AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಗೋವಾದಿಂದ ಅಕ್ರಮವಾಗಿ ಸಾಗಿಸಲು ಯತ್ನ, 18 ವಿವಿಧ ನಮೂನೆ ಮದ್ಯ ಜಪ್ತಿ

ಬೆಳಗಾವಿ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ನಾಲ್ಕುರ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಕೆಎ 25 ಎಎ 6469 ನಂಬರ್​ನ ವಾಹನ ತಡೆದು ಅಬಕಾರಿ ಇಲಾಖೆಯ ಅಧಿಕಾರಿಗಳು ತಪಾಸಣೆ ನಡೆಸಿದಾಗ 18 ವಿವಿಧ ನಮೂನೆಯ 208 ಮದ್ಯದ ರಟ್ಟಿನ ಬಾಕ್ಸ್​​ಗಳು ಪತ್ತೆಯಾಗಿವೆ.

ಬೆಳಗಾವಿ: ಗೋವಾದಿಂದ ಅಕ್ರಮವಾಗಿ ಸಾಗಿಸಲು ಯತ್ನ, 18 ವಿವಿಧ ನಮೂನೆ ಮದ್ಯ ಜಪ್ತಿ
ಮದ್ಯ ಜಪ್ತಿ
Sahadev Mane
| Edited By: |

Updated on:Sep 03, 2023 | 7:47 AM

Share

ಬೆಳಗಾವಿ: ಖತರ್ನಾಕ್ ಐಡಿಯಾ ಮೂಲಕ ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಆರೋಪಿಯನ್ನು ಅಬಕಾರಿ ಇಲಾಖೆಯ (Department of Excise) ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ ವಾರಣಾಸಿ ಮೂಲದ ವೀರೇಂದ್ರ ಮಿಶ್ರಾ (34) ಬಂಧಿತ ಆರೋಪಿ. ಆರೋಪಿ ಲಾರಿಯನ್ನ ಮಾಡಿಫೈ ಮಾಡಿಸಿ ಗೋವಾದಿಂದ ಪ್ಲೈವುಡ್ ಸಾಗಿಸುತ್ತಿದ್ದನು. ಈ ಪ್ಲೈವುಡ್​​ಗಳ ಮಧ್ಯೆ 18 ವಿವಿಧ ನಮೂನೆ ಮದ್ಯದ 208 ರಟ್ಟಿನ ಬಾಕ್ಸ್​​ಗಳನ್ನು ಗೋವಾದಿಂದ (Goa) ಬೆಳಗಾವಿ (Belagavi) ಮಾರ್ಗವಾಗಿ ಹೊರ ರಾಜ್ಯಕ್ಕೆ ಸಾಗಿಸುತ್ತಿದ್ದನು. ಬೆಳಗಾವಿ ಗಡಿಯಲ್ಲಿ ಅಬಕಾರಿ ಅಧಿಕಾರಿಗಳ ಟೈಟ್ ತಪಾಸಣೆಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ಮದ್ಯ ಸಿಕ್ಕಿದೆ.

ಬೆಳಗಾವಿ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ನಾಲ್ಕು, ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಕೆಎ 25 ಎಎ 6469 ನಂಬರ್​ನ ವಾಹನ ತಡೆದು ತಪಾಸಣೆ ನಡೆಸಿದೆವು. ಈ ವೇಳೆ ಅಕ್ರಮವಾಗಿ ಗೋವಾದಿಂದ ಹೊರ ರಾಜ್ಯಕ್ಕೆ ಮದ್ಯ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ತಪಾಸಣೆ ವೇಳೆ 28 ಲಕ್ಷ ರೂ. ಮೌಲ್ಯದ ಮದ್ಯ ಸಿಕ್ಕಿದೆ. ಸದ್ಯ ಮದ್ಯ ಮತ್ತು ವಾಹನವನ್ನು ಜಪ್ತಿ ಮಾಡಲಾಗಿದೆ. ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಪರ ಅಬಕಾರಿ ಆಯುಕ್ತ ಡಾ.ವೈ ಮಂಜುನಾಥ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:46 am, Sun, 3 September 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!