AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ಡಬಲ್ ಮಾಡಿ‌ ಕೊಡುವುದಾಗಿ 25 ಲಕ್ಷ ರೂ. ವಂಚನೆ; ಪೊಲೀಸ್​ ಬಲೆಗೆ ಬಿದ್ದ 6 ಜನರ ಗ್ಯಾಂಗ್

ಹಣ ಡಬಲ್ ಮಾಡಿ‌ ಕೊಡುವುದಾಗಿ ಬೆಳಗಾವಿ ಜಿಲ್ಲೆಯ ಗೋಕಾಕ್(Gokak)​ನ ವಿದ್ಯಾನಗರದಲ್ಲಿ ವಾಸವಾಗಿದ್ದ ಸಿದ್ದನಗೌಡ ಬಿರಾದಾರ್ ಎಂಬುವವರಿಗೆ ಕಳೆದ ನವೆಂಬರ್​ನಲ್ಲಿ 25 ಲಕ್ಷ ರೂ. ವಂಚಿಸಿ ಪರಾರಿಯಾದ ಗ್ಯಾಂಗ್​ನ್ನು ಇದೀಗ ಕಾಕತಿ ಪೊಲೀಸರು(Kakati Police) ಬಂಧಿಸಿದ್ದಾರೆ.

ಹಣ ಡಬಲ್ ಮಾಡಿ‌ ಕೊಡುವುದಾಗಿ 25 ಲಕ್ಷ ರೂ. ವಂಚನೆ; ಪೊಲೀಸ್​ ಬಲೆಗೆ ಬಿದ್ದ 6 ಜನರ ಗ್ಯಾಂಗ್
ಬಂಧಿತ ಆರೋಪಿಗಳು
Follow us
Sahadev Mane
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 29, 2023 | 3:32 PM

ಬೆಳಗಾವಿ, ಡಿ.29: ಹಣ ಡಬಲ್ ಮಾಡಿ‌ ಕೊಡುವುದಾಗಿ 25 ಲಕ್ಷ ರೂ. ವಂಚಿಸಿ ಪರಾರಿಯಾದ ಗ್ಯಾಂಗ್​ನ್ನು ಕಾಕತಿ ಪೊಲೀಸರು(Kakati Police) ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್(Gokak)​ನ ವಿದ್ಯಾನಗರದಲ್ಲಿ ವಾಸವಾಗಿದ್ದ ಸಿದ್ದನಗೌಡ ಬಿರಾದಾರ್ ಎಂಬುವವರಿಗೆ ಕಳೆದ ನವೆಂಬರ್​ನಲ್ಲಿ ವಂಚನೆ ಮಾಡಿದ್ದರು. ಈ ಹಿನ್ನಲೆ ಸಿದ್ದನಗೌಡ ಅವರು ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ಆರಂಭಿಸಿದ ಪೊಲೀಸರು, ಇದೀಗ ಆರು ಜನ ಖದೀಮರ ಗ್ಯಾಂಗ್​ನ್ನು ಅರೆಸ್ಟ್​ ಮಾಡಿದ್ದಾರೆ.

ಘಟನೆ ವಿವರ

ಕೊಲ್ಹಾಪುರದಿಂದ ಬಸ್​ನಲ್ಲಿ ಬರುವಾಗ ಸಿದ್ದನಗೌಡರಿಗೆ ಈ ಖದೀಮರ ಗ್ಯಾಂಗ್​ನ ಸದಸ್ಯೆ ಜಾಹ್ನವಿ ಪರಿಚಯ ಆಗಿದ್ದರು. ಬಳಿಕ ನಂಬರ್ ಕೂಡ ಎಕ್ಸಚೇಂಜ್ ಮಾಡಿಕೊಂಡಿದ್ದ ಮಹಿಳೆ, ನಮ್ಮಣ್ಣ ಬ್ಯಾಂಕ್​ನಲ್ಲಿ ಕೆಲಸ ಮಾಡುತ್ತಾನೆ. ನಿಮ್ಮ ಹಣ ಡಬಲ್ ಮಾಡಿ ಕೊಡುತ್ತೇವೆ ಎಂದು ಅವರನ್ನು ನಂಬಿಸಿ, ತನ್ನ ಕೆಡ್ಡಾಗೆ ಕೆಡವಿದ್ದಾಳೆ. ಎಲ್ಲವೂ ತಾನು ಅಂದುಕೊಂಡಂತೆ ಆಗುತ್ತಿದ್ದಂತೆ, ಸಿದ್ದನಗೌಡರಿಗೆ ಯಮಕನಮರಡಿಯ ಹೊಟೇಲ್ ಒಂದರಲ್ಲಿ ಹಣ ತರಲು ಹೇಳಿದ್ದಾಳೆ.

ಇದನ್ನೂ ಓದಿ:ಕೊರೊನಾ ನಡುವೆ ಅಮಾನುಷ ಕೆಲಸ: ದೇಶದ ವಿವಿಧೆಡೆ ನಕಲಿ ರೆಮಿಡಿಸಿವಿರ್ ಮಾರಾಟ; ಪೊಲೀಸರಿಂದ ಖದೀಮರ ಬಂಧನ

ಹಣ ತಂದ ನಂತರ ನಕಲಿ ಪೊಲೀಸರಿಂದ ದಾಳಿ

ಇನ್ನು ಸಿದ್ದನಗೌಡ ಅವರು ಹಣ ತಂದ ನಂತರ ಅವರದೇ ಗ್ಯಾಂಗ್​ನ ನಕಲಿ ಪೊಲೀಸರಿಂದ ದಾಳಿ ಮಾಡಿಸಿ, ಜಾಹ್ನವಿಯನ್ನು ಅರೆಸ್ಟ್ ಮಡಿದ್ದ ನಕಲಿ ಪೊಲೀಸರು, ಹಣದ ಜೊತೆಗೆ ಜಾಹ್ನವಿಯನ್ನು ಕರೆದುಕೊಂಡು ಪರಾರಿಯಾಗಿದ್ದರು. ಬಳಿಕ ಸಿದ್ದನಗೌಡ ಅವರಿಗೆ ತಾನು ಮೋಸ ಹೋಗಿದ್ದು ಗೊತ್ತಾದ ಬಳಿಕ ಕಾಕತಿ ಠಾಣೆಗೆ ಬಂದು ನಡೆದ ಘಟನೆಯನ್ನು ಸಂಪೂರ್ಣವಾಗಿ ವಿವರಿಸಿ ದೂರು ನೀಡಿದ್ದರು. ಅದರಂತೆ ದೂರು ದಾಖಲಿಸಿಕೊಂಡ ಪೊಲೀಸರು, ಮಾರು ವೇಷದಲ್ಲಿ ಹೋಗಿ ಹಣ ಡಬಲ್ ಮಾಡಿಕೊಡಿ ಎಂದು ಹೇಳಿ ಖದೀಮರ ಗ್ಯಾಂಗ್​ನ್ನು ಕೆಡ್ಡಾಗೆ ಕೆಡುವಿದ್ದಾರೆ. ಇದೀಗ ಮಾರುವೇಷ ಹಾಕಿ 6 ಜನರನ್ನು ಬಂಧಿಸಿದ್ದಾರೆ.‘

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ
Daily Devotional: ಅದೃಷ್ಟ ಒಲಿಯಲು ಏನು ಮಾಡಬೇಕು?
Daily Devotional: ಅದೃಷ್ಟ ಒಲಿಯಲು ಏನು ಮಾಡಬೇಕು?
Daily Horoscope: ನಿಮ್ಮವರಿಂದಲೇ ನಿಮಗೆ ಕಷ್ಟಗಳು ಬರುವ ಸಾಧ್ಯತೆ!
Daily Horoscope: ನಿಮ್ಮವರಿಂದಲೇ ನಿಮಗೆ ಕಷ್ಟಗಳು ಬರುವ ಸಾಧ್ಯತೆ!