AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ದಾಖಲೆ ಇಲ್ಲದ 2 ಕೋಟಿ ಹಣ ಜಪ್ತಿ, ಐಟಿ ಅಧಿಕಾರಿಗಳಿಗೆ ಮಾಹಿತಿ ನೀಡಿದ ಪೊಲೀಸರು

ತಾಲೂಕಿನ ಹಿರೇಬಾಗೇವಾಡಿ ಟೋಲ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ ಹಣವನ್ನ ಜಪ್ತಿ ಮಾಡಿದ್ದಾರೆ. ಮುಂಬೈನಿಂದ ಬೆಂಗಳೂರಿಗೆ ಹೊರಟಿದ್ದ ಕೆಎ 70 1459 ಸಂಖ್ಯೆಯ ಖಾಸಗಿ ಬಸ್​ನ್ನ ಬೆಳಗಿನ ಜಾವ 3.30ರ ಸುಮಾರಿಗೆ ತಪಾಸಣೆ ನಡೆಸಿದ ವೇಳೆ ಅಕ್ರಮ ಹಣ ಪತ್ತೆಯಾಗಿದೆ.

ಬೆಳಗಾವಿಯಲ್ಲಿ ದಾಖಲೆ ಇಲ್ಲದ 2 ಕೋಟಿ ಹಣ ಜಪ್ತಿ, ಐಟಿ ಅಧಿಕಾರಿಗಳಿಗೆ ಮಾಹಿತಿ ನೀಡಿದ ಪೊಲೀಸರು
ಪ್ರಾತಿನಿಧಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Apr 05, 2023 | 9:19 AM

Share

ಬೆಳಗಾವಿ: ವಿಧಾನಸಭೆ ಚುನಾವಣಾ(Karnataka Assembly Election) ಹಿನ್ನೆಲೆ ರಾಜ್ಯದಲ್ಲೆಡೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಹಚ್ಚಲು ಕಟ್ಟುನಿಟ್ಟಿನ ಕ್ರಮವಹಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಅದರಂತೆ ಇದೀಗ ತಾಲೂಕಿನ ಹಿರೇಬಾಗೇವಾಡಿ ಟೋಲ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ ಹಣವನ್ನ ಜಪ್ತಿ ಮಾಡಿದ್ದಾರೆ. ಮುಂಬೈನಿಂದ ಬೆಂಗಳೂರಿಗೆ ಹೊರಟಿದ್ದ ಕೆಎ 70 1459 ಸಂಖ್ಯೆಯ ಖಾಸಗಿ ಬಸ್​ನ್ನ ಬೆಳಗಿನ ಜಾವ 3.30ರ ಸುಮಾರಿಗೆ ತಪಾಸಣೆ ನಡೆಸಿದ ವೇಳೆ ಅಕ್ರಮ ಹಣ ಪತ್ತೆಯಾಗಿದೆ. ಇನ್ನು ಪೊಲೀಸರು ಅನಧಿಕೃತ ಹಣದ ಬಗ್ಗೆ ಐಟಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಖುದ್ದು ಸ್ಥಳಕ್ಕೆ ಬೇಟಿ ನೀಡಿ ಪೊಲೀಸರ ಕಾರ್ಯಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಆರು ದಿನಗಳಲ್ಲಿ ಒಟ್ಟಾರೆ 47 ಕೋಟಿ 43 ಲಕ್ಷದ 85 ಸಾವಿರ ರೂ. ಮೌಲ್ಯದ ವಸ್ತು ಜಪ್ತಿ 

ರಾಜ್ಯದಲ್ಲಿ ಕಳೆದ ಆರು ದಿನಗಳ ಕಾರ್ಯಚರಣೆಯಲ್ಲಿ ಒಟ್ಟಾರೆ 47 ಕೋಟಿ 43 ಲಕ್ಷದ 85 ಸಾವಿರ ರೂ. ಮೌಲ್ಯದ ವಸ್ತು ಜಪ್ತಿ ಮಾಡಲಾಗಿದೆ. ಈ ಕುರಿತು ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳಿಂದ ಅಧಿಕೃತ ಮಾಹಿತಿ ಹೊರಬಿದ್ದಿತ್ತು. ನೀತಿ ಸಂಹಿತೆ ಜಾರಿ ಬಳಿಕ 6 ದಿನಗಳ ಕಾರ್ಯಾಚರಣೆಯಲ್ಲಿ 12 ಕೋಟಿ 82 ಲಕ್ಷ 94 ಸಾವರ ರೂ. ನಗದು, ರಾಜ್ಯದಲ್ಲಿ 16 ಕೋಟಿ ಮೌಲ್ಯದ 2,78,798 ಲೀಟರ್ ಮದ್ಯ, 41 ಲಕ್ಷ ರೂಪಾಯಿ ಮೌಲ್ಯದ 79.44 ಕೆ.ಜಿ ಮಾದಕವಸ್ತು, 6 ಕೋಟಿ 72 ಲಕ್ಷ ರೂಪಾಯಿ ಮೌಲ್ಯದ 13.575 ಕೆ.ಜಿ ಚಿನ್ನ, 63 ಲಕ್ಷ 98 ಸಾವಿರ ಮೌಲ್ಯದ 88.763 ಕೆಜಿ ಬೆಳ್ಳಿ ಆಭರಣ ಸೀಜ್​ ಮಾಡಲಾಗಿತ್ತು.

ಈವರೆಗೆ 10 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಗಿಫ್ಟ್‌ಗಳು ವಶ ಪಡೆಸಿಕೊಂಡಿದ್ದು, ನಗದು, ಮದ್ಯ, ಡ್ರಗ್ಸ್ ಜಪ್ತಿ ಸಂಬಂಧ ಒಟ್ಟು 316 ಪ್ರಕರಣ ದಾಖಲು ಮಾಡಲಾಗಿದೆ. 31,486 ಶಸ್ತ್ರಾಸ್ತ್ರ ಠೇವಣಿ, 10 ಶಸ್ತ್ರಾಸ್ತ್ರಗಳನ್ನ ಠೇವಣಿ ಮಾಡಿಲ್ಲ. ರಾಜ್ಯದಲ್ಲಿ ಈವರೆಗೆ 7 ಗನ್‌ ಲೈಸೆನ್ಸ್‌ಗಳನ್ನು ರದ್ದುಗೊಳಿಸಲಾಗಿದೆ. ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ 1,416 ಜನರ ವಿರುದ್ಧ ಮೊಕದ್ದಮೆ ಹೂಡಲಾಗಿದೆ.

ಇದನ್ನೂ ಓದಿ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಚುನಾವಣಾ ಇ-ಪೇಪರ್ ಬಿಡುಗಡೆ

7 ಲಕ್ಷ ಮೌಲ್ಯದ ಅಕ್ಕಿ ವಶಕ್ಕೆ 

ಶಿವಮೊಗ್ಗ: ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನಲೆ ದಾಖಲೆಗಳಿಲ್ಲದೇ ಲಾರಿಯಲ್ಲಿ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಅಂದಾಜು 7 ಲಕ್ಷ ಮೌಲ್ಯದ ಒಟ್ಟು 460 ಚೀಲಗಳಲ್ಲಿ ತುಂಬಿದ್ದ 119 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಅಂದಾಜು 1.4 ಲಕ್ಷ ಮೌಲ್ಯದ ಒಟ್ಟು 50 ಗ್ಯಾಸ್​ಸ್ಟೋವ್​ ​ಗಳನ್ನು ಕೋಟೆ ಪೊಲೀಸರು ಸೀಜ್ ಮಾಡಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು