AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News: ಎರಡು ಲಾರಿ-ಕಾರು ಮಧ್ಯೆ ಅಪಘಾತ; ಇಬ್ಬರ ಸಾವು, ಕಾಡಸಿದ್ದೇಶ್ವರ ಸ್ವಾಮೀಜಿ ಸೇರಿ ಇಬ್ಬರಿಗೆ ಗಾಯ

ಬೆಳಗಾವಿ ತಾಲೂಕಿನ ಕಾಕತಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿ, ಕಾರು ಮಧ್ಯೆ ಭೀಕರ ಅಪಘಾತ‌ವಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಾಪೂರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಸ್ವಾಮೀಜಿ ಸೇರಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

Belagavi News: ಎರಡು ಲಾರಿ-ಕಾರು ಮಧ್ಯೆ ಅಪಘಾತ; ಇಬ್ಬರ ಸಾವು, ಕಾಡಸಿದ್ದೇಶ್ವರ ಸ್ವಾಮೀಜಿ ಸೇರಿ ಇಬ್ಬರಿಗೆ ಗಾಯ
ಬೆಳಗಾವಿಯಲ್ಲಿ ಭೀಕರ ಕಾರು ಅಪಘಾತ
ಕಿರಣ್ ಹನುಮಂತ್​ ಮಾದಾರ್
|

Updated on: Jun 17, 2023 | 12:49 PM

Share

ಬೆಳಗಾವಿ: ತಾಲೂಕಿನ ಕಾಕತಿ ಬಳಿಯ ರಾಷ್ಟ್ರೀಯ ಹೆದ್ದಾರಿ(National Highway) ನಾಲ್ಕರಲ್ಲಿ ಎರಡು ಲಾರಿ, ಕಾರು ಮಧ್ಯೆ ಭೀಕರ ಅಪಘಾತ‌ (Accident)ವಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಶಿವಾಪೂರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಸ್ವಾಮೀಜಿ ಸೇರಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕಾಗಮಿಸಿದ ಕಾಕತಿ ಪೊಲೀಸರು ಗಾಯಾಳುಗಳನ್ನ ಖಾಸಗಿ ಆಸ್ಪತ್ರೆಗೆ ಶಿಫ್ಟ್​ ಮಾಡಿದ್ದಾರೆ.

5 ಸಾವಿರ ಸಾಲ ಕೇಳಿದ್ದಕ್ಕೆ ಮಚ್ಚಿನಿಂದ ಹಲ್ಲೆ; ಆಸ್ಪತ್ರೆಗೆ ದಾಖಲು

ತುಮಕೂರು: 5 ಸಾವಿರ ಸಾಲ ಕೇಳಿದ್ದಕ್ಕೆ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಲಾಳಪುರ ಕಾಲೋನಿಯಲ್ಲಿ ನಡೆದಿದೆ. ಮಹೇಶ ಹಾಗೂ ಆತನ ಸಹಚರರು ಸೇರಿಕೊಂಡು ಸಚಿನ್ ಎಂಬುವವನಿಗೆ ಹಲ್ಲೆ ಮಾಡಿದ್ದಾರೆ. ಹೌದು ಮನೆಯಲ್ಲಿ ಮಲಗಿರುವಾಗ 4 ಜನರಿಂದ ಹಲ್ಲೆ ಮಾಡಿದ್ದು, ಸಚಿನ್​ ತಲೆಗೆ ಗಂಭೀರ ಗಾಯವಾಗಿದೆ. ಕೂಡಲೇ ಆತನನ್ನ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ, ಪಾದಾಚಾರಿ ಸ್ಥಳದಲ್ಲೇ ಸಾವು: ಸ್ಥಳೀಯರಿಂದ ಹೆದ್ದಾರಿ ತಡೆದು ಪ್ರತಿಭಟನೆ

ಗೋಡೆ ಕುಸಿದು ಬಿದ್ದು ಕಾರ್ಮಿಕ ಸಾವು

ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ಅಂಡರ್​​​ಸನ್ ಪೇಟೆಯಲ್ಲಿ ಗೋಡೆ ಕುಸಿದು ಬಿದ್ದು, ಕಾರ್ಮಿಕ ಅಮರನಾಥ್​​(32) ಸಾವನ್ನಪ್ಪಿದ್ದಾನೆ. ಅಂಡರ್​​ಸನ್ ಪೇಟೆ ರಸ್ತೆ ಅಗಲೀಕರಣಕ್ಕೆ ಅಡ್ಡಲಾಗಿದ್ದ ಮಸೀದಿಯನ್ನ ತೆರವುಗೊಳಿಸುವಾಗ ಈ ದುರಂತ ನಡೆದಿದೆ. ಸ್ಥಳಕ್ಕೆ ಅಂಡರ್​​ಸನ್‌ ಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತಕ್ಕೊಳಗಾಗಿದ್ದ ವೃದ್ಧೆ ಚಿಕಿತ್ಸೆ ಫಲಿಸದೇ ಸಾವು

ಬೆಂಗಳೂರು: ಮೇ. 26ರಂದು ಕೆಂಗೇರಿಯ ವಿದ್ಯಾಪೀಠ ರಸ್ತೆಯಲ್ಲಿ ಭೀಕರ ಅಪಘಾತವೊಂದು ನಡೆದಿತ್ತು. ಹೌದು ರಸ್ತೆ ದಾಟುವಾಗ ಲಾರಿಯೊಂದು 70 ವರ್ಷದ ವೃದ್ದೆ ಲಕ್ಷ್ಮಮ್ಮ ಎನ್ನುವವರ ಮೇಲೆ ಹರಿದಿತ್ತು. ಬಳಿಕ ಗಂಭೀರವಾಗಿ ಗಾಯಗೊಂಡ ಲಕ್ಷ್ಮಮ್ಮರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಲಕ್ಷ್ಮಮ್ಮ ಇಂದು(ಜೂ.17) ಸಾವನ್ನಪ್ಪಿದ್ದಾರೆ. ಈ ಕುರಿತು ಕೆಂಗೇರಿ ಸಂಚಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ