Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನಮ್ಮನ ಅರಮನೆ ನಿರ್ಮಾಣಕ್ಕೆ 115 ಕೋಟಿ ರೂ ಸಿಎಂ ಬೊಮ್ಮಾಯಿ ಘೋಷಣೆ

ರಾಜ್ಯ ಸರ್ಕಾರವು ಇದೇ ಮೊದಲ ಬಾರಿಗೆ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವಾಗಿ ಆಚರಿಸುತ್ತಿದ್ದು, ಮೂರು ದಿನಗಳ ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

ಚೆನ್ನಮ್ಮನ ಅರಮನೆ ನಿರ್ಮಾಣಕ್ಕೆ 115 ಕೋಟಿ ರೂ ಸಿಎಂ ಬೊಮ್ಮಾಯಿ ಘೋಷಣೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 24, 2022 | 9:05 PM

ಬೆಳಗಾವಿ: ಕಿತ್ತೂರು ಬಗ್ಗೆ ಎಷ್ಟು ಅಭಿಮಾನ ಪಡುತ್ತಿದ್ದೇವೆ ಅಷ್ಟೇ ಅಭಿವೃದ್ಧಿ ಅವಶ್ಯಕವಿದೆ. ಚೆನ್ನಮ್ಮನ ಅರಮನೆ ನಿರ್ಮಾಣಕ್ಕೆ ನಮ್ಮ ನಾಯಕ ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ (BS Yadiyurappa) 50 ಕೋಟಿ ಕೊಟ್ಟಿದ್ದರು, ನಾವು ಈಗ ಅದನ್ನು 115 ಕೋಟಿ ರೂ ಕೊಟ್ಟಿದ್ದೇವೆ ಎಂದು ಚೆನ್ನಮ್ಮನ ಕಿತ್ತೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹೇಳಿದ್ದಾರೆ. ಬೆಳಗಾವಿ (Belagavi) ಜಿಲ್ಲೆಯ ಚೆನ್ನಮ್ಮನ ಕಿತ್ತೂರಿನಲ್ಲಿ (Kittur Chennamma) ಅ. 23ರಿಂದ ಮೂರು ದಿನಗಳ ಕಾಲ ಕಿತ್ತೂರು ಉತ್ಸವ (Kittur Ustav) ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಚೆನ್ನಮ್ಮನ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವಾಗಿ ಆಚರಿಸುತ್ತಿದೆ.  ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಈ ಭಾಗದ ನೀರಾವರಿ ಯೋಜನೆಗೆ ಶಾಸಕ ಮಹಾಂತೇಶ್ ದೊಡ್ಡಗೌಡರ 580 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಧಾನಿಯವರ ಜಲಜೀವನ್ ಮಿಷನ್ ಅಡಿಯಲ್ಲಿ ಎಲ್ಲ ಊರಿಗೆ ಕುಡಿಯುವ ನೀರು ಪೂರೈಕೆಯಾಗುತ್ತದೆ. ಕಿತ್ತೂರು, ಬೈಲಹೊಂಗಲ, ಖಾನಾಪುರ, ಸವದತ್ತಿ ಸೇರಿ 980 ಕೋಟಿ ರೂ. ನೀಡಿದ್ದೇವೆ. ಅರಮನೆಯ ಪಕ್ಕದಲ್ಲೇ ಕೋಟೆ ನಿರ್ಮಾಣಕ್ಕೆ, ಭೂಸ್ವಾಧೀನ ಮಾಡಿಕೊಳ್ಳಲು ಎಷ್ಟು ಖರ್ಚು ಬರುತ್ತೊ ಅದನ್ನು ಕೊಟ್ಟು ಸ್ವಾಧೀನ ಮಾಡಿಕೊಳ್ಳುತ್ತೇವೆ. ಮೂಲ ಚನ್ನಮ್ಮ ಕೋಟೆ ಅಭಿವೃದ್ಧಿಗೆ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 27 ಕೋಟಿ ರೂ. ನೀಡಿದ್ದೇವೆ ಎಂದು ತಿಳಿಸಿದರು.

ಕಿತ್ತೂರು ಬಳಿಯ ಕೆಐಎಡಿಬಿ ಯೋಜನೆಯಗೆ ಒಂದು ಸಾವಿರ ಕೋಟಿ ಅನುದಾನ ಘೋಷಣೆ ಮಾಡಿದ್ದೇವೆ. ಅಲ್ಲಿ ಕನಿಷ್ಟ 50 ಸಾವಿರ ಯುವಕರಿಗೆ ಕೆಲಸ ಸಿಗಬೇಕೆಂಬ ಅಭಿಲಾಷೆ ನಮ್ಮದಾಗಿದೆ. ಧಾರವಾಡ – ಕಿತ್ತೂರು – ಬೆಳಗಾವಿ ರೈಲು ಕಾಮಗಾರಿಗೆ ಕೇಂದ್ರ ಒಪ್ಪಿಗೆ ಕೊಟ್ಟಿದೆ. ಭೂಸ್ವಾಧೀನ ಮಾಡಿ ಆದಷ್ಟು ಬೇಗ ಕೆಲಸ ಪ್ರಾರಂಭ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಕಿತ್ತೂರು ಕರ್ನಾಟಕದ ಸಮಗ್ರ ಅಭಿವೃದ್ಧಿ ಸಂಕಲ್ಪವನ್ನು ನಮ್ಮ ಸರ್ಕಾರ ಮಾಡಿದೆ. ನಿಮ್ಮೆಲ್ಲರ ಆಶೀರ್ವಾದ, ಚನ್ನಮ್ಮ ಆಶೀರ್ವಾದದಿಂದ ಎರಡು ನೀರಾವರಿ ಯೋಜನೆಗೆ ಅನುಮತಿ ಪಡೆಯಬೇಕಿದೆ. ಕೃಷ್ಣ ಮೇಲ್ದಂಡೆ ಸ್ಟೇಜ್ 3 ಯೋಜನೆಗೆ ಕೋರ್ಟ್​​ನಲ್ಲಿದ್ದು ಒಳ್ಳೆ ಸುದ್ದಿ ಬಂದರೆ ಯೋಜನೆ ಪ್ರಾರಂಭ ಮಾಡುತ್ತೇವೆ. ಆಲಮಟ್ಟಿ ಆಣೆಕಟ್ಟುನ್ನು ಎತ್ತರ ಮಾಡುತ್ತೇವೆ. ಕಳಸಾ ಬಂಡೂರಿ ಯೋಜನೆ ಅಂತಿಮ ಹಂತದಲ್ಲಿದೆ. ಅದಕ್ಕೂ ಒಪ್ಪಿಗೆ ಪಡೆದು ಆದಷ್ಟು ಬೇಗ ಕೆಲಸ ಮುಗಿಸುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:28 pm, Mon, 24 October 22

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು