AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣಲ್ಲಿ ಮಣ್ಣಾದ ವಿಧಾನಸಭೆ ಉಪ ಸಭಾಪತಿ​ ಆನಂದ ಮಾಮನಿ

ಸಕಲ ಸರ್ಕಾರಿ ಗೌರವದೊಂದಿಗೆ ಉಪಸಭಾಪತಿ ಆನಂದ ಮಾಮನಿ ಅವರ ಅಂತ್ಯಕ್ರಿಯೆ ಸವದತ್ತಿ ಪಟ್ಟಣದ ಯಡ್ರಾಂವಿ ರಸ್ತೆಯಲ್ಲಿರುವ ಫಾರ್ಮ್‌ಹೌಸ್​​ನಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು.

ಮಣ್ಣಲ್ಲಿ ಮಣ್ಣಾದ ವಿಧಾನಸಭೆ ಉಪ ಸಭಾಪತಿ​ ಆನಂದ ಮಾಮನಿ
ಆನಂದ್ ಮಮಾನಿ ಅಂತ್ಯಸಂಸ್ಕಾರ
TV9 Web
| Edited By: Rakesh Nayak Manchi|

Updated on:Oct 23, 2022 | 9:13 PM

Share

ಬೆಳಗಾವಿ: ಸಕಲ ಸರ್ಕಾರಿ ಗೌರವದೊಂದಿಗೆ ವಿಧಾನಸಭೆಯ ಉಪಸಭಾಪತಿ ಆನಂದ ಮಾಮನಿ (Anand Mamani) ಅವರ ಅಂತ್ಯಕ್ರಿಯೆ ಸವದತ್ತಿ ಪಟ್ಟಣದ ಯಡ್ರಾಂವಿ ರಸ್ತೆಯಲ್ಲಿರುವ ಫಾರ್ಮ್‌ಹೌಸ್​​ನಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ಈ ವೇಳೆ ಸಚಿವರಾದ ಸಿ.ಸಿ.ಪಾಟೀಲ್​, ಶಂಕರಪಾಟೀಲ್ ಮುನೇನಕೊಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಹೇಶ ತೆಂಗಿನಕಾಯಿ, ಎನ್.ಹೆಚ್.ಕೋನರೆಡ್ಡಿ ಮತ್ತು ವಿವಿಧ ಮಠಾಧೀಶರು ಇದ್ದರು.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ್ ಮಾಮನಿ ಅವರು ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮಧ್ಯರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಆನಂದ ಮಾಮನಿ ಅವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆ ಕೆಲ ದಿನಗಳಿಂದ ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಇತ್ತೀಚೆಗಷ್ಟೇ ಈ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ಆನಂದ್ ಮಾಮನಿ ಅವರು, ಶೀಘ್ರದಲ್ಲೇ ಗುಣಮುಖವಾಗಿ ಜನ ಸೇವೆ ಬರುತ್ತೇನೆ. ಯಾರು ಆತಂಕಪಡಬೇಡಿ. ಊಹಾಪೋಹಗಳಿಗೆ ಕಿವಿಗೊಡಬೇಡಿ, ನಾನು ಚೆನ್ನಾಗಿದ್ದೇನೆ ಎಂದಿದ್ದರು.

ಮತ್ತಷ್ಟ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:09 pm, Sun, 23 October 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು