AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಣ್ಯಕೇಶಿ ನದಿ ಪ್ರವಾಹದಲ್ಲಿ ಪುಸ್ತಕ, ಆಟ ಸಾಮಾಗ್ರಿಗಳು ಕೊಚ್ಚಿ ಹೋಗಿವೆ; ಟಿವಿ9 ಕ್ಯಾಮೆರಾ ಮುಂದೆ ಬಿಕ್ಕಿ ಬಿಕ್ಕಿ ಅತ್ತ 8 ವರ್ಷದ ಬಾಲಕಿ

ನಮ್ಮ ಮನೆ ಬಿದ್ದಿದೆ. ಆ ಮನೆಯಲ್ಲೇ ಜೀವನ ಮಾಡುತ್ತಿದ್ದೇವೆ. ಯಾರು ನಮ್ಮ ಕಷ್ಟ ಕೇಳಿಲ್ಲ. ಮನೆಯಲ್ಲಿ ಹಾವು ಎಲ್ಲವೂ ಬರುತ್ತಿವೆ. ಮನೆಯಲ್ಲಿ ಇರೋಕೆ ಭಯ ಆಗುತ್ತೆ. ನಮಗೆ ಮನೆ ಕಟ್ಟಿಸಿಕೊಡಿ ಅಂತಾ ಬಾಲಕಿ ನಿಸರ್ಗ ಕಣ್ಣೀರಾಕಿದ್ದಾಳೆ.

ಹಿರಣ್ಯಕೇಶಿ ನದಿ ಪ್ರವಾಹದಲ್ಲಿ ಪುಸ್ತಕ, ಆಟ ಸಾಮಾಗ್ರಿಗಳು ಕೊಚ್ಚಿ ಹೋಗಿವೆ; ಟಿವಿ9 ಕ್ಯಾಮೆರಾ ಮುಂದೆ ಬಿಕ್ಕಿ ಬಿಕ್ಕಿ ಅತ್ತ 8 ವರ್ಷದ ಬಾಲಕಿ
ಬಿಕ್ಕಿ ಬಿಕ್ಕಿ ಅಳುತ್ತಿರುವ ಬಾಲಕಿ
TV9 Web
| Edited By: |

Updated on:Aug 01, 2021 | 11:34 AM

Share

ಬೆಳಗಾವಿ: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ (Heavy Rains) ಜನರ ಪರಿಸ್ಥಿತಿ ಹದಗೆಟ್ಟಿದೆ. ಹಿರಣ್ಯಕೇಶಿ ನದಿ ಪ್ರವಾಹದಲ್ಲಿ ಮನೆ ಕಳೆದುಕೊಂಡ ಕುಟುಂಬಸ್ಥರು ಗೋಳಾಡುತ್ತಿದ್ದಾರೆ. ನಮ್ಮ ತಂದೆ ಕೆಲಸಕ್ಕೆ ಹೋದಾಗ ಮನೆಗೆ ನೀರು ಬಂತು. ನೀರಲ್ಲಿ ಪುಸ್ತಕ, ಆಟಿಕೆ ಸಾಮಾಗ್ರಿಗಳು, ಟಿವಿ ಎಲ್ಲಾ ಕೊಚ್ಚಿಕೊಂಡು ಹೋಗಿವೆ ಅಂತ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ಎಂಟು ವರ್ಷದ ಬಾಲಕಿ ನಿಸರ್ಗ ದೇಸಾಯಿ ಟಿವಿ9 ಕ್ಯಾಮೆರಾ ಮುಂದೆ ಬಿಕ್ಕಿ ಬಿಕ್ಕಿ ಅತ್ತಿದ್ದಾಳೆ.

ನಮ್ಮ ಮನೆ ಬಿದ್ದಿದೆ. ಆ ಮನೆಯಲ್ಲೇ ಜೀವನ ಮಾಡುತ್ತಿದ್ದೇವೆ. ಯಾರು ನಮ್ಮ ಕಷ್ಟ ಕೇಳಿಲ್ಲ. ಮನೆಯಲ್ಲಿ ಹಾವು ಎಲ್ಲವೂ ಬರುತ್ತಿವೆ. ಮನೆಯಲ್ಲಿ ಇರೋಕೆ ಭಯ ಆಗುತ್ತೆ. ನಮಗೆ ಮನೆ ಕಟ್ಟಿಸಿಕೊಡಿ ಅಂತಾ ಬಾಲಕಿ ನಿಸರ್ಗ ಕಣ್ಣೀರಾಕಿದ್ದಾಳೆ. ಬಾಲಕಿ ಕಣ್ಣೀರಿಡುತ್ತಿದ್ದಂತೆ ಪರಿಸ್ಥಿತಿ ನೆನೆದು ಆಕೆಯ ತಾಯಿ ಮತ್ತು ಅಜ್ಜಿ ಕಣ್ಣೀರಾಕಿದ್ದಾರೆ. ನಮ್ಮ ಪರಿಸ್ಥಿತಿ ಗಂಭೀರ ಇದೆ. 2019ರಲ್ಲೂ ನಮಗೆ ಪರಿಹಾರ ಬಂದಿಲ್ಲ. ಈ ಬಾರಿಯಾದರೂ ನಮಗೆ ಪರಿಹಾರ ನೀಡಿ ಅಂತಾ ಬಾಲಕಿ ಅಜ್ಜಿ ಬಸನಿಂಗವ್ವಾ ಅಂಗಲಾಚಿದ್ದಾರೆ.

800 ಕೋಟಿ ಖರ್ಚು ಕಳೆದ ವರ್ಷ ಮನೆಗಳ ನಿರ್ಮಾಣಕ್ಕೆ 800 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಟಿವಿ9ಗೆ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾಹಿತಿ ನೀಡಿದ್ದಾರೆ. ಪ್ರಸಕ್ತ ವರ್ಷದ ಮಳೆ ಹಾನಿಗೂ ಪರಿಹಾರ ನೀಡಲಾಗುವುದು. ಎನ್‌ಡಿಆರ್‌ಎಫ್ ಪರಿಹಾರ ನಿಧಿಯಿಂದ ಹಣ ನೀಡುತ್ತೇವೆ. ವಿವಿಧ ಯೋಜನೆಗಳ ಮೂಲಕ ಮನೆ ಕಟ್ಟಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ

ಸಿಎಂ ಬೊಮ್ಮಾಯಿ ಸಾಹೇಬ್ರೇ.. ದೆಹಲಿಗೆ ಹೋಗೋದು ಬಿಡಿ, ನಮ್ಮ ಕಷ್ಟ ಸ್ವಲ್ಪ ನೋಡಿ ಸ್ವಾಮಿ: ಅನ್ನದಾತರ ಆಕ್ರೋಶ

ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿ ನವಿಲು ಸಾವು; ರಾಷ್ಟ್ರಧ್ವಜ ಹೊದಿಸಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

(A girl crying for book and play materials were washed away in Hiranyakeshi River at Belagavi)

Published On - 11:31 am, Sun, 1 August 21

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ