AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕ; ರಕ್ಷಣೆಗೆ ಸ್ಥಳೀಯರ ಹರಸಾಹಸ

ಜಿಲ್ಲೆಯ ಅಥಣಿ ತಾಲೂಕಿನ 22 ಗ್ರಾಮಗಳು ಮುಳಗಡೆಯಾಗಿವೆ. ಈ ನಡುವೆ ಕೃಷ್ಣಾ ನದಿ ನೀರು ಏರಿಕೆಯಾಗಿದ್ದಕ್ಕೆ ಹುಲಗವಾಳಿ ಗ್ರಾಮದ ಯುವಕ ಕುಮಾರ್ ಎಂಬಾತ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ.

ಕೃಷ್ಣಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕ; ರಕ್ಷಣೆಗೆ ಸ್ಥಳೀಯರ ಹರಸಾಹಸ
ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನನ್ನು ರಕ್ಷಿಸಲಾಗಿದೆ
TV9 Web
| Updated By: sandhya thejappa|

Updated on:Jul 26, 2021 | 10:59 AM

Share

ಬೆಳಗಾವಿ: ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಸದ್ಯ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿರುವ ಕೋಯ್ನಾ ಡ್ಯಾಂನಿಂದ 40 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಟ್ಟಿದ್ದು, ಇದರಿಂದ ಕೃಷ್ಣಾ ನದಿಯಲ್ಲಿ 4 ಲಕ್ಷ 10 ಸಾವಿರ ಕ್ಯೂಸೆಕ್ ಹೊರ ಹರಿವಿದೆ. ಇನ್ನೂ ಕೂಡ ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಹೀಗಾಗಿ ಕೃಷ್ಣಾ ನದಿ ತಟದಲ್ಲಿ ಪ್ರವಾಹದ ಭೀತಿ ಎದುರಾಗಿದೆ.

ಜಿಲ್ಲೆಯ ಅಥಣಿ ತಾಲೂಕಿನ 22 ಗ್ರಾಮಗಳು ಮುಳಗಡೆಯಾಗಿವೆ. ಈ ನಡುವೆ ಕೃಷ್ಣಾ ನದಿ ನೀರು ಏರಿಕೆಯಾಗಿದ್ದಕ್ಕೆ ಹುಲಗವಾಳಿ ಗ್ರಾಮದ ಯುವಕ ಕುಮಾರ್ ಎಂಬಾತ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ. ಅಥಣಿ ತಾಲೂಕಿನ ಹುಲಿ ಗಡ್ಡಿ ಗ್ರಾಮದಲ್ಲಿದ್ದ ಜಮೀನಿಗೆ ಹೋಗಿದ್ದ ಯುವಕ ಕುಮಾರ್, ನೀರು ಏರಿಕೆಯಾಗಿದ್ದನ್ನ ಗಮನಿಸಿ ಹುಲಗಬಾಳಿಯಲ್ಲಿದ್ದ ಮನೆಗೆ ವಾಪಾಸ್ ಆಗುತ್ತಿದ್ದ. ಮುಳುಗಿದ ಸೇತುವೆಯಲ್ಲೇ ನಡೆದುಕೊಂಡು ಬರುತ್ತಿದ್ದ ಕುಮಾರ್ ರಭಸವಾಗಿ ಹರಿಯುತ್ತಿದ್ದ ನೀರಲ್ಲಿ ಸಿಕ್ಕಿಕೊಂಡಿದ್ದ. ಈಜಲು ಆಗದೇ ಕೊಚ್ಚಿಕೊಂಡು ಹೋಗುತ್ತಿದ್ದ.

ಹುಲಗಬಾಳಿ ಗ್ರಾಮದ ಕೆಲ ಯುವಕರು ಗಮನಿಸಿ ಆತನ ರಕ್ಷಣೆಗೆ ಧಾವಿಸಿದ್ದಾರೆ. ತಕ್ಷಣ ಹಗ್ಗ ತಂದು ಕುಮಾರ್​ಗೆ ಹಗ್ಗ ನೀಡಿ ಎಳೆಯಲು ಮುಂದಾಗಿದ್ದಾರೆ. ಆದರೆ ನೀರಿನ ಪ್ರಮಾಣ ಜಾಸ್ತಿ ಇರುವ ಕಾರಣಕ್ಕೆ ಆತನ ಬಳಿ ಹಗ್ಗ ಮುಟ್ಟಿಸಲು ಆಗಿಲ್ಲ. ಇದೇ ವೇಳೆ ಪರಶುರಾಮ್ ಕಾಂಬ್ಳೆ ಎಂಬಾತ ತನ್ನ ಜೀವವನ್ನ ಪಣಕ್ಕಿಟ್ಟು ರಭಸವಾಗಿ ಹರಿಯುವ ನದಿಗೆ ಇಳಿದು ಕುಮಾರ್ಗೆ ಹಗ್ಗ ನೀಡಿದ್ದಾನೆ. ಕುಮಾರ್ ಹಗ್ಗ ಹಿಡಿದುಕೊಳ್ಳುತ್ತಿದ್ದಂತೆ ದಂಡೆ ಮೇಲಿದ್ದ ಯುವಕರು ಎಳೆದುಕೊಂಡು ಆತನ ಜೀವ ಉಳಿಸಿದ್ದಾರೆ. ಮತ್ತೊರ್ವ ವ್ಯಕ್ತಿಯ ರಕ್ಷಣೆ ಕೃಷ್ಣಾ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿದೆ. ವ್ಯಕ್ತಿ ಕೊಚ್ಚಿಕೊಂಡು ಹೋಗಿ ಮುಳ್ಳಿನ ಗಿಡದಲ್ಲಿ ಸಿಲುಕಿದ್ದ. ನದಿ ಮಧ್ಯೆ ಮುಳ್ಳಿನ ಗಿಡಗಂಟೆಯಲ್ಲಿ‌ ಸಿಲುಕಿದ್ದ. ದೋಣಿ ಮೂಲಕ ಸ್ಥಳೀಯ ಯುವಕರು ತೆರಳಿ ವ್ಯಕ್ತಿಯನ್ನ ರಕ್ಷಣೆ ಮಾಡಿದ್ದಾರೆ.‌

ಪ್ರವಾಹದಲ್ಲಿ ಸಿಲುಕಿದ್ದ ನಾಯಿ ಮರಿ ರಕ್ಷಣೆ ಅಥಣಿ ತಾಲೂಕಿನ‌ ಹಳ್ಯಾಳ ಗ್ರಾಮದ ಬಳಿ ಪ್ರವಾಹದಲ್ಲಿ ಸಿಲುಕಿದ್ದ ನಾಯಿ ಮರಿಯನ್ನು ರಕ್ಷಿಸಲಾಗಿದೆ. ಪ್ರಹಾದಲ್ಲಿ ಪೊಲೀಸ್ ಪೇದೆ ಆಲಗೂರ ಹಾಗೂ ಇತರರಿಂದ ನಾಯಿ ಮರಿಯನ್ನು ರಕ್ಷಣೆ ಮಾಡಲಾಗಿದೆ.

ನೀರಿನಲ್ಲಿ ಹೋಗುತ್ತಿದ್ದ ನಾಯಿಯನ್ನು ರಕ್ಷಿಸಲಾಗಿದೆ

ಇದನ್ನೂ ಓದಿ

ತುಂಗಭದ್ರಾ ಡ್ಯಾಂನಿಂದ ಹೆಚ್ಚುವರಿ ನೀರು ಬಿಡುಗಡೆ; ನದಿ ಪಾತ್ರದಲ್ಲಿದ್ದ ಪುರಂದರ ದಾಸರ ಮಂಟಪ, ಸ್ನಾನಘಟ್ಟ ಮುಳುಗಡೆ

Belagavi Flood: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿ; 30ಕ್ಕೂ ಹೆಚ್ಚು ಗ್ರಾಮಗಳು ಮುಳುಗಡೆ, ನೀರಿನಲ್ಲಿ ತೇಲಿ ಹೋದ ಜಾನುವಾರುಗಳು

(A young man was washed away by Krishna river at Belagavi)

Published On - 10:19 am, Mon, 26 July 21

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!