AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮಫಲಕಗಳಲ್ಲಿ ಬೆಳಗಾಂವ, ಬೆಳಗಾಮ್ ನಿಷಿದ್ಧ, ಬೆಳಗಾವಿ ಕಡ್ಡಾಯ: ಪಾಲಿಕೆ ಆಯುಕ್ತರ ಆದೇಶ

ಬೆಳಗಾವಿ ಮಹಾನಗರದ ಎಲ್ಲ ಅಂಗಡಿ/ಮುಗ್ಗಟ್ಟುಗಳ ನಾಮಫಲಕಗಳಲ್ಲಿ ಶೇ60 ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು. ಜೊತೆಗೆ ವಿಳಾಸದಲ್ಲಿ ಬೆಳಗಾವಿ ಅಂತ ನಮೋದಿಸುವಂತೆ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಎರಡು ಸಾವಿರ ಅಂಗಡಿಗಳಿಗೆ ನೋಟಿಸ್ ನೀಡಿದ್ದಾರೆ.

ನಾಮಫಲಕಗಳಲ್ಲಿ ಬೆಳಗಾಂವ, ಬೆಳಗಾಮ್ ನಿಷಿದ್ಧ, ಬೆಳಗಾವಿ ಕಡ್ಡಾಯ: ಪಾಲಿಕೆ ಆಯುಕ್ತರ ಆದೇಶ
ಪಾಲಿಕೆ ಆಯುಕ್ತರ ಸಿಟಿ ರೌಂಡ್ಸ್​​, ಆದೇಶ ಪತ್ರ
Sahadev Mane
| Edited By: |

Updated on: Jan 13, 2024 | 10:04 AM

Share

ಬೆಳಗಾವಿ, ಜನವರಿ 13: ಮಹಾನಗರದ ಎಲ್ಲ ಅಂಗಡಿ/ಮುಗ್ಗಟ್ಟುಗಳ ನಾಮಫಲಕಗಳಲ್ಲಿ ಶೇ60 ರಷ್ಟು ಕನ್ನಡವನ್ನು (Kannada) ಕಡ್ಡಾಯವಾಗಿ ಬಳಸಬೇಕು. ಜೊತೆಗೆ ವಿಳಾಸದಲ್ಲಿ ಬೆಳಗಾವಿ (Belagavi) ಅಂತ ನಮೋದಿಸುವಂತೆ ಮಹಾನಗರ ಪಾಲಿಕೆ (City Corporation) ಆಯುಕ್ತ ಅಶೋಕ ದುಡಗುಂಟಿ ಎರಡು ಸಾವಿರ ಅಂಗಡಿಗಳಿಗೆ ನೋಟಿಸ್ ನೀಡಿದ್ದಾರೆ. ನಗರದ ಕೆಲವು ಅಂಗಡಿ ಮಾಲಿಕರು ಬೆಳಗಾವಿ ಬದಲು ಬೆಳಗಾಂವ, ಬೆಳಗಾಂ ಅಂತ ನಾಮಫಲಕಗಳಲ್ಲಿ ಬರೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಯಕ್ತರು ನೋಟಿಸ್​ ಜಾರಿ ಮಾಡಿದ್ದಾರೆ.

ನಾಮಫಲಕಗಳನ್ನು ಶೇಕಡಾ 60 ರಷ್ಟು ಬಳಸಬೇಕೆಂದು ಸರ್ಕಾರ ಹೇಳಿದ ಬೆನ್ನಲ್ಲೇ ಆಯಕ್ತರು ಬೆಳ್ಳಂಬೆಳಿಗ್ಗೆ ನಗರ ಸಂಚಾರ ಕೈಗೊಂಡರು. ಈ ವೇಳೆ ನಗರದ ಹಲವು ಅಂಗಡಿಗಳಲ್ಲಿ ಕನ್ನಡ ಬಳಕೆ ತೀರ ವಿರಳವಾಗಿತ್ತು. ಮತ್ತು ವಿಳಾಸದ ಸ್ಥಳದಲ್ಲಿ ಬೆಳಗಾಂವ, ಬೆಳಗಾಮ್​ ಎಂದು ಬರೆಸಲಾಗಿತ್ತು. ಇದನ್ನು ಮನಗಂಡ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಮಹಾರಾಷ್ಟ್ರ ಆರೋಗ್ಯ ವಿಮೆ‌ ಜಾರಿ: ಕೆಎಲ್ಇ, ಅರಿಹಂತ ಆಸ್ಪತ್ರೆಗೆ ನೋಟಿಸ್

ಆಯುಕ್ತರ ಆದೇಶ ಪ್ರತ್ರದಲ್ಲಿ ಏನಿದೆ?

ರಾಜ್ಯ ಸರ್ಕಾರ ನಗರಪಾಲಿಕೆ/ಜಿಲ್ಲೆಯಾದ್ಯಂತ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗಡಿ/ಮುಂಗಟ್ಟುಗಳು/ವಾಣಿಜ್ಯ ಸಂಕಿರ್ಣಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಭಾಗವನ್ನು ಕನ್ನಡವನ್ನು ಬಳಸತಕ್ಕದ್ದು ಎಂದು ನಿರ್ದೇಶಿಸಿದೆ. ಜೊತೆಗೆ ವಿಳಾಸದಲ್ಲಿ “ಬೆಳಗಾವಿ” ಎಂದು ನಮೂದಿಸಬೇಕಾಗಿರುತ್ತದೆ. ಆದರೆ ಪಾಲಿಕೆ ವ್ಯಾಪ್ತಿಯಲ್ಲಿ ಹಲವು ಉದ್ದಿಮೆದಾರರು ತಮ್ಮ ಉದ್ದಿಮೆಯ ನಾಮಫಲಕದಲ್ಲಿ ಬೆಳಗಾಂವ ಅಥವಾ ಬೆಳಗಾಮ್ ಎಂದು ನಮೂದಿಸಿದ್ದು ಹಾಗೂ ಶೇ.50 ರಷ್ಟು ಭಾಗವನ್ನು ಕನ್ನಡ ಭಾಷೆಗೆ ಪ್ರಥಮಾಧ್ಯತೆ ನೀಡದೇ ನಾಮಫಲಕವನ್ನು ಉಪಯೋಸುತ್ತಿದ್ದು ಕಂಡುಬಂದಿದೆ.

ಇಂತಹ ಉದ್ದಿಮೆದಾರರಿಗೆ ನೀಡಿದ ಪರವಾನಿಗೆಯನ್ನು ರದ್ದುಗೊಳಿಸಿ ಅಂಗಡಿಯನ್ನು ಬಂದ್​ ಅಥವಾ ಸೀಲ್ ಮಾಡಲಾಗವುದು ಎಂದು ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Sahadev Mane
Sahadev Mane
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ