AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ದಿನ ಮಗು ಅನುಮಾಸ್ಪದ ಸಾವು:ತಂದೆಯೇ ಮಗುವಿಗೆ ವಿಷ ಪ್ರಾಶನ ಶಂಕೆ

ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ ನಡೆದಿದೆ. 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಮಗು ಪ್ರಿಯಾಂಕಾ ಏಕಾಏಕಿ ಸಾವನ್ನಪ್ಪಿದ್ದು, ತಂದೆಯೇ ಮಗುವಿಗೆ ವಿಷ ಪ್ರಾಶನ ಮಾಡಿರುವ ಆರೋಪ ಕೇಳಿಬಂದಿದೆ. ಇಂದು (ಮಾರ್ಚ್ 17) ಮಧ್ಯಾಹ್ನ ಮಗಳನ್ನ ನೋಡಲು ಸಣ್ಣದೊಂದು ಟ್ಯೂಬ್ ಹಿಡಿದುಕೊಂಡು ಬಂದಿದ್ದ. ಆದ್ರೆ, ತಂದೆ ಹೋದ ಬಳಿಕ ಕೆಲ ಹೊತ್ತಿನಲ್ಲಿ ಮಗು ಸಾವನ್ನಪ್ಪಿದ್ದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

15 ದಿನ ಮಗು ಅನುಮಾಸ್ಪದ ಸಾವು:ತಂದೆಯೇ ಮಗುವಿಗೆ ವಿಷ ಪ್ರಾಶನ ಶಂಕೆ
ಪ್ರಾತಿನಿಧಿಕ ಚಿತ್ರ
Sahadev Mane
| Edited By: |

Updated on: Mar 17, 2026 | 11:04 PM

Share

ಬೆಳಗಾವಿ, (ಮಾರ್ಚ್ 17): 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಮಗು ಏಕಾಏಕಿ ಸಾವನ್ನಪ್ಪಿದ್ದು, ತಂದೆ ಮೇಲೆ ಅನುಮಾನ ವ್ಯಕ್ತವಾಗಿದೆ. ಹೌದು…ಳಗಾವಿ (Belagavi) ತಾಲೂಕಿನ ಉಕ್ಕಡ ಗ್ರಾಮದಲ್ಲಿ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಮಗು ಪ್ರಿಯಾಂಕಾ ಇಂದು (ಮಾರ್ಚ್ 17) ಏಕಾಏಕಿ ಸಾವನ್ನಪ್ಪಿದ್ದು, ತಂದೆಯೇ ಮಗುವಿಗೆ ವಿಷ ಪ್ರಾಶನ ಮಾಡಿರುವ ಆರೋಪ ಕೇಳಿಬಂದಿದೆ. ಬಿಮ್ಸ್ ಆಸ್ಪತ್ರೆ ಮುಂದೆ ಮಗುವಿನ ಶವವಿಟ್ಟುಕೊಂಡು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಮತ್ತೊಂದೆಡೆ ಮಗುವಿನ ತಂದೆ ಭೀಮರಾಯ ತಲೆಮರೆಸಿಕೊಂಡಿದ್ದಾನೆ. ಬಿಮ್ಸ್ ಆಸ್ಪತ್ರೆಗೆ ಡಿಸಿಪಿ ನಾರಾಯಣ್ ಬರಮನಿ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆ ವರದಿ ಬಳಿಕ ಮುಂದಿನ ಕ್ರಮದ ಭರವಸೆ ನೀಡಿದ್ದಾರೆ.

ಹೆರಿಗೆ ಹಿನ್ನೆಲೆ ಶೀಲಾ ತವರುಮನೆ ಉಕ್ಕಡ ಗ್ರಾಮದಲ್ಲಿ ಇದ್ದಳು. ಹೀಗಾಗಿ ಭೀಮರಾಯ ಇಂದು (ಮಾರ್ಚ್ 17) ಮಧ್ಯಾಹ್ನ ಉಕ್ಕಡ ಗ್ರಾಮ ಆಗಮಿಸಿ ಪತ್ನಿ ಹಾಗೂ ಮಗು ಪ್ರಿಯಾಂಕಾಳನ್ನ ನೋಡಿಕೊಂಡು ವಾಪಸ್ ತಮ್ಮೂರು ಕಡೆ ಹೋಗಿದ್ದಾನೆ. ಆದ್ರೆ, ಏಕಾಏಕಿ ಮಗು ಸಾವನ್ನಪ್ಪಿದೆ. ಇದರಿಂದ ಪೋಷಕರು ಕಂಗಾಲಾಗಿದ್ದು, ಮಗು ಚೆನ್ನಾಗಿತ್ತು ದಿಢೀರ್ ಏನಾಯ್ತು ಎಂದು ಯೋಚಿಸುವಾಗ ಮೃತ ಮಗುವಿನ ತಂದೆ ಭೀಮರಾಯನ ಮೇಲೆ ಅನುಮಾನ ಬಂದಿದೆ.

ಇದನ್ನೂ ಓದಿ: ಒಂದೇ ರೂಮ್​ನಲ್ಲಿದ್ದ ಸ್ನೇಹಿತರ ನಡುವೆ ಗಲಾಟೆ: ಸುತ್ತಿಗೆಯಿಂದ ಹೊಡೆದು ಗೆಳೆಯನ ಬರ್ಬರ ಹತ್ಯೆ

ಸಣ್ಣದೊಂದು ಟ್ಯೂಬ್ ಹಿಡಿದುಕೊಂಡು ಬಂದಿದ್ದ. ಅದೇ ಟ್ಯೂಬ್​ನಿಂದ ಮಗುವಿಗೆ ಕುಡಿಸಿದ್ದಾನೆ ಎಂದು ಪತ್ನಿ ಶೀಲಾ ಹಾಗೂ ಆಕೆಯ ಪೋಷಕರಿಂದ ಗಂಭೀರ ಆರೋಪ ಮಾಡಿದ್ದಾರೆ. ಇನ್ನೊಂದೆಡೆ ಭೀಮರಾಯ ಸಹ ನಾಪತ್ತೆಯಾಗಿದ್ದು, ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ. ಸದ್ಯ ಬಿಮ್ಸ್ ಆಸ್ಪತ್ರೆ ಮುಂದೆ ಮಗುವಿನ ಶವವಿಟ್ಟುಕೊಂಡು ಆಕ್ರೋಶ ಹೊರಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ  ಡಿಸಿಪಿ ನಾರಾಯಣ್ ಬರಮನಿ ಆಗಮಿಸಿ ಪರಿಶೀಲನೆ ಮಾಡಿದ್ದು, ಮೃತ ಮಗುವಿನ ಮರಣೋತ್ತರ ಪರೀಕ್ಷೆ ಬಳಿಕ ಸತ್ಯ ಆಚೆ ಬರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ
ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!