AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಂತ್ರಸ್ತೆಯ ಫೋಟೊ, ಸಂದರ್ಶನ ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ದೇಶನ

ಸಂತ್ರಸ್ತೆಗೆ ಸಾಂತ್ವನ ಹೇಳಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ಸಂದರ್ಭದಲ್ಲಿ ಮಾಧ್ಯಮ ವರದಿಗಳಲ್ಲಿ ಸಂತ್ರಸ್ತೆಯ ಮಸುಕಾದ ಛಾಯಾಚಿತ್ರಗಳನ್ನು ಪ್ರಕಟಿಸಿರುವುದನ್ನು ಪೀಠವು ವಿಚಾರಣೆ ವೇಳೆ ಉಲ್ಲೇಖಿಸಿದೆ.

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಂತ್ರಸ್ತೆಯ ಫೋಟೊ, ಸಂದರ್ಶನ ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ದೇಶನ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on: Dec 13, 2023 | 7:04 AM

Share

ಬೆಳಗಾವಿ, ಡಿಸೆಂಬರ್ 13: ಬೆಳಗಾವಿ (Belagavi) ತಾಲೂಕಿನಲ್ಲಿ ಮಹಿಳೆಯೊಬ್ಬರನ್ನು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಅವರ ಮೇಲೆ ಹಲ್ಲೆ ನಡೆಸಿ, ಬೆತ್ತಲೆಯಾಗಿ ಮೆರವಣಿಗೆ ನಡೆಸಿದ ಘಟನೆ ಸಂಬಂಧ ಮಾಧ್ಯಮಗಳಲ್ಲಿ ಪ್ರಸಾರವಾದ ವಿಚಾರಗಳ ಬಗ್ಗೆ ಕರ್ನಾಟಕ ಹೈಕೋರ್ಟ್ (Karnataka High Court) ಕಳವಳ ವ್ಯಕ್ತಪಡಿಸಿದೆ. ಈ ವಿಚಾರವಾಗಿ ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಿದ ಕೋರ್ಟ್, ಯಾವುದೇ ರಾಷ್ಟ್ರೀಯ ಅಥವಾ ಪ್ರಾದೇಶಿಕ ಚಾನೆಲ್‌ಗಳಲ್ಲಿ ಸಂತ್ರಸ್ತೆಯ ಸಂದರ್ಶನಗಳನ್ನು ಪ್ರಸಾರ ಮಾಡದಂತೆ ಸುದ್ದಿ ವಾಹಿನಿಗಳಿಗೆ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

ಸಂತ್ರಸ್ತೆಯ ಕುರಿತಾದ ಸುದ್ದಿ ಲೇಖನಗಳ ಶೀರ್ಷಿಕೆ ಮತ್ತು ವಿಷಯಗಳು ನಮ್ಮ ಆತ್ಮಸಾಕ್ಷಿಯನ್ನು ಆಘಾತಗೊಳಿಸುವುದಷ್ಟೇ ಅಲ್ಲದೆ, ದುಃಖ ಮತ್ತು ನೋವಿನಿಂದ ತಲೆ ತಗ್ಗಿಸುವಂತೆ ಮಾಡುತ್ತದೆ. ಒಂದು ಕಡೆ ಈ ದೇಶವು 76ನೇ ವರ್ಷದ ಸ್ವಾತಂತ್ರ್ಯವನ್ನು ‘ಆಜಾದಿ ಕಾ ಅಮೃತೋತ್ಸವ’ ಎಂದು ಆಚರಿಸುತ್ತಿದ್ದರೆ, ಮತ್ತೊಂದೆಡೆ ಪ್ರಗತಿಪರ ಮತ್ತು ಸಾಮಾಜಿಕ ನ್ಯಾಯದ ದೀಕ್ಷೆಯ ಪ್ರವರ್ತಕ ರಾಜ್ಯ ಎಂದು ಖ್ಯಾತಿವೆತ್ತ ಕರ್ನಾಟಕ ರಾಜ್ಯದಲ್ಲಿ ಇಂಥ ಘಟನೆಯ ಬಗ್ಗೆ ಕೇಳಬೇಕಾಗಿ ಬಂದಿದೆ ಎಂದು ಪೀಠ ಹೇಳಿದೆ.

ಸಂತ್ರಸ್ತೆಗೆ ಸಾಂತ್ವನ ಹೇಳಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ಸಂದರ್ಭದಲ್ಲಿ ಮಾಧ್ಯಮ ವರದಿಗಳಲ್ಲಿ ಸಂತ್ರಸ್ತೆಯ ಮಸುಕಾದ ಛಾಯಾಚಿತ್ರಗಳನ್ನು ಪ್ರಕಟಿಸಿರುವುದನ್ನು ಪೀಠವು ಉಲ್ಲೇಖಿಸಿದೆ.

ಕೆಲವು ವಿದ್ಯುನ್ಮಾನ ಮಾಧ್ಯಮಗಳು ಅಥವಾ ಅದರ ಪ್ರತಿನಿಧಿಗಳು ಸಂತ್ರಸ್ತೆಯ ಪ್ರತಿಕ್ರಿಯೆ ಮತ್ತು ನಿರೂಪಣೆಯನ್ನು ಛಾಯಾಚಿತ್ರ ಮತ್ತು ವೀಡಿಯೊಗ್ರಾಫ್ ಮಾಡುತ್ತಿರುವುದನ್ನು ಫೋಟೋದಲ್ಲಿ ಗಮನಿಸಬಹುದಾಗಿದೆ ಎಂದು ಪೀಠ ಹೇಳಿದೆ.

ಯಾವುದೇ ಮಾಧ್ಯಮ ಸಂಸ್ಥೆ ಅಥವಾ ಅದರ ಪ್ರತಿನಿಧಿಗಳು ಸಚಿವರ ಭೇಟಿಯ ಸಮಯದಲ್ಲಿ ಸಂತ್ರಸ್ತೆಯ ಸಂದರ್ಶನವನ್ನು ಅಥವಾ ಸಂತ್ರಸ್ತೆಯ ಯಾವುದೇ ಹೇಳಿಕೆಯನ್ನು ವೀಡಿಯೊಗ್ರಾಫ್ ಮಾಡಿದ್ದರೆ, ಅಂತಹ ಸಂದರ್ಶನ ಅಥವಾ ಸಂವಾದವನ್ನು ಯಾವುದೇ ರಾಷ್ಟ್ರೀಯ ಅಥವಾ ಪ್ರಾದೇಶಿಕ ಚಾನೆಲ್‌ಗಳಲ್ಲಿ ಪ್ರಸಾರ ಮಾಡದಂತೆ ನ್ಯಾಯಾಲಯವು ಈ ಮೂಲಕ ನಿರ್ದೇಶಿಸುತ್ತದೆ. ಅಂತಹ ಸಂದರ್ಶನವನ್ನು ಈಗಾಗಲೇ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಪ್ರದರ್ಶಿಸಿದ್ದರೆ ಅಥವಾ ಪ್ರಸಾರ ಮಾಡಿದ್ದರೆ, ಅದನ್ನು ಮುಂದುವರಿಸಬಾರದು. ಇನ್ನು ಮುಂದೆ ಪ್ರದರ್ಶನ ಅಥವಾ ಪ್ರಸಾರ ಮಾಡಬಾರದು ಎಂದು ಪೀಠ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಓಡಿ ಹೋಗಿದ್ದ ಯುವಕ, ಯುವತಿ ಪ್ರತ್ಯಕ್ಷ

ಈ ಮಧ್ಯೆ, ಘಟನೆಯ ಕುರಿತ ಸ್ಥಿತಿಗತಿ ವರದಿಯನ್ನು ಡಿಸೆಂಬರ್ 14ರಂದು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಅಡ್ವೊಕೇಟ್ ಜನರಲ್‌ಗೆ ಹೈಕೋರ್ಟ್​ ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ