AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂಡಲಗಾ ಜೈಲಿನಲ್ಲಿ ಕಿತ್ತಾಟ: ಕೈದಿ ಸ್ಥಿತಿ ಗಂಭೀರ, ಮಗನನ್ನು ನೋಡಲು ಬಂದ ತಾಯಿ, ಅವಕಾಶ ನೀಡಿದ ಪೊಲೀಸರು

ಜಿಲ್ಲೆಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಜುಲೈ 29ರಂದು ಕೈದಿಗಳ ನಡುವೆ ಮಾರಾಮಾರಿ ನಡೆದು, ಈ ವೇಳೆ ಶಂಕರ್ ಭಜಂತ್ರಿಯಿಂದ ಮತ್ತೊಬ್ಬ ಕೈದಿ ಸಾಯಿಕುಮಾರ್ ಎಂಬಾತನ ಮೇಲೆ ಸ್ಕ್ರೂಡ್ರೈವರ್​ನಿಂದ ಚುಚ್ಚಿ ಕೊಲೆಗೆ ಯತ್ನಿಸಿದ್ದ. ಇದೀಗ ಜೈಲಿನ ಅವ್ಯವಹಾರಗಳು ಗೊತ್ತಾಗಿದ್ದಕ್ಕೆ ಅಧಿಕಾರಿಗಳಿಂದಲೇ ನನ್ನ ಮಗನನ್ನು ಕೊಲ್ಲಿಸಲು ಯತ್ನಿಸಿದ್ದಾರೆಂದು ತಾಯಿ ಆರೋಪಿಸಿದ್ದಾರೆ.

ಹಿಂಡಲಗಾ ಜೈಲಿನಲ್ಲಿ ಕಿತ್ತಾಟ: ಕೈದಿ ಸ್ಥಿತಿ ಗಂಭೀರ, ಮಗನನ್ನು ನೋಡಲು ಬಂದ ತಾಯಿ, ಅವಕಾಶ ನೀಡಿದ ಪೊಲೀಸರು
ಮಗನಿಗಾಗಿ ತಾಯಿಯ ಗೋಳಾಟ
ಸಹದೇವ್​ ಮಾನೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 02, 2023 | 3:07 PM

Share

ಬೆಳಗಾವಿ, ಆ.2: ಜಿಲ್ಲೆಯ ಹಿಂಡಲಗಾ ಕೇಂದ್ರ ಕಾರಾಗೃಹ(Hindalaga Jail)ದಲ್ಲಿ ಜುಲೈ 29ರಂದು ಕೈದಿಗಳ ನಡುವೆ ಮಾರಾಮಾರಿ ನಡೆದಿತ್ತು. ಈ ವೇಳೆ ಶಂಕರ್ ಭಜಂತ್ರಿಯಿಂದ ಮತ್ತೊಬ್ಬ ಕೈದಿ ಸಾಯಿಕುಮಾರ್ ಮೇಲೆ ಸ್ಕ್ರೂಡ್ರೈವರ್​ನಿಂದ ಐದು ಬಾರಿ ಚುಚ್ಚಿ ಕೊಲೆಗೆ ಯತ್ನಿಸಿದ್ದ. ಈ ಹಿನ್ನಲೆ ಗಾಯಗೊಂಡಿದ್ದ ಕೈದಿ ಸಾಯಿಕುಮಾರ್​ನನ್ನು ಕೂಡಲೇ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಬಳಿಕ ಆಸ್ಪತ್ರೆ ಸುತ್ತ ಬೀಗಿ ಪೊಲೀಸ್​ ಬಂದೋಬಸ್ತ್​ ಮಾಡಲಾಗಿತ್ತು. ಇದೀಗ ಆತನ ಸ್ಥಿತಿ ಗಂಭೀರವಾಗಿದ್ದು, ಮಗನ ಭೇಟಿಗೆ ತಾಯಿ ಸೇರಿದಂತೆ ಆತನ ಕುಟುಂಬಸ್ಥರು ಮಂಡ್ಯದಿಂದ ಬೆಳಗಾವಿ ಆಗಮಿಸಿದ್ದಾರೆ.

ಭೇಟಿಗೆ ಅವಕಾಶ ನೀಡದ ಪೊಲೀಸರ ವಿರುದ್ಧ ಆಕ್ರೋಶ

ಮಗನ ಸ್ಥಿತಿ ಗಂಭೀರವಾಗಿದ್ದು, ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲವೆಂದು ಕೈದಿಯ ತಾಯಿ ಪುಟ್ಟತಾಯಮ್ಮ ಆಸ್ಪತ್ರೆ ಮುಂದೆ ಕಣ್ಣೀರು ಹಾಕುತ್ತಾ ಪೊಲೀಸರ ವಿರುದ್ದ ಆರೋಪಿಸಿದ್ದಾರೆ. ಇಂದು(ಆ.2) ಬೆಳಗ್ಗೆಯಿಂದ ಉಸಿರಾಟದ ಸಮಸ್ಯೆಯಿಂದ ಸಾಯಿಕುಮಾರ್ ಬಳಲುತ್ತಿದ್ದಾನೆ. ಆದರೂ ಐಸಿಯುವಿಗೆ ಶಿಪ್ಟ್ ಮಾಡಿ ಚಿಕಿತ್ಸೆ ಕೊಡಿಸುತ್ತಿಲ್ಲ, ಜೊತೆಗೆ ಭೇಟಿಗೂ ಬಿಡುತ್ತಿಲ್ಲ. ಮಗನ ಸ್ಥಿತಿ ಗಂಭೀರ ಇದ್ದರೂ ಜೈಲು ಅಧಿಕಾರಿಗಳು ನಮಗೆ ಎನೂ ಹೇಳಿಲ್ಲ. ನ್ಯೂಸ್​ನಲ್ಲಿ ನೋಡಿ, ಇಂದು ಮಗನ ಭೇಟಿಗೆ ಬಂದಿದ್ದೇವೆ ಎಂದು ಕಣ್ಣೀರು ಹಾಕುತ್ತಿದ್ದಾರೆ.

ಇದನ್ನೂ ಓದಿ:ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಯಿಂದ ಮತ್ತೊಬ್ಬ ಕೈದಿಯ ಕೊಲೆಗೆ ಯತ್ನ

ಜೈಲಿನ ಅವ್ಯವಹಾರಗಳು ಗೊತ್ತಾಗಿದ್ದಕ್ಕೆ ಅಧಿಕಾರಿಗಳಿಂದಲೇ ಕೊಲ್ಲಿಸಲು ಯತ್ನ

ಇನ್ನು ಹಿಂಡಲಗಾ ಜೈಲಿನ ಅವ್ಯವಹಾರಗಳು ಗೊತ್ತಾಗಿದ್ದಕ್ಕೆ ನನ್ನ ಮಗನನ್ನು ಅಧಿಕಾರಿಗಳೇ ಸೇರಿ ಕೊಲ್ಲಿಸಲು ಯತ್ನಿಸಿದ್ದಾರೆಂದು ಹಿಂಡಲಗಾ ಜೈಲು ಅಧಿಕಾರಿಗಳ ವಿರುದ್ಧ ಸಾಯಿಕುಮಾರ್​ನ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಜೈಲಿನಲ್ಲಿ ಸ್ಕ್ರೂಡ್ರವರ್ ಹೇಗೆ ಬಂತೂ, ಕಣ್ಣಿಗೆ ಖಾರದ ಪುಡಿ ಎರಚಿ ಕೊಲೆ ಮಾಡಲು ಏಕೆ ಯತ್ನಿಸಿದ್ದಾರೆ. ಇದೀಗ ಕೊಲೆ ಮಾಡಲು ಯತ್ನಿಸಿದ ಕೈದಿ ಹುಚ್ಚನೆಂದು ಹೇಳುತ್ತಿದ್ದಾರೆ. ಹುಚ್ಚ ಆಗಿದ್ದರೇ ಯಾಕೆ ಸೆಲ್​ನಲ್ಲಿ ಬಿಟ್ಟರು ಎಂದು ಜೈಲರ್ ವಿರುದ್ಧ ಪ್ರಶ್ನಿಸಿ ಆಕ್ರೋಶ ಹೊರಹಾಕಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ