AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನಮ್ಮನ ಅರಮನೆ ನಿರ್ಮಾಣಕ್ಕೆ 115 ಕೋಟಿ ರೂ ಸಿಎಂ ಬೊಮ್ಮಾಯಿ ಘೋಷಣೆ

ರಾಜ್ಯ ಸರ್ಕಾರವು ಇದೇ ಮೊದಲ ಬಾರಿಗೆ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವಾಗಿ ಆಚರಿಸುತ್ತಿದ್ದು, ಮೂರು ದಿನಗಳ ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

ಚೆನ್ನಮ್ಮನ ಅರಮನೆ ನಿರ್ಮಾಣಕ್ಕೆ 115 ಕೋಟಿ ರೂ ಸಿಎಂ ಬೊಮ್ಮಾಯಿ ಘೋಷಣೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Oct 24, 2022 | 9:05 PM

Share

ಬೆಳಗಾವಿ: ಕಿತ್ತೂರು ಬಗ್ಗೆ ಎಷ್ಟು ಅಭಿಮಾನ ಪಡುತ್ತಿದ್ದೇವೆ ಅಷ್ಟೇ ಅಭಿವೃದ್ಧಿ ಅವಶ್ಯಕವಿದೆ. ಚೆನ್ನಮ್ಮನ ಅರಮನೆ ನಿರ್ಮಾಣಕ್ಕೆ ನಮ್ಮ ನಾಯಕ ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ (BS Yadiyurappa) 50 ಕೋಟಿ ಕೊಟ್ಟಿದ್ದರು, ನಾವು ಈಗ ಅದನ್ನು 115 ಕೋಟಿ ರೂ ಕೊಟ್ಟಿದ್ದೇವೆ ಎಂದು ಚೆನ್ನಮ್ಮನ ಕಿತ್ತೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹೇಳಿದ್ದಾರೆ. ಬೆಳಗಾವಿ (Belagavi) ಜಿಲ್ಲೆಯ ಚೆನ್ನಮ್ಮನ ಕಿತ್ತೂರಿನಲ್ಲಿ (Kittur Chennamma) ಅ. 23ರಿಂದ ಮೂರು ದಿನಗಳ ಕಾಲ ಕಿತ್ತೂರು ಉತ್ಸವ (Kittur Ustav) ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಚೆನ್ನಮ್ಮನ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವಾಗಿ ಆಚರಿಸುತ್ತಿದೆ.  ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಈ ಭಾಗದ ನೀರಾವರಿ ಯೋಜನೆಗೆ ಶಾಸಕ ಮಹಾಂತೇಶ್ ದೊಡ್ಡಗೌಡರ 580 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಧಾನಿಯವರ ಜಲಜೀವನ್ ಮಿಷನ್ ಅಡಿಯಲ್ಲಿ ಎಲ್ಲ ಊರಿಗೆ ಕುಡಿಯುವ ನೀರು ಪೂರೈಕೆಯಾಗುತ್ತದೆ. ಕಿತ್ತೂರು, ಬೈಲಹೊಂಗಲ, ಖಾನಾಪುರ, ಸವದತ್ತಿ ಸೇರಿ 980 ಕೋಟಿ ರೂ. ನೀಡಿದ್ದೇವೆ. ಅರಮನೆಯ ಪಕ್ಕದಲ್ಲೇ ಕೋಟೆ ನಿರ್ಮಾಣಕ್ಕೆ, ಭೂಸ್ವಾಧೀನ ಮಾಡಿಕೊಳ್ಳಲು ಎಷ್ಟು ಖರ್ಚು ಬರುತ್ತೊ ಅದನ್ನು ಕೊಟ್ಟು ಸ್ವಾಧೀನ ಮಾಡಿಕೊಳ್ಳುತ್ತೇವೆ. ಮೂಲ ಚನ್ನಮ್ಮ ಕೋಟೆ ಅಭಿವೃದ್ಧಿಗೆ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 27 ಕೋಟಿ ರೂ. ನೀಡಿದ್ದೇವೆ ಎಂದು ತಿಳಿಸಿದರು.

ಕಿತ್ತೂರು ಬಳಿಯ ಕೆಐಎಡಿಬಿ ಯೋಜನೆಯಗೆ ಒಂದು ಸಾವಿರ ಕೋಟಿ ಅನುದಾನ ಘೋಷಣೆ ಮಾಡಿದ್ದೇವೆ. ಅಲ್ಲಿ ಕನಿಷ್ಟ 50 ಸಾವಿರ ಯುವಕರಿಗೆ ಕೆಲಸ ಸಿಗಬೇಕೆಂಬ ಅಭಿಲಾಷೆ ನಮ್ಮದಾಗಿದೆ. ಧಾರವಾಡ – ಕಿತ್ತೂರು – ಬೆಳಗಾವಿ ರೈಲು ಕಾಮಗಾರಿಗೆ ಕೇಂದ್ರ ಒಪ್ಪಿಗೆ ಕೊಟ್ಟಿದೆ. ಭೂಸ್ವಾಧೀನ ಮಾಡಿ ಆದಷ್ಟು ಬೇಗ ಕೆಲಸ ಪ್ರಾರಂಭ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಕಿತ್ತೂರು ಕರ್ನಾಟಕದ ಸಮಗ್ರ ಅಭಿವೃದ್ಧಿ ಸಂಕಲ್ಪವನ್ನು ನಮ್ಮ ಸರ್ಕಾರ ಮಾಡಿದೆ. ನಿಮ್ಮೆಲ್ಲರ ಆಶೀರ್ವಾದ, ಚನ್ನಮ್ಮ ಆಶೀರ್ವಾದದಿಂದ ಎರಡು ನೀರಾವರಿ ಯೋಜನೆಗೆ ಅನುಮತಿ ಪಡೆಯಬೇಕಿದೆ. ಕೃಷ್ಣ ಮೇಲ್ದಂಡೆ ಸ್ಟೇಜ್ 3 ಯೋಜನೆಗೆ ಕೋರ್ಟ್​​ನಲ್ಲಿದ್ದು ಒಳ್ಳೆ ಸುದ್ದಿ ಬಂದರೆ ಯೋಜನೆ ಪ್ರಾರಂಭ ಮಾಡುತ್ತೇವೆ. ಆಲಮಟ್ಟಿ ಆಣೆಕಟ್ಟುನ್ನು ಎತ್ತರ ಮಾಡುತ್ತೇವೆ. ಕಳಸಾ ಬಂಡೂರಿ ಯೋಜನೆ ಅಂತಿಮ ಹಂತದಲ್ಲಿದೆ. ಅದಕ್ಕೂ ಒಪ್ಪಿಗೆ ಪಡೆದು ಆದಷ್ಟು ಬೇಗ ಕೆಲಸ ಮುಗಿಸುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:28 pm, Mon, 24 October 22

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ