AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಪ್ರೀತಿಸಿ ಮದುವೆಯಾದ ದಂಪತಿ, ರಕ್ಷಣೆ ಕೋರಿ ವಿಡಿಯೋ ಮೂಲಕ ಸಿಎಂ, ಸಚಿವರ ಮೊರೆ

ಪ್ರೀತಿಸಿ ಮದುವೆಯಾದ ಸರೋಜಿನಿ ಹಾಗೂ ಪ್ರಕಾಶ್ ಇವರಿಬ್ಬರನ್ನು ಕಂಡಲ್ಲಿ ಕೊಲ್ಲುವುದಾಗಿ ಯುವತಿ ಸರೋಜಿನಿ ತಂದೆ ಲಗಮಣ್ಣ, ಅಣ್ಣ ಪ್ರಸಾದ್, ಹಾಗೂ ಅವರ ಮಾವಂದಿರು ಬೆದರಿಕೆ ಹಾಕುತ್ತಿರುವ ಆರೋಪ ಕೇಳಿಬಂದಿದೆ. ಜೊತೆಗೆ ಮನೆಗೆ ಹೋಗಲು ಪ್ರಕಾಶ್ ಕುಟುಂಬವನ್ನು ದಾರಿ ಬಿಡುತ್ತಿಲ್ಲವಂತೆ. ಸಧ್ಯ ನಾವು ಗುಜರಾತ್​ನಲ್ಲಿ ವಾಸವಿದ್ದು, ಪ್ರಕಾಶ್ ಕುಟುಂಬಸ್ಥರಿಗೆ ರಕ್ಷಣೆ ನೀಡಲು ಮನವಿ ಮಾಡಿದ್ದಾರೆ.

ಬೆಳಗಾವಿ: ಪ್ರೀತಿಸಿ ಮದುವೆಯಾದ ದಂಪತಿ, ರಕ್ಷಣೆ ಕೋರಿ ವಿಡಿಯೋ ಮೂಲಕ ಸಿಎಂ, ಸಚಿವರ ಮೊರೆ
ಪ್ರಾತಿನಿಧಿಕ ಚಿತ್ರ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on: Oct 15, 2023 | 6:21 PM

Share

ಬೆಳಗಾವಿ, ಅ,15: ಪ್ರೀತಿಸಿ ಮದುವೆ(Love Marriage)ಯಾದ ದಂಪತಿ ರಕ್ಷಣೆ ಕೋರಿ ಸಿಎಂ, ಸಚಿವರ ಮೊರೆ ಹೋದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾನ್​ಪುರ ಗ್ರಾಮದಲ್ಲಿ ನಡೆದಿದೆ. ಹೌದು, ದಂಪತಿಯಾದ ಸರೋಜಿನಿ ಮನಗುತ್ತಿ ಮತ್ತು ಪ್ರಕಾಶ್​ ಹಳೇಗೌಡರ ಅವರು ವಿಡಿಯೋ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಮನವಿ ಸಲ್ಲಿಸಿದ್ದಾರೆ. ಇನ್ನು ಇವರಿಬ್ಬರು ಎದುರು ಬದುರು ಮನೆ ನಿವಾಸಿಗಳಾಗಿದ್ದು, ಪ್ರೀತಿಸುತ್ತಿದ್ದರು. ಪ್ರೇಮ ವಿವಾಹಕ್ಕೆ ಕುಟುಂಬಸ್ಥರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಓಡಿಹೋಗಿ  ರಿಜಿಸ್ಟರ್ ಮ್ಯಾರೇಜ್ ಆಗಿದ್ದರು.

ಪ್ರಕಾಶ್ ಕುಟುಂಬಕ್ಕೆ ಸರೋಜಿನಿ ಕುಟುಂಬಸ್ಥರಿಂದ ಜೀವ ಬೆದರಿಕೆ ಆರೋಪ

ಹೌದು, ಸರೋಜಿನಿ ಹಾಗೂ ಪ್ರಕಾಶ್ ಇವರಿಬ್ಬರನ್ನು ಕಂಡಲ್ಲಿ ಕೊಲ್ಲುವುದಾಗಿ ಯುವತಿ ಸರೋಜಿನಿ ತಂದೆ ಲಗಮಣ್ಣ, ಅಣ್ಣ ಪ್ರಸಾದ್, ಹಾಗೂ ಅವರ ಮಾವಂದಿರು ಬೆದರಿಕೆ ಹಾಕುತ್ತಿರುವ ಆರೋಪ ಕೇಳಿಬಂದಿದೆ. ಜೊತೆಗೆ ಮನೆಗೆ ಹೋಗಲು ಪ್ರಕಾಶ್ ಕುಟುಂಬವನ್ನು ದಾರಿ ಬಿಡುತ್ತಿಲ್ಲವಂತೆ. ಸಧ್ಯ ನಾವು ಗುಜರಾತ್​ನಲ್ಲಿ ವಾಸವಿದ್ದು, ಪ್ರಕಾಶ್ ಕುಟುಂಬಸ್ಥರಿಗೆ ರಕ್ಷಣೆ ನೀಡಲು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಪ್ರೀತಿಸಿ ಮದುವೆಯಾದ ಮೊದಲ‌ ಪತ್ನಿಗೆ ಟಾರ್ಚರ್; ವಿಚ್ಛೇದನ ನೀಡದೆ ಹಿಂದೂ ಯುವತಿಯನ್ನು ವಿವಾಹವಾದ ಮುಸ್ಲಿಂ ಯುವಕ

ಇಲ್ಲೇ ಬಂದು ದೂರು ನೀಡಲು ಹೇಳಿದ ಬೆಳಗಾವಿ ಎಸ್​ಪಿ

ಇನ್ನು ಈ ಕುರಿತು ಬೆಳಗಾವಿ ಎಸ್​ಪಿ ಅವರನ್ನು ಸಂಪರ್ಕಿಸಿದರೆ, ಅವರು ಇ-ಮೇಲ್ ಮೂಲಕ ದೂರು ನೀಡಿದರೆ ದಾಖಲಿಸಿಕೊಳ್ಳಲು ಆಗಲ್ಲ, ಇಲ್ಲೇ ಬಂದು ದೂರು ನೀಡುವಂತೆ ಹೇಳಿದ್ದಾರಂತೆ. ಹೀಗಾಗಿ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಸರೋಜಿನಿ, ಪ್ರಕಾಶ್​ ಹಳೇಗೌಡರ ಮನವಿ ಮಾಡಿದ್ದು, ನನ್ನ ಗಂಡ ಪ್ರಕಾಶ್ ಕುಟುಂಬಕ್ಕೆ ಏನಾದರೂ ಆದರೆ ನನ್ನ ತಂದೆ, ಕುಟುಂಬಸ್ಥರೇ ಹೊಣೆ ಎಂದು ಯುವತಿ ಹೇಳಿದ್ದಾರೆ. ಈ ವಿಡಿಯೋ ಬಿಡುಗಡೆ ಮಾಡಿ ಸೂಕ್ತ ಕ್ರಮಕೈಗೊಳ್ಳುವಂತೆ ಯುವಜೋಡಿ ವಿಡಿಯೋ ಮೂಲಕ ಸಿಎಂ, ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ