AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಪಾಲಿಕೆಯಲ್ಲಿ ಹಲವು ವರ್ಷಗಳಿಂದ ಠಿಕಾಣಿ ಹೂಡಿದ್ದ ಅಧಿಕಾರಿಗಳಿಗೆ ಶಾಕ್; ವರ್ಗಾವಣೆಗೆ ಠರಾವ್ ಪಾಸ್ ಮಾಡಿದ ಮೇಯರ್​

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 1991ರಿಂದ ಅನೇಕ ಅಧಿಕಾರಿಗಳು ಠಿಕಾಣಿ ಹೂಡಿದ್ದಾರೆ. ನಿಯಮದ ಪ್ರಕಾರ, ಆ ಹುದ್ದೆಗಳಿಗೆ ತಕ್ಕಂತೆ ಇಂತಿಷ್ಟು ವರ್ಷಗಳು ಮಾತ್ರ ಅಲ್ಲಿ ಕರ್ತವ್ಯ ನಿರ್ವಹಿಸಬೇಕು. ಈ ಹಿನ್ನಲೇ ಇದೀಗ ಎಚ್ಚೆತ್ತ ಪಾಲಿಕೆ, ಇದೀಗ ವರ್ಗಾವಣೆಗೆ ಠರಾವು ಪಾಸ್​ ಮಾಡಿದೆ.

ಬೆಳಗಾವಿ ಪಾಲಿಕೆಯಲ್ಲಿ ಹಲವು ವರ್ಷಗಳಿಂದ ಠಿಕಾಣಿ ಹೂಡಿದ್ದ ಅಧಿಕಾರಿಗಳಿಗೆ ಶಾಕ್; ವರ್ಗಾವಣೆಗೆ ಠರಾವ್ ಪಾಸ್ ಮಾಡಿದ ಮೇಯರ್​
ಬೆಳಗಾವಿ ನಗರ ಪಾಲಿಕೆ
Sahadev Mane
| Edited By: |

Updated on:Aug 17, 2023 | 10:04 AM

Share

ಬೆಳಗಾವಿ, ಆ.17: ಮಹಾನಗರ ಪಾಲಿಕೆಯಲ್ಲಿ ಹಲವು ವರ್ಷಗಳಿಂದ ಠಿಕಾಣಿ ಹೂಡಿದ್ದ ಅಧಿಕಾರಿಗಳಿಗೆ ಇದೀಗ ಶಾಕ್ ಹೊಡೆದಂತಾಗಿದೆ. ಮೂರು ವರ್ಷಕ್ಕಿಂತ ಹೆಚ್ಚು ಕಾಲ ಒಂದೇ ಕಡೆ ಇರುವ ಅಧಿಕಾರಿಗಳ ವರ್ಗಾವಣೆಗೆ ಠರಾವ್ ಪಾಸ್ ಆಗಿದೆ. 1991ರಿಂದ ಬೆಳಗಾವಿ (Belagavi) ಪಾಲಿಕೆಯಲ್ಲಿಯೇ ಅನೇಕ ಅಧಿಕಾರಿಗಳು ಇದ್ದು, ನಿಯಮದ ಪ್ರಕಾರ ಗ್ರೆಡ್ Aಮತ್ತು B ವರ್ಗದ ಅಧಿಕಾರಿಗಳು ಒಂದು ಹುದ್ದೆಯಲ್ಲಿ ಮೂರು ವರ್ಷ, C ಗ್ರೆಡ್ ಅಧಿಕಾರಿಗಳು ನಾಲ್ಕು ವರ್ಷ ಹಾಗೂ D ಗ್ರೆಡ್ ನೌಕರರು 7 ವರ್ಷ ಇರಬೇಕು. ಈ ನಿಯಮ ಬೆಳಗಾವಿ ಪಾಲಿಕೆಯಲ್ಲಿ ಮಾತ್ರ ಪಾಲನೆ ಆಗಿಲ್ಲ. ಈ ಹಿನ್ನಲೆ ಇದೀಗ ಅಧಿಕಾರಿಗಳಿಗೆ ದಿಢೀರ್ ವರ್ಗಾವಣೆ ಶಾಕ್​ ನೀಡಿದೆ.

ಅಧಿಕಾರಿಗಳ ವರ್ಗಾವಣೆಗೆ ಠರಾವ್ ಪಾಸ್ ಮಾಡುವಂತೆ ಆಗ್ರಹ​

ಒಂದೇ ಕಡೆ ಇರುವ ಅಧಿಕಾರಿಗಳು, ತಮ್ಮ ಕೆಲಸದಲ್ಲಿ ಉದಾಸೀನ ಹಾಗೂ ನಿರ್ಲಕ್ಷ್ಯ ಭಾವನೆ ತೋರಿಸುತ್ತಿದ್ದಾರೆ. ಇದರಿಂದ ಬೆಳಗಾವಿ ಮಹಾನಗರ ಅಭಿವೃದ್ಧಿ ಕುಂಠಿತವಾಗಿದೆ. ಇದರಿಂದ ಅನೇಕ ವರ್ಷಗಳಿಂದ ಠಿಕಾಣಿ ಹೂಡಿರುವ ಅಧಿಕಾರಿಗಳ ವರ್ಗಾವಣೆಗೆ ಠರಾವ್ ಪಾಸ್ ಮಾಡುವಂತೆ ಪಾಲಿಕೆ ಸದಸ್ಯ ಡಾ. ಶಂಕರಗೌಡ ಪಾಟೀಲ್ ಆಗ್ರಹಿಸಿದ್ದರು. ಈ ಹಿನ್ನಲೆ ನಿನ್ನೆ(ಆ.16) ಪಾಲಿಕೆ ಸಾಮಾನ್ಯ ಸಭೆಯಲ್ಲಿ ವರ್ಗಾವಣೆ ಠರಾವ್ ಅಂಗೀಕಾರವಾಗಿದೆ.

ಇದನ್ನೂ ಓದಿ:ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆ: ಮರಾಠಿಯಲ್ಲಿ ಸಭೆಯ ನೋಟಿಸ್ ನೀಡಿಲ್ಲವೆಂದು ಕ್ಯಾತೆ ತೆಗೆದ ಎಂಇಎಸ್

ಸರ್ಕಾರಕ್ಕೆ ಅಧಿಕಾರಿಗಳ ವರ್ಗಾವಣೆ ಕುರಿತು ಪ್ರಸ್ತಾವನೆ ಸಲ್ಲಿಸಲು ನಿರ್ಧಾರ

ಇನ್ನು ನಿನ್ನೆ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಎಲ್ಲಾ ಅಧಿಕಾರಿಗಳನ್ನು ಒಂದೇ ದೃಷ್ಟಿಯಿಂದ ನೋಡುವುದು ಬೇಡ. ಇದರಿಂದ ಪ್ರಾಮಾಣಿಕ ಅಧಿಕಾರಿಗಳ ಮನೋಬಲ ಕಡಿಮೆ ಆಗಲಿದೆ ಎಂದು ವರ್ಗಾವಣೆ ಪ್ರಸ್ತಾಪಕ್ಕೆ ಶಾಸಕ ರಾಜು ಸೇಠ್ ವಿರೋಧ ವ್ಯಕ್ತಪಡಿಸಿದ್ದರು. ಈ ವೇಳೆ ಕಾನೂನಿನಲ್ಲಿ ಇದ್ದರೆ ಠರಾವ್ ಪಾಸ್ ಮಾಡಿ ಎಂದು ಬಿಜೆಪಿ ಶಾಸಕ ಅಭಯ್ ಪಾಟೀಲ್ ಹೇಳಿದ್ದರು. ಪಾಲಿಕೆಯಲ್ಲಿ ಅಧಿಕಾರ ಇರುವ ಬಿಜೆಪಿ ಸದಸ್ಯರಿಂದ ಸಹಮತ ಬಂದಿದ್ದು, ಮೇಯರ್ ಶೋಭಾ ಸೋಮನಾಚೆ ಸರ್ವಾನುಮತದಿಂದ ಠರಾವ್ ಪಾಸ್ ಮಾಡಿದರು.

ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:03 am, Thu, 17 August 23

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್