AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುತೂಹಲಕ್ಕೆ ಹೋಗಿ ನೋಡಿದಾಗ ಎದುರಾಗಿದ್ದು ಶಾಕ್​! ಬಾಲ್ಯ ವಿವಾಹ ತಡೆದ ಅಕ್ಕ ಪಡೆ

ಬೆಳಗಾವಿಯಲ್ಲಿ ಅಕ್ಕ ಪಡೆ ಕೇವಲ ಎರಡು ದಿನಗಳಲ್ಲಿ ಎರಡು ಬಾಲ್ಯ ವಿವಾಹಗಳನ್ನು ಯಶಸ್ವಿಯಾಗಿ ತಡೆದು ಅಪ್ರಾಪ್ತ ಬಾಲಕಿಯರ ರಕ್ಷಣೆ ಮಾಡಿದೆ. ಸದ್ಯ ಅವರ ಕಾರ್ಯಕ್ಕೆ ಪೊಲೀಸ್ ಆಯುಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಾಲ್ಯ ವಿವಾಹ ತಡೆಯುವುದರ ಜೊತೆಗೆ, ಶಾಲಾ-ಕಾಲೇಜು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ರಕ್ಷಣೆಗೂ ಅಕ್ಕ ಪಡೆ ಮುಂದಾಗಿದೆ.

ಕುತೂಹಲಕ್ಕೆ ಹೋಗಿ ನೋಡಿದಾಗ ಎದುರಾಗಿದ್ದು ಶಾಕ್​! ಬಾಲ್ಯ ವಿವಾಹ ತಡೆದ ಅಕ್ಕ ಪಡೆ
ಬಾಲ್ಯ ವಿವಾಹ ತಡೆದ ಅಕ್ಕ ಪಡೆImage Credit source: tv9 kannada
Sahadev Mane
| Edited By: |

Updated on: May 06, 2026 | 3:21 PM

Share

ಬೆಳಗಾವಿ, ಮೇ 06: ನಗರದಲ್ಲಿ (Belagavi) ಅಕ್ಕ ಪಡೆ ಕಾರ್ಯಾಚರಣೆ ನಡೆಸಿ ಎರಡು ಬಾಲ್ಯ ವಿವಾಹವನ್ನು (child marriage) ತಡೆದಿರುವಂತಹ ಘಟನೆ ನಡೆದಿದೆ. ಬಾಲ್ಯ ವಿವಾಹ ಅಪರಾಧ ಅಂತಾ ಗೊತ್ತಿದ್ದರೂ ಪೋಷಕರು ಮದುವೆಗೆ ಮುಂದಾಗಿದ್ದರು. ಮಾಹಿತಿ ಲಭ್ಯವಾಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಅಕ್ಕ ಪಡೆ ಬಾಲ್ಯ ವಿವಾಹವನ್ನು ನಿಲ್ಲಿಸಿ 13 ಮತ್ತು 17 ವರ್ಷದ ಇಬ್ಬರು ಅಪ್ರಾಪ್ತ ಬಾಲಕಿಯರ ರಕ್ಷಣೆ ಮಾಡಿದ್ದಾರೆ. ಸದ್ಯ ಅಕ್ಕ ಪಡೆಯ ಕಾರ್ಯಕ್ಕೆ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮುಖ್ಯಾಂಶಗಳು

  • ಬೆಳಗಾವಿಯಲ್ಲಿ ಬಾಲ್ಯ ವಿವಾಹಕ್ಕೆ ಮುಂದಾಗಿದ್ದ ಪೋಷಕರು
  • ಕಾರ್ಯಾಚರಣೆ ನಡೆಸಿ ಬಾಲ್ಯ ವಿವಾಹ ತಡೆದ ಅಕ್ಕ ಪಡೆ
  • ಅಕ್ಕ ಪಡೆ ಕಾರ್ಯಕ್ಕೆ ಪೊಲೀಸ್ ಕಮಿಷನರ್ ಮೆಚ್ಚುಗೆ
  • ಬೆಳಗಾವಿ ನಗರದಲ್ಲಿ‌ ಹೆಣ್ಣು ಮಕ್ಕಳ ರಕ್ಷಣೆಗೆ ಅಕ್ಕ ಪಡೆ ನಿಯೋಜನೆ

ನಡೆದಿದ್ದೇನು?

ಬೆಳಗಾವಿಯ ವಂಟಮೂರಿ ಕಾಲೋನಿಯಲ್ಲಿ ಪೋಷಕರು 17 ವರ್ಷದ ಬಾಲಕಿ ಮದುವೆ ಮಾಡುತ್ತಿದ್ದರು. ಕುತೂಹಲಕ್ಕೆ ಏನು ಕಾರ್ಯಕ್ರಮ ಅಂತಾ ಅಕ್ಕ ಪಡೆ ಹೋಗಿ ನೋಡಿದಾಗ ಬಾಲ್ಯ ವಿವಾಹ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ತಾಳಿ ಕಟ್ಟುವ ಕೊನೆಯ ಕ್ಷಣದಲ್ಲಿ ಪೊಲೀಸ್​ ಎಂಟ್ರಿ: ಹುಡುಗಿಗೆ 18 ತುಂಬಲು ಬಾಕಿ ಇತ್ತು ಕೇವಲ 4 ತಿಂಗಳು

ಇದೇ ರೀತಿಯಾಗಿ ಶಹಾಪುರದಲ್ಲಿ 13 ವರ್ಷದ ಬಾಲಕಿ ಮದುವೆ ಮಾಡುತ್ತಿರುವ ಮಾಹಿತಿ ಸಿಗುತ್ತಿದ್ದಂತೆ ಕೂಡಲೇ ಅಕ್ಕ ಪಡೆ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಬಾಲ್ಯ ವಿವಾಹ ತಡೆದಿದ್ದಾರೆ. ಸದ್ಯ ಎರಡು ಪ್ರಕರಣದಲ್ಲಿ ಬಾಲಕಿಯರ ತಂದೆ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡು ಕಾನೂನು ಕ್ರಮಕೈಗೊಳ್ಳಲಾಗಿದೆ. ಸದ್ಯ ಬಾಲ್ಯ ವಿವಾಹ ತಡೆದಿದ್ದಕ್ಕೆ ಅಕ್ಕ ಪಡೆ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಬಾಲ್ಯ ವಿವಾಹವಾಗಿದ್ದಕ್ಕೆ ಪೋಕ್ಸೊ ಕೇಸ್: ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

ಇನ್ನು ಬೆಳಗಾವಿ ನಗರದಲ್ಲಿ‌ ಪುಂಡ ಪೋಕರಿಗಳಿಂದ ಹೆಣ್ಣು ಮಕ್ಕಳ ರಕ್ಷಣೆಗೆ ಅಕ್ಕ ಪಡೆ ನಿಯೋಜನೆ ಮಾಡಲಾಗಿದ್ದು, ಶಾಲಾ-ಕಾಲೇಜು, ಬಸ್ ನಿಲ್ದಾಣ, ಮಾರುಕಟ್ಟೆ ಹೀಗೆ ಪ್ರಮುಖ ಸ್ಥಳಗಳಲ್ಲಿ ಅಕ್ಕ ಪಡೆ ಸುತ್ತಾಟ ನಡೆಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಡಿ.ಕೆ. ಶಿವಕುಮಾರ್ ಜನ್ಮದಿನಕ್ಕೆ ಹೈಕಮಾಂಡ್‌ನಿಂದ 'ಗಿಫ್ಟ್'?
ಡಿ.ಕೆ. ಶಿವಕುಮಾರ್ ಜನ್ಮದಿನಕ್ಕೆ ಹೈಕಮಾಂಡ್‌ನಿಂದ 'ಗಿಫ್ಟ್'?
ಹೈಕಮಾಂಡ್​​ ನಿರ್ಧಾರವೇ ಫೈನಲ್ ಶಾಕಿಂಗ್ ಹೇಳಿಕೆ ನೀಡಿದ ಸಿದ್ದರಾಮಯ್ಯ
ಹೈಕಮಾಂಡ್​​ ನಿರ್ಧಾರವೇ ಫೈನಲ್ ಶಾಕಿಂಗ್ ಹೇಳಿಕೆ ನೀಡಿದ ಸಿದ್ದರಾಮಯ್ಯ
ಟಿವಿಕೆಗೆ ಬಂಬಲ ವಿಚಾರದಲ್ಲಿ ಭಿನ್ನಮತ: ಎಐಎಡಿಎಂಕೆಯ ಕೆಲ ಶಾಸಕರಿಂದ ಬಂಡಾಯ?
ಟಿವಿಕೆಗೆ ಬಂಬಲ ವಿಚಾರದಲ್ಲಿ ಭಿನ್ನಮತ: ಎಐಎಡಿಎಂಕೆಯ ಕೆಲ ಶಾಸಕರಿಂದ ಬಂಡಾಯ?
ದಯವಿಟ್ಟು ಬದುಕಲು ಬಿಡಿ: ಸಿಎಂಗೆ ಕೈಮುಗಿದು ಬೇಡಿದ ನೂತನ ಶಾಸಕ ಜೀವರಾಜ್
ದಯವಿಟ್ಟು ಬದುಕಲು ಬಿಡಿ: ಸಿಎಂಗೆ ಕೈಮುಗಿದು ಬೇಡಿದ ನೂತನ ಶಾಸಕ ಜೀವರಾಜ್
ಹೊಸಕೋಟೆ: 50 ಬೈಕ್ ಸಮೇತ ಇಬ್ಬರು ಅಂತರರಾಜ್ಯ ಕಳ್ಳರ ಬಂಧನ
ಹೊಸಕೋಟೆ: 50 ಬೈಕ್ ಸಮೇತ ಇಬ್ಬರು ಅಂತರರಾಜ್ಯ ಕಳ್ಳರ ಬಂಧನ
ತಮಿಳುನಾಡು ಜನಾದೇಶದ ಬಗ್ಗೆ ಪ್ರಕಾಶ್ ರಾಜ್ ಅಸಮಾಧಾನ
ತಮಿಳುನಾಡು ಜನಾದೇಶದ ಬಗ್ಗೆ ಪ್ರಕಾಶ್ ರಾಜ್ ಅಸಮಾಧಾನ
ಬಿಜೆಪಿ ಗೆಲುವಿನ ಬೆನ್ನಲ್ಲೇ ಮಮತಾ ಬ್ಯಾನರ್ಜಿ ನಿವಾಸದ ಭದ್ರತೆ ಕಡಿತ
ಬಿಜೆಪಿ ಗೆಲುವಿನ ಬೆನ್ನಲ್ಲೇ ಮಮತಾ ಬ್ಯಾನರ್ಜಿ ನಿವಾಸದ ಭದ್ರತೆ ಕಡಿತ
3 ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ: ಕುಟುಂಬಸ್ಥರಿಗೆ ಆಘಾತ ತಂದ ಘಟನೆ
3 ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ: ಕುಟುಂಬಸ್ಥರಿಗೆ ಆಘಾತ ತಂದ ಘಟನೆ
ಚೇತನ್ ಇನ್ನಾದರೂ ಮನುಷ್ಯನಾಗು: ವಿವಾದದ ಬಳಿಕ ಸಾರಾ ಗೋವಿಂದು ಕಿವಿಮಾತು
ಚೇತನ್ ಇನ್ನಾದರೂ ಮನುಷ್ಯನಾಗು: ವಿವಾದದ ಬಳಿಕ ಸಾರಾ ಗೋವಿಂದು ಕಿವಿಮಾತು
ಶೃಂಗೇರಿ ಶಾಸಕರ ಪ್ರಮಾಣವಚನಕ್ಕೆ ವಿಳಂಬ ಮಾಡಿಲ್ಲ: ಸ್ಪೀಕರ್ ಖಾದರ್ ಸ್ಪಷ್ಟನೆ
ಶೃಂಗೇರಿ ಶಾಸಕರ ಪ್ರಮಾಣವಚನಕ್ಕೆ ವಿಳಂಬ ಮಾಡಿಲ್ಲ: ಸ್ಪೀಕರ್ ಖಾದರ್ ಸ್ಪಷ್ಟನೆ