AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ವರದಕ್ಷಿಣೆ ನೀಡಿಲ್ಲವೆಂದು ವಧುವಿಗೆ ತಾಳಿ ಕಟ್ಟದ ವರ ಅರೆಸ್ಟ್

ಇನ್ನೇನು ವಧುವಿಗೆ ವರ ತಾಳಿ ಕಟ್ಟಬೇಕು ಎನ್ನುವಷ್ಟರಲ್ಲೇ ಮದುವೆ ಮುರಿದು ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ನಡೆದಿದೆ. ವರದಕ್ಷಿಣಿ ಕೊಡದ ಹಿನ್ನೆಲೆ ವಧುವಿಗೆ ತಾಳಿ ಕಟ್ಟಲು ವರ ನಿರಾಕರಿಸಿದ್ದಾನೆ. ಕಳೆದ ಮೂರು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ, ವರನ ವಿರುದ್ಧ ವಧು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ಬೆಳಗಾವಿ: ವರದಕ್ಷಿಣೆ ನೀಡಿಲ್ಲವೆಂದು ವಧುವಿಗೆ ತಾಳಿ ಕಟ್ಟದ ವರ ಅರೆಸ್ಟ್
ಬೆಳಗಾವಿಯಲ್ಲಿ ವರದಕ್ಷಿಣೆ ನೀಡಿಲ್ಲವೆಂದು ವಧುವಿಗೆ ತಾಳಿ ಕಟ್ಟದ ವರ ಅರೆಸ್ಟ್
ಸಹದೇವ್​ ಮಾನೆ
| Edited By: Rakesh Nayak Manchi|

Updated on:Jan 01, 2024 | 10:33 PM

Share

ಬೆಳಗಾವಿ, ಜ.1: ತಾಳಿ ಕಟ್ಟುವ ಸಮಯದಲ್ಲಿ ಮದುವೆ ‌ಮುರಿದು ಬಿದ್ದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ನಡೆದಿದೆ. ಲೋಕಮಾನ್ಯ ಕಲ್ಯಾಣ ಮಂಟಪದಲ್ಲಿ ಕಳೆದ ಮೂರು ದಿನಗಳ ಹಿಂದೆ ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಹಳೆ ಹುಬ್ಬಳ್ಳಿ ನಿವಾಸಿ ವರ ಸಚಿನ್ ಪಾಟೀಲ್ ಎಂಬವನೊಂದಿಗೆ ಯುವತಿಯೊಬ್ಬಳ ಮದುವೆ ನಿಶ್ಚಯವಾಗಿತ್ತು. ಖಾನಾಪುರ ಪಟ್ಟಣದ ಲೋಕಮಾನ್ಯ ಕಲ್ಯಾಣ ಮಂಟಪ ಕೂಡ ಬುಕ್ ಮಾಡಲಾಗಿತ್ತು. 2023ರ ಡಿಸೆಂಬರ್ 30 ರಂದು ನಡೆದ ಮದುವೆ ನಿಶ್ಚಿತಾರ್ಥ ಸಂದರ್ಭದಲ್ಲಿ 100 ಗ್ರಾಂ ಚಿನ್ನ,‌ 10 ಲಕ್ಷ ವರದಕ್ಷಿಣೆ ನೀಡುವ ಮಾತುಕತೆ ನಡೆದಿತ್ತು.

ಇದನ್ನೂ ಓದಿ: ವರದಕ್ಷಿಣೆಯಾಗಿ ಬಿಎಂಡಬ್ಲ್ಯೂ ಕಾರು ಕೊಡಲಿಲ್ಲ ಎನ್ನುವ ಕಾರಣಕ್ಕೆ ನಿಂತ ಮದುವೆ, ವೈದ್ಯೆ ಆತ್ಮಹತ್ಯೆ

ಆದರೆ, ‌ವರದಕ್ಷಿಣೆ ನೀಡದ ಹಿನ್ನೆಲೆಯಲ್ಲಿ ತಾಳಿ ಕಟ್ಟಲು ವರ ಸಚಿನ್ ಒಲ್ಲೆ ಎಂದಿದ್ದಾನೆ. ಇದರಿಂದ ಬೆಸತ್ತ ವಧುವಿನ ಕುಟುಂಬಸ್ಥರು ಖಾನಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವರನ ವಿರುದ್ಧ ವಧು ನೀಡಿದ ದೂರಿನ ಅನ್ವಯ ಪೊಲೀಸರು, ಸಚಿನ್​ ಪಾಟೀಲ್​ನನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:33 pm, Mon, 1 January 24

Follow Us
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್