AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ 3 ಮಕ್ಕಳು ಸಾವು ಪ್ರಕರಣ; ಪ್ರಕರಣದ ಬಗ್ಗೆ ವರದಿ ಕೇಳಿದ ಆರೋಗ್ಯ ಸಚಿವ ಸುಧಾಕರ್

ಘಟನೆಗೆ ಕಾರಣ, ಲಸಿಕೆಯಿಂದ ಮಕ್ಕಳು ಮೃತಪಟ್ಟಿವೆಯಾ? ಅಥವಾ ಆರೋಗ್ಯ ಇಲಾಖೆ ಸಿಬ್ಬಂದಿಯ ಬೇಜವಾಬ್ದಾರಿ ಇದೆಯಾ ಎಂಬ ನಿಟ್ಟಿನಲ್ಲಿ ವರದಿ ನೀಡುವಂತೆ ಬೆಳಗಾವಿಯ ಡಿಎಚ್‌ಒ ಶಶಿಕಾಂತ ಮುನ್ಯಾಳಗೆ ಕರೆ ಮಾಡಿ ತಕ್ಷಣ ವರದಿ ನೀಡುವಂತೆ ಆರೋಗ್ಯ ಸಚಿವ ಡಾ.ಸುಧಾಕರ್ ಸೂಚನೆ ನೀಡಿದ್ದಾರೆ.

ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ 3 ಮಕ್ಕಳು ಸಾವು ಪ್ರಕರಣ; ಪ್ರಕರಣದ ಬಗ್ಗೆ ವರದಿ ಕೇಳಿದ ಆರೋಗ್ಯ ಸಚಿವ ಸುಧಾಕರ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ್
TV9 Web
| Edited By: |

Updated on: Jan 16, 2022 | 6:28 PM

Share

ಬೆಳಗಾವಿ: ಜಿಲ್ಲಾಸ್ಪತ್ರೆ ಬಿಮ್ಸ್​ನಲ್ಲಿ (BIMS) ಮೂರು ಮಕ್ಕಳು ನಿಗೂಢವಾಗಿ ಮೃತಪಟ್ಟಿವೆ. 13 ತಿಂಗಳ ಮಗು ಪವಿತ್ರಾ ಹುಲಗುರ್, 14 ತಿಂಗಳ ಮಗು (Child) ಮಧು ಉಮೇಶ್ ಕುರಗುಂದಿ ಮತ್ತು ಒಂದೂವರೆ ವರ್ಷದ ಚೇತನ ಪೂಜಾರಿ ಎಂಬ ಮಗು ಸಾವನ್ನಪ್ಪಿದೆ. ಮೂರು ದಿನಗಳ ಹಿಂದೆ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಇಂದು ಮಕ್ಕಳು ಮೃತಪಟ್ಟಿವೆ. ಮೂರು ಪುಟ್ಟ ಮಕ್ಕಳ ಸಾವಿಗೆ ಕಾರಣ ಇನ್ನು ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆ ಆರಂಭವಾಗಿದ್ದು, ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಬೆಳಗಾವಿ ಡಿಹೆಚ್​ಓ (DHO) ಶಶಿಕಾಂತ ಮುನ್ಯಾಳಗೆ ಆರೋಗ್ಯ ಸಚಿವ ಸುಧಾಕರ್​ ಸೂಚನೆ ನೀಡಿದ್ದಾರೆ.

ಘಟನೆಗೆ ಕಾರಣ, ಲಸಿಕೆಯಿಂದ ಮಕ್ಕಳು ಮೃತಪಟ್ಟಿವೆಯಾ? ಅಥವಾ ಆರೋಗ್ಯ ಇಲಾಖೆ ಸಿಬ್ಬಂದಿಯ ಬೇಜವಾಬ್ದಾರಿ ಇದೆಯಾ ಎಂಬ ನಿಟ್ಟಿನಲ್ಲಿ ವರದಿ ನೀಡುವಂತೆ ಬೆಳಗಾವಿಯ ಡಿಎಚ್‌ಒ ಶಶಿಕಾಂತ ಮುನ್ಯಾಳಗೆ ಕರೆ ಮಾಡಿ ತಕ್ಷಣ ವರದಿ ನೀಡುವಂತೆ ಆರೋಗ್ಯ ಸಚಿವ ಡಾ.ಸುಧಾಕರ್ ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಒಗೂ ಮಕ್ಕಳ ಕಲ್ಯಾಣ ಮತ್ತು ಅಭಿವೃದ್ಧಿ ಆಯುಕ್ತರು ವರದಿ ಕೇಳಿದ್ದಾರೆ.

ಮಕ್ಕಳಿಗೆ ರುಬೆಲ್ಲಾ ವ್ಯಾಕ್ಸಿನ್ ನೀಡಲಾಗಿತ್ತು ಮಕ್ಕಳಿಗೆ ರುಬೆಲ್ಲಾ ವ್ಯಾಕ್ಸಿನ್ ನೀಡಲಾಗಿತ್ತು. ಜ.12ರಂದು ಆರೋಗ್ಯ ಇಲಾಖೆ ಸಿಬ್ಬಂದಿ ರುಬೆಲ್ಲಾ ವ್ಯಾಕ್ಸಿನ್ ನೀಡಿದ್ದರು. ಇಂಜೆಕ್ಷನ್ ಪಡೆದ ಬಳಿಕ ವಾಂತಿ ಭೇದಿ ಆರಂಭವಾಯಿತು. ಕೂಡಲೇ ನಾವು ಆಸ್ಪತ್ರೆಗೆ ದಾಖಲು ಮಾಡಿದ್ರೂ ಮಕ್ಕಳು ಬದುಕಲಿಲ್ಲ. ಆರೋಗ್ಯ ಇಲಾಖೆ ಸಿಬ್ಬಂದಿಯ ಬೇಜವಾಬ್ದಾರಿಯಿಂದ ಮಕ್ಕಳು ಸಾವನ್ನಪ್ಪಿವೆ ಅಂತ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.

ರುಬೆಲ್ಲ ವ್ಯಾಕ್ಸಿನ್ ಪಡೆದ ಬಳಿಕ ಮಕ್ಕಳು ಸಾವನ್ನಪ್ಪಿವೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ಡಾ. ಕೆ ಸುಧಾಕರ್, ಇದರ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ಏನಾಗಿದೆ ಅಂತ ನೋಡಿಕೊಂಡು ಮಾತಾಡುತ್ತೇನೆ ಅಂತ ತಿಳಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ. ಕ್ಲೀನಿಕಲ್ ಎಕ್ಸಾಮಿನೇಷನ್ ಮಾಡಬೇಕಾಗುತ್ತದೆ. ಮಾಡುತ್ತೇವೆ. ಪೋಸ್ಟ್ ಮಾರ್ಟಂ ಮಾಡಿದ ಬಳಿಕ ಸ್ಪಷ್ಟ ಕಾರಣ ಗೊತ್ತಾಗಲಿದೆ. ಲಸಿಕೆಯಿಂದಲೇ ಸಾವಾಗಿದೆಯಾ ಎಂಬ ವಿಚಾರ ಬಳಿಕ ತಿಳಿಯುತ್ತದೆ ಅಂತ ಹೇಳಿದರು.

ಇದನ್ನೂ ಓದಿ: ಕೋಲಾರ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದವರಿಗೆ ಕೊರೊನಾ; ಈವರೆಗೆ 63 ಪೊಲೀಸರಿಗೆ ಸೋಂಕು ದೃಢ

ಬಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ: ಸಹ ಪ್ರಯಾಣಿಕರ ಸಹಕಾರಕ್ಕೆ ಭಾರೀ ಮೆಚ್ಚುಗೆ

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ