AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ 5 ಸಾವಿರ ಪೊಲೀಸರ ನಿಯೋಜನೆ

ಬೆಳಗಾವಿ ಅಧಿವೇಶನ ಎಂದರೇ ಪ್ರತಿಭಟನೆಗೆ ಹೆಸರುವಾಸಿ. ಉತ್ತರ ಕರ್ನಾಟಕ ಭಾಗದ ಜನರ ಸಂಕಷ್ಟಗಳ ಬಗ್ಗೆ ಪ್ರತಿಭಟನೆ ಮೂಲಕ ಜನಪತ್ರಿನಧಿಗಳ ಕಿವಿಗೆ ಮುಟ್ಟಿಸೋಣವೆಂದು ಅಧಿವೇಶನ ನಡೆಯುವ ಅಷ್ಟೂ ದಿನಗಳು ಜನರು ಧರಣಿ ನಡೆಸುತ್ತಾರೆ. ಈ ಬಾರಿ ಬೆಳಗಾವಿ ಚಳಿಗಾಲ ಅಧಿವೇಶನ ಡಿಸೆಂಬರ್ 4 ರಿಂದ 15 ರವರೆಗೆ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದೆ. ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಭದ್ರತೆಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ 5 ಸಾವಿರ ಪೊಲೀಸರ ನಿಯೋಜನೆ
ಸುವರ್ಣ ಸೌಧ
ವಿವೇಕ ಬಿರಾದಾರ
|

Updated on:Nov 28, 2023 | 12:58 PM

Share

ಬೆಳಗಾವಿ ನ.28: ಡಿಸೆಂಬರ್ 4 ರಿಂದ 15 ರವರೆಗೆ ಸುವರ್ಣ ವಿಧಾನಸೌಧದಲ್ಲಿ (Suvarna Soudha) ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ (Winter Session) ಭದ್ರತೆಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ (Police) ಆಯುಕ್ತ ಎಸ್.ಎನ್.ಸಿದ್ರಾಮಪ್ಪ ಹೇಳಿದರು. ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ವಿಧಾನಮಂಡಲ ಅಧಿವೇಶನಕ್ಕೆ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.

12 ಜನ ಎಸ್ಪಿ, 42 ಡಿವೈಎಸ್ಪಿಗಳು ಮತ್ತು 100 ಜನ ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ 5 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಮತ್ತು ಪೊಲೀಸ್ ಸಿಬ್ಬಂದಿಗೆ ವಸತಿ ಕಲ್ಪಿಸಲು ಒಟ್ಟು 15 ಸ್ಥಳಗಳನ್ನು ಗುರುತಿಸಲಾಗಿದೆ ಎಂದರು.

ಇದನ್ನೂ ಓದಿ: ಚಳಿಗಾಲದ ಅಧಿವೇಶನ ಇಲ್ಲಿಯೇ ಯಾಕಾದರೂ ನಡೆಯುತ್ತದೋ ಎಂದು ಇಲ್ಲಿನ ರೈತರಿಗೆ ಧುತ್ತನೆ ಎದುರಾಗಿದೆ ಟೆನ್ಷನ್! ಏನದು ವಿಷಯ?

ವೆಚ್ಚ ತಗ್ಗಿಸಲು ಕ್ರಮ

ಚಳಿಗಾಲದ ಅಧಿವೇಶನದ ವೆಚ್ಚ ಕಡಿಮೆ ಮಾಡಲು ಜಿಲ್ಲಾಡಳಿತ ಕಸರತ್ತು ನಡೆಸಿದೆ. ಕಳೆದ ವರ್ಷ 17.50 ಕೋಟಿ ರೂ. ವೆಚ್ಚವಾಗಿತ್ತು. ಈ ಬಾರಿ ಅದಕ್ಕಿಂತ ಕಡಿಮೆ ಮಾಡುವ ಗುರಿ ನೀಡಲಾಗಿದೆ. ಅಧಿವೇಶನದ ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಇದೇ ಸೌಧದಲ್ಲಿ 2012ರಲ್ಲಿ ನಡೆದ ಮೊದಲ ಅಧಿವೇಶನಕ್ಕೆ 7.39 ಕೋಟಿ ರೂ. ವೆಚ್ಚವಾದರೆ, 2022ರ ಅಧಿವೇಶನಕ್ಕೆ 17.50 ಕೋಟಿ ರೂ. ವೆಚ್ಚವಾಗಿತ್ತು. ಬೆಳಗಾವಿಯಲ್ಲಿ ಈವರೆಗೆ ನಡೆದಿರುವ 11 ಅಧಿವೇಶನಗಳಿಗೆ ಬರೋಬ್ಬರಿ 131.3 ಕೋಟಿ ವೆಚ್ಚವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:57 pm, Tue, 28 November 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್