AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ಡಬಲ್ ಮಾಡಿ‌ ಕೊಡುವುದಾಗಿ 25 ಲಕ್ಷ ರೂ. ವಂಚನೆ; ಪೊಲೀಸ್​ ಬಲೆಗೆ ಬಿದ್ದ 6 ಜನರ ಗ್ಯಾಂಗ್

ಹಣ ಡಬಲ್ ಮಾಡಿ‌ ಕೊಡುವುದಾಗಿ ಬೆಳಗಾವಿ ಜಿಲ್ಲೆಯ ಗೋಕಾಕ್(Gokak)​ನ ವಿದ್ಯಾನಗರದಲ್ಲಿ ವಾಸವಾಗಿದ್ದ ಸಿದ್ದನಗೌಡ ಬಿರಾದಾರ್ ಎಂಬುವವರಿಗೆ ಕಳೆದ ನವೆಂಬರ್​ನಲ್ಲಿ 25 ಲಕ್ಷ ರೂ. ವಂಚಿಸಿ ಪರಾರಿಯಾದ ಗ್ಯಾಂಗ್​ನ್ನು ಇದೀಗ ಕಾಕತಿ ಪೊಲೀಸರು(Kakati Police) ಬಂಧಿಸಿದ್ದಾರೆ.

ಹಣ ಡಬಲ್ ಮಾಡಿ‌ ಕೊಡುವುದಾಗಿ 25 ಲಕ್ಷ ರೂ. ವಂಚನೆ; ಪೊಲೀಸ್​ ಬಲೆಗೆ ಬಿದ್ದ 6 ಜನರ ಗ್ಯಾಂಗ್
ಬಂಧಿತ ಆರೋಪಿಗಳು
ಸಹದೇವ್​ ಮಾನೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 29, 2023 | 3:32 PM

Share

ಬೆಳಗಾವಿ, ಡಿ.29: ಹಣ ಡಬಲ್ ಮಾಡಿ‌ ಕೊಡುವುದಾಗಿ 25 ಲಕ್ಷ ರೂ. ವಂಚಿಸಿ ಪರಾರಿಯಾದ ಗ್ಯಾಂಗ್​ನ್ನು ಕಾಕತಿ ಪೊಲೀಸರು(Kakati Police) ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್(Gokak)​ನ ವಿದ್ಯಾನಗರದಲ್ಲಿ ವಾಸವಾಗಿದ್ದ ಸಿದ್ದನಗೌಡ ಬಿರಾದಾರ್ ಎಂಬುವವರಿಗೆ ಕಳೆದ ನವೆಂಬರ್​ನಲ್ಲಿ ವಂಚನೆ ಮಾಡಿದ್ದರು. ಈ ಹಿನ್ನಲೆ ಸಿದ್ದನಗೌಡ ಅವರು ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ಆರಂಭಿಸಿದ ಪೊಲೀಸರು, ಇದೀಗ ಆರು ಜನ ಖದೀಮರ ಗ್ಯಾಂಗ್​ನ್ನು ಅರೆಸ್ಟ್​ ಮಾಡಿದ್ದಾರೆ.

ಘಟನೆ ವಿವರ

ಕೊಲ್ಹಾಪುರದಿಂದ ಬಸ್​ನಲ್ಲಿ ಬರುವಾಗ ಸಿದ್ದನಗೌಡರಿಗೆ ಈ ಖದೀಮರ ಗ್ಯಾಂಗ್​ನ ಸದಸ್ಯೆ ಜಾಹ್ನವಿ ಪರಿಚಯ ಆಗಿದ್ದರು. ಬಳಿಕ ನಂಬರ್ ಕೂಡ ಎಕ್ಸಚೇಂಜ್ ಮಾಡಿಕೊಂಡಿದ್ದ ಮಹಿಳೆ, ನಮ್ಮಣ್ಣ ಬ್ಯಾಂಕ್​ನಲ್ಲಿ ಕೆಲಸ ಮಾಡುತ್ತಾನೆ. ನಿಮ್ಮ ಹಣ ಡಬಲ್ ಮಾಡಿ ಕೊಡುತ್ತೇವೆ ಎಂದು ಅವರನ್ನು ನಂಬಿಸಿ, ತನ್ನ ಕೆಡ್ಡಾಗೆ ಕೆಡವಿದ್ದಾಳೆ. ಎಲ್ಲವೂ ತಾನು ಅಂದುಕೊಂಡಂತೆ ಆಗುತ್ತಿದ್ದಂತೆ, ಸಿದ್ದನಗೌಡರಿಗೆ ಯಮಕನಮರಡಿಯ ಹೊಟೇಲ್ ಒಂದರಲ್ಲಿ ಹಣ ತರಲು ಹೇಳಿದ್ದಾಳೆ.

ಇದನ್ನೂ ಓದಿ:ಕೊರೊನಾ ನಡುವೆ ಅಮಾನುಷ ಕೆಲಸ: ದೇಶದ ವಿವಿಧೆಡೆ ನಕಲಿ ರೆಮಿಡಿಸಿವಿರ್ ಮಾರಾಟ; ಪೊಲೀಸರಿಂದ ಖದೀಮರ ಬಂಧನ

ಹಣ ತಂದ ನಂತರ ನಕಲಿ ಪೊಲೀಸರಿಂದ ದಾಳಿ

ಇನ್ನು ಸಿದ್ದನಗೌಡ ಅವರು ಹಣ ತಂದ ನಂತರ ಅವರದೇ ಗ್ಯಾಂಗ್​ನ ನಕಲಿ ಪೊಲೀಸರಿಂದ ದಾಳಿ ಮಾಡಿಸಿ, ಜಾಹ್ನವಿಯನ್ನು ಅರೆಸ್ಟ್ ಮಡಿದ್ದ ನಕಲಿ ಪೊಲೀಸರು, ಹಣದ ಜೊತೆಗೆ ಜಾಹ್ನವಿಯನ್ನು ಕರೆದುಕೊಂಡು ಪರಾರಿಯಾಗಿದ್ದರು. ಬಳಿಕ ಸಿದ್ದನಗೌಡ ಅವರಿಗೆ ತಾನು ಮೋಸ ಹೋಗಿದ್ದು ಗೊತ್ತಾದ ಬಳಿಕ ಕಾಕತಿ ಠಾಣೆಗೆ ಬಂದು ನಡೆದ ಘಟನೆಯನ್ನು ಸಂಪೂರ್ಣವಾಗಿ ವಿವರಿಸಿ ದೂರು ನೀಡಿದ್ದರು. ಅದರಂತೆ ದೂರು ದಾಖಲಿಸಿಕೊಂಡ ಪೊಲೀಸರು, ಮಾರು ವೇಷದಲ್ಲಿ ಹೋಗಿ ಹಣ ಡಬಲ್ ಮಾಡಿಕೊಡಿ ಎಂದು ಹೇಳಿ ಖದೀಮರ ಗ್ಯಾಂಗ್​ನ್ನು ಕೆಡ್ಡಾಗೆ ಕೆಡುವಿದ್ದಾರೆ. ಇದೀಗ ಮಾರುವೇಷ ಹಾಕಿ 6 ಜನರನ್ನು ಬಂಧಿಸಿದ್ದಾರೆ.‘

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?