AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಮಹಿಳೆಯರಿಗೆ ಮಹಾಮೋಸ: ಕೋಟಿ ಕೋಟಿ ಹಣ ಪಡೆದು ಆರೋಪಿ ಜೂಟ್​

ಬೆಳಗಾವಿಯಲ್ಲಿ ಮಹಾರಾಷ್ಟ್ರ ಮೂಲದ ಬಾಬಾಸಾಹೇಬ್ ಕೋಳೇಕರ್ ಎಂಬಾತ ಹಲವಾರು ಮಹಿಳೆಯರಿಗೆ ಒಟ್ಟು 12 ಕೋಟಿ ರೂ. ವಂಚಿಸಿದ್ದಾನೆ. ಗೃಹಲಕ್ಷ್ಮಿ ಫಲಾನುಭವಿಗಳನ್ನು ಗುರಿಯಾಗಿಸಿಕೊಂಡು, ಅಗರಬತ್ತಿ ಪ್ಯಾಕಿಂಗ್ ಕೆಲಸ ನೀಡುವುದಾಗಿ ನಂಬಿಸಿ ಐಡಿ ಕಾರ್ಡ್‌ಗಳ ಹೆಸರಿನಲ್ಲಿ ಹಣ ವಸೂಲಿ ಮಾಡಿದ್ದಾನೆ. ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ವಿಶೇಷ ತಂಡ ರಚಿಸಲಾಗಿದೆ.

Sahadev Mane
| Edited By: |

Updated on:Oct 29, 2025 | 3:32 PM

Share

ಬೆಳಗಾವಿ, ಅಕ್ಟೋಬರ್​ 29: ಲೂಸ್ ಅಗರಬತ್ತಿ ಪ್ಯಾಕ್ ಮಾಡಲು ಹೇಳಿ ನೂರಾರು ಮಹಿಳೆಯರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಗಾವಿಯಲ್ಲಿ  ಬೆಳಕಿಗೆ ಬಂದಿದೆ. ಮಹಿಳಾ ಗೃಹ ಉದ್ಯೋಗ ಸಮೂಹ ಬೆಳಗಾವಿ ಎಂಬ ಸಂಘದಿಂದ ವಂಚನೆ ಮಾಡಲಾಗಿದ್ದು, ಮಹಾರಾಷ್ಟ್ರ ಮೂಲದ ಬಾಬಾಸಾಹೇಬ್ ಕೋಳೆಕರ್​ ವಿರುದ್ಧ ಆರೋಪ ಕೇಳಿಬಂದಿದೆ. ಗೃಹಲಕ್ಷ್ಮೀ ಯೋಜನೆ ಲಾಭ ಪಡೆಯುತ್ತಿದ್ದ ಮಹಿಳೆಯರನ್ನೇ ಟಾರ್ಗೆಟ್ ಮಾಡಲಾಗಿದ್ದು, ಐಡಿ ಕಾರ್ಡ್ ಮಾಡಲು ಮಹಿಳೆಯರಿಂದ 2500 ರೂ. ವಸೂಲಿ ಮಾಡಲಾಗಿತ್ತು. ಒಂದೊಂದು ಐಡಿ ಕಾರ್ಡ್​ಗೆ 3 ಸಾವಿರ ನೀಡುತ್ತೇವೆಂದು ಆಮಿಷ ತೋರಿಸಲಾಗಿತ್ತು. ಹೀಗಾಗಿ ಒಬೊಬ್ಬರು ತಲಾ 20ರಿಂದ 30 ಐಡಿ ಕಾರ್ಡ್ ಖರೀದಿಸಿದ್ದರು. ಸುಮಾರು 12 ಕೋಟಿಗೂ ಅಧಿಕ ಹಣ ಪಡೆದು ಆರೋಪಿ ಎಸ್ಕೇಪ್​​ ಆಗಿದ್ದು, ವಂಚನೆಗೊಳಗಾದ ಮಹಿಳೆಯರು ನ್ಯಾಯ ಕೊಡಿಸಬೇಕೆಂದು ಡಿಸಿ, ಪೊಲೀಸ್ ಕಮಿಷನರ್​ಗೆ ದೂರು ನೀಡಿದ್ದಾರೆ. ಈ ಬಗ್ಗೆ ಬೆಳಗಾವಿಯ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published On - 3:31 pm, Wed, 29 October 25

Follow Us
Sahadev Mane
Sahadev Mane
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್