಲ ಪ್ರದೇಶ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಘೋಷಣೆ ಮಾಡಿದ್ದಾರೆ. ಹುತಾತ್ಮ ದಿನಾಚರಣೆ ನೆಪದಲ್ಲಿ ಪಕ್ಷ ಸಂಘಟನೆಗೂ ಪ್ರಯತ್ನ ನಡೆಸಿದ್ದಾರೆ.

ಮುಂಬರುವ ಬೆಳಗಾವಿ ಕ್ಷೇತ್ರದ ಲೋಕಸಭೆ ಉಪ ಚುನಾವಣೆ, ಬೆಳಗಾವಿ ಪಾಲಿಕೆ, ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಗಳ ಹಿನ್ನೆಲೆಯಲ್ಲಿ ಶಿವಸೇನೆ ಸದಸ್ಯರು ಹೀಗೆ ವರ್ತಿಸಿದ್ದಾರೆ ಎಂದು ಹೇಳಲಾಗಿದೆ. ಮರಾಠಿಗರ ಪ್ರಚೋದಿಸಿ ರಾಜಕೀಯ ಲಾಭ ಪಡೆಯಲು ಯತ್ನಿಸಿದ್ದಾರೆ. ರಾಜಕೀಯ ಲಾಭಕ್ಕಾಗಿ ಗಡಿ ವಿವಾದ ಕೆಣಕುತ್ತಿದ್ದಾರೆ.

ಪದೇಪದೆ ಗಡಿ ವಿವಾದವನ್ನು ಕೆಣಕುತ್ತಿರುವ ಶಿವಸೇನೆ ಪುಂಡರು, ಮರಾಠಿಗರು ಮಹಾರಾಷ್ಟ್ರಕ್ಕೆ ಸೇರಲು ಸಂಘಟಿತರಾಗುವಂತೆ ಕರೆ ನೀಡಿದ್ದಾರೆ. ಶಿವಸೇನೆಯ ಬೆಳಗಾವಿ ಜಿಲ್ಲಾಧ್ಯಕ್ಷ ಪ್ರಕಾಶ್ ಶಿರೋಳ್ಕರ್, ಈ ವಿಧಾನದಲ್ಲಿ ಮರಾಠಿಗರನ್ನು ಒಗ್ಗೂಡಿಸುವ ಪ್ರಯತ್ನ ಮಾಡಿದ್ದಾರೆ. ಪದೇಪದೆ ಗಡಿ ವಿವಾದ ಕೆಣಕುತ್ತಿರುವ ಶಿವಸೇನೆಯ ವಿರುದ್ಧ, ಹಲವು ಕನ್ನಡಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಮತ್ತೆ ನಾಡದ್ರೋಹ ಘೋಷಣೆ ಕೂಗಿದ ಶಿವಸೇನೆಯ ಪುಂಡರ ವಿರುದ್ಧ ಕನ್ನಡಾಭಿಮಾನಿಗಳು ಗರಂ ಆಗಿದ್ದಾರೆ.

SHIV SENA BELAGAVI

ಬೆಳಗಾವಿಯಲ್ಲಿ ಶಿವಸೇನೆ ಪುಂಡಾಟ

ನಾವು ಮುಂಬೈ ಪಡೆದೇ ತೀರುತ್ತೇವೆ: ಡಿಸಿಎಂ ಲಕ್ಷ್ಮಣ್​ ಸವದಿ

ಶಿವಸೇನೆಯವರು ಕನ್ನಡಿಗರಿಗೆ ಚಿರಋಣಿ ಆಗಿರಬೇಕು: ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ

Published On - 6:38 pm, Mon, 8 February 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು