AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಅಂಚೆ ಕಚೇರಿಯಲ್ಲಿ ಹಣಕೊಡುತ್ತಿದ್ದಾರೆ ಅಂತ ಹೇಳಿ ಅಜ್ಜಿಗೆ ವಂಚನೆ

ಬೆಳಗಾವಿ ತಾಲೂಕಿನ ಮುತಗಾ ಗ್ರಾಮದ 75 ವರ್ಷದ ಉಮಕ್ಕ ರಾಮು ಕೇದಾರಿ ಅವರಿಗೆ ವ್ಯಕ್ತಿಯೋರ್ವ ವಂಚಿಸಿದ್ದಾನೆ. ರಸ್ತೆ ಬದಿ ಸೌತೆಕಾಯಿ ಮಾರಾಟ ಮಾಡುವ ಉಮಕ್ಕ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಕೃತ್ಯವನ್ನು ಎಸಗಿದ್ದಾನೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಳಗಾವಿ: ಅಂಚೆ ಕಚೇರಿಯಲ್ಲಿ ಹಣಕೊಡುತ್ತಿದ್ದಾರೆ ಅಂತ ಹೇಳಿ ಅಜ್ಜಿಗೆ ವಂಚನೆ
ಮಾರಿಹಾಳ ಪೊಲೀಸ್​ ಠಾಣೆ
Sahadev Mane
| Edited By: |

Updated on:May 01, 2025 | 6:01 PM

Share

ಬೆಳಗಾವಿ, ಮೇ 01: ಅಂಚೆ ಕಚೇರಿಯಲ್ಲಿ (Post Office) ಹಣ ಕೊಡುತ್ತಿದ್ದಾರೆ ಅಂತ ಹೇಳಿ, ಅಜ್ಜಿಯ ಬಳಿ ಇದ್ದ ಒಡವೆಗಳನ್ನು ದೋಚಿ ವ್ಯಕ್ತಿಯೋರ್ವ ಪರಾರಿಯಾಗಿದ್ದಾನೆ. ಬೆಳಗಾವಿ (Belagavi) ತಾಲೂಕಿನ ಮುತಗಾ ಗ್ರಾಮದಲ್ಲಿ ಘಟನೆ ನಡೆದಿದೆ. ಉಮಕ್ಕ ರಾಮು ಕೇದಾರಿ (75) ಮೋಸ ಹೋಗಿರುವ ಅಜ್ಜಿ.

ಉಮಕ್ಕ ಅವರು ರಸ್ತೆ ಬದಿ ಸೌತೆಕಾಯಿ ಮಾರಿ ಜೀವನ ಸಾಗಿಸುತ್ತಿದ್ದಾರೆ. ಅಜ್ಜಿ ಉಮಕ್ಕ ಅವರ ಬಳಿ ವ್ಯಕ್ತಿಯೋರ್ವ ಬಂದು ಪರಿಚಯಸ್ಥನಂತೆ ಮಾತನಾಡಿಸಿದ್ದಾನೆ. ಬಳಿಕ, “ಅಂಚೆ ಕಚೇರಿಯಲ್ಲಿ ವಯಸ್ಸಾದವರಿಗೆ ಆರು ಸಾವಿರ ರೂ. ಹಣ ಕೊಡುತ್ತಾರೆ, ನೀನು ಬಾ” ಎಂದು ಉಮಕ್ಕ ಅವರನ್ನು ಕರೆದುಕೊಂಡು ಹೋಗಿದ್ದಾನೆ. ನಂತರ ಯಾವುದೋ ಕಟ್ಟಡದ ಬಳಿ​ ಕರೆದುಕೊಂಡು ಹೋಗಿದ್ದಾನೆ.

ಇದನ್ನೂ ಓದಿ: ಆಗಾಗ ಅಜ್ಜಿ ಮನೆಗೆ ಬರುತ್ತಿದ್ದವ ಯುವತಿಯನ್ನೇ ಪಟಾಯಿಸಿ ಮದ್ವೆಯಾದ

ಇದನ್ನೂ ಓದಿ
Image
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
Image
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
Image
ಪಾಸಾದರೆ ಮಾತ್ರ ಲವ್ ಮಾಡ್ತೀನಿ ಅಂದಿದ್ದಾಳಂತೆ ಅವನ ಹುಡುಗಿ!
Image
ಬೆಳಗಾವಿ: ಸಂಬಳ ನೀಡದಿದ್ದಕ್ಕೆ ಬೇಸತ್ತು ಆ್ಯಂಬುಲೆನ್ಸ್ ಚಾಲಕ ಆತ್ಮಹತ್ಯೆ

ನಂತರ, ವಂಚಕ “ಬಂಗಾರ ಹಾಕಿಕೊಂಡು ಒಳಗೆ ಹೋದರೆ ಹಣ ಕೊಡಲ್ಲ ಎಂದು ವೃದ್ಧೆ ಉಮಕ್ಕ ಅವರಿಗೆ ಹೇಳಿದ್ದಾನೆ. ವಂಚಕನ ಮಾತು ನಂಬಿದ ಉಮಕ್ಕ, ಬಂಗಾರದ ಓಲೆ ಮತ್ತು ಬಳೆಗಳನ್ನು ಬಿಚ್ಚಿ ಆತನ ಕೈಗೆ ಕೊಟ್ಟು ಒಳಗೆ ಹೋಗಿದ್ದಾನೆ. ಒಳ ಹೋಗಿ ಹೊರ ಬರುಷ್ಟರಲ್ಲಿ ವಂಚಕ ಪರಾರಿಯಾಗಿದ್ದಾನೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:57 pm, Thu, 1 May 25

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!