AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಪಾಲಿಕೆಯಲ್ಲಿ ಹಲವು ವರ್ಷಗಳಿಂದ ಠಿಕಾಣಿ ಹೂಡಿದ್ದ ಅಧಿಕಾರಿಗಳಿಗೆ ಶಾಕ್; ವರ್ಗಾವಣೆಗೆ ಠರಾವ್ ಪಾಸ್ ಮಾಡಿದ ಮೇಯರ್​

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 1991ರಿಂದ ಅನೇಕ ಅಧಿಕಾರಿಗಳು ಠಿಕಾಣಿ ಹೂಡಿದ್ದಾರೆ. ನಿಯಮದ ಪ್ರಕಾರ, ಆ ಹುದ್ದೆಗಳಿಗೆ ತಕ್ಕಂತೆ ಇಂತಿಷ್ಟು ವರ್ಷಗಳು ಮಾತ್ರ ಅಲ್ಲಿ ಕರ್ತವ್ಯ ನಿರ್ವಹಿಸಬೇಕು. ಈ ಹಿನ್ನಲೇ ಇದೀಗ ಎಚ್ಚೆತ್ತ ಪಾಲಿಕೆ, ಇದೀಗ ವರ್ಗಾವಣೆಗೆ ಠರಾವು ಪಾಸ್​ ಮಾಡಿದೆ.

ಬೆಳಗಾವಿ ಪಾಲಿಕೆಯಲ್ಲಿ ಹಲವು ವರ್ಷಗಳಿಂದ ಠಿಕಾಣಿ ಹೂಡಿದ್ದ ಅಧಿಕಾರಿಗಳಿಗೆ ಶಾಕ್; ವರ್ಗಾವಣೆಗೆ ಠರಾವ್ ಪಾಸ್ ಮಾಡಿದ ಮೇಯರ್​
ಬೆಳಗಾವಿ ನಗರ ಪಾಲಿಕೆ
ಸಹದೇವ್​ ಮಾನೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Aug 17, 2023 | 10:04 AM

Share

ಬೆಳಗಾವಿ, ಆ.17: ಮಹಾನಗರ ಪಾಲಿಕೆಯಲ್ಲಿ ಹಲವು ವರ್ಷಗಳಿಂದ ಠಿಕಾಣಿ ಹೂಡಿದ್ದ ಅಧಿಕಾರಿಗಳಿಗೆ ಇದೀಗ ಶಾಕ್ ಹೊಡೆದಂತಾಗಿದೆ. ಮೂರು ವರ್ಷಕ್ಕಿಂತ ಹೆಚ್ಚು ಕಾಲ ಒಂದೇ ಕಡೆ ಇರುವ ಅಧಿಕಾರಿಗಳ ವರ್ಗಾವಣೆಗೆ ಠರಾವ್ ಪಾಸ್ ಆಗಿದೆ. 1991ರಿಂದ ಬೆಳಗಾವಿ (Belagavi) ಪಾಲಿಕೆಯಲ್ಲಿಯೇ ಅನೇಕ ಅಧಿಕಾರಿಗಳು ಇದ್ದು, ನಿಯಮದ ಪ್ರಕಾರ ಗ್ರೆಡ್ Aಮತ್ತು B ವರ್ಗದ ಅಧಿಕಾರಿಗಳು ಒಂದು ಹುದ್ದೆಯಲ್ಲಿ ಮೂರು ವರ್ಷ, C ಗ್ರೆಡ್ ಅಧಿಕಾರಿಗಳು ನಾಲ್ಕು ವರ್ಷ ಹಾಗೂ D ಗ್ರೆಡ್ ನೌಕರರು 7 ವರ್ಷ ಇರಬೇಕು. ಈ ನಿಯಮ ಬೆಳಗಾವಿ ಪಾಲಿಕೆಯಲ್ಲಿ ಮಾತ್ರ ಪಾಲನೆ ಆಗಿಲ್ಲ. ಈ ಹಿನ್ನಲೆ ಇದೀಗ ಅಧಿಕಾರಿಗಳಿಗೆ ದಿಢೀರ್ ವರ್ಗಾವಣೆ ಶಾಕ್​ ನೀಡಿದೆ.

ಅಧಿಕಾರಿಗಳ ವರ್ಗಾವಣೆಗೆ ಠರಾವ್ ಪಾಸ್ ಮಾಡುವಂತೆ ಆಗ್ರಹ​

ಒಂದೇ ಕಡೆ ಇರುವ ಅಧಿಕಾರಿಗಳು, ತಮ್ಮ ಕೆಲಸದಲ್ಲಿ ಉದಾಸೀನ ಹಾಗೂ ನಿರ್ಲಕ್ಷ್ಯ ಭಾವನೆ ತೋರಿಸುತ್ತಿದ್ದಾರೆ. ಇದರಿಂದ ಬೆಳಗಾವಿ ಮಹಾನಗರ ಅಭಿವೃದ್ಧಿ ಕುಂಠಿತವಾಗಿದೆ. ಇದರಿಂದ ಅನೇಕ ವರ್ಷಗಳಿಂದ ಠಿಕಾಣಿ ಹೂಡಿರುವ ಅಧಿಕಾರಿಗಳ ವರ್ಗಾವಣೆಗೆ ಠರಾವ್ ಪಾಸ್ ಮಾಡುವಂತೆ ಪಾಲಿಕೆ ಸದಸ್ಯ ಡಾ. ಶಂಕರಗೌಡ ಪಾಟೀಲ್ ಆಗ್ರಹಿಸಿದ್ದರು. ಈ ಹಿನ್ನಲೆ ನಿನ್ನೆ(ಆ.16) ಪಾಲಿಕೆ ಸಾಮಾನ್ಯ ಸಭೆಯಲ್ಲಿ ವರ್ಗಾವಣೆ ಠರಾವ್ ಅಂಗೀಕಾರವಾಗಿದೆ.

ಇದನ್ನೂ ಓದಿ:ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆ: ಮರಾಠಿಯಲ್ಲಿ ಸಭೆಯ ನೋಟಿಸ್ ನೀಡಿಲ್ಲವೆಂದು ಕ್ಯಾತೆ ತೆಗೆದ ಎಂಇಎಸ್

ಸರ್ಕಾರಕ್ಕೆ ಅಧಿಕಾರಿಗಳ ವರ್ಗಾವಣೆ ಕುರಿತು ಪ್ರಸ್ತಾವನೆ ಸಲ್ಲಿಸಲು ನಿರ್ಧಾರ

ಇನ್ನು ನಿನ್ನೆ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಎಲ್ಲಾ ಅಧಿಕಾರಿಗಳನ್ನು ಒಂದೇ ದೃಷ್ಟಿಯಿಂದ ನೋಡುವುದು ಬೇಡ. ಇದರಿಂದ ಪ್ರಾಮಾಣಿಕ ಅಧಿಕಾರಿಗಳ ಮನೋಬಲ ಕಡಿಮೆ ಆಗಲಿದೆ ಎಂದು ವರ್ಗಾವಣೆ ಪ್ರಸ್ತಾಪಕ್ಕೆ ಶಾಸಕ ರಾಜು ಸೇಠ್ ವಿರೋಧ ವ್ಯಕ್ತಪಡಿಸಿದ್ದರು. ಈ ವೇಳೆ ಕಾನೂನಿನಲ್ಲಿ ಇದ್ದರೆ ಠರಾವ್ ಪಾಸ್ ಮಾಡಿ ಎಂದು ಬಿಜೆಪಿ ಶಾಸಕ ಅಭಯ್ ಪಾಟೀಲ್ ಹೇಳಿದ್ದರು. ಪಾಲಿಕೆಯಲ್ಲಿ ಅಧಿಕಾರ ಇರುವ ಬಿಜೆಪಿ ಸದಸ್ಯರಿಂದ ಸಹಮತ ಬಂದಿದ್ದು, ಮೇಯರ್ ಶೋಭಾ ಸೋಮನಾಚೆ ಸರ್ವಾನುಮತದಿಂದ ಠರಾವ್ ಪಾಸ್ ಮಾಡಿದರು.

ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:03 am, Thu, 17 August 23

Follow Us
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು