AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ವ್ಯಾಕ್ಸಿನ್ ಡಿಪೋದಲ್ಲಿ ಅಕ್ರಮ ಕಾಮಗಾರಿ ಆರೋಪ; ಸ್ಮಾರ್ಟ್ ಸಿಟಿ ಎಂಡಿ ವಿರುದ್ಧ ಕೇಸ್ ದಾಖಲಿಸಿದ ಡಿಎಚ್‌ಒ

ನಗರದ ವ್ಯಾಕ್ಸಿನ್ ಡಿಪೋದಲ್ಲಿ ಅಕ್ರಮ ಕಾಮಗಾರಿ ಆರೋಪ ಕೇಳಿಬಂದಿದ್ದು, ಸ್ಮಾರ್ಟ್ ಸಿಟಿ ಎಂಡಿ ವಿರುದ್ಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಡಿಎಚ್‌ಒ ಡಾ.ಮಹೇಶ್ ಕೋಣಿ ಕೇಸ್ ದಾಖಲಿಸಿದ್ದಾರೆ.

ಬೆಳಗಾವಿ ವ್ಯಾಕ್ಸಿನ್ ಡಿಪೋದಲ್ಲಿ ಅಕ್ರಮ ಕಾಮಗಾರಿ ಆರೋಪ; ಸ್ಮಾರ್ಟ್ ಸಿಟಿ ಎಂಡಿ ವಿರುದ್ಧ ಕೇಸ್ ದಾಖಲಿಸಿದ ಡಿಎಚ್‌ಒ
ಡಿಎಚ್‌ಒ ಡಾ.ಮಹೇಶ್ ಕೋಣಿ
ಕಿರಣ್ ಹನುಮಂತ್​ ಮಾದಾರ್
|

Updated on:Jun 20, 2023 | 12:24 PM

Share

ಬೆಳಗಾವಿ: ನಗರದ ವ್ಯಾಕ್ಸಿನ್ ಡಿಪೋದಲ್ಲಿ ಅಕ್ರಮ ಕಾಮಗಾರಿ ಆರೋಪ ಕೇಳಿಬಂದಿದ್ದು, ಸ್ಮಾರ್ಟ್ ಸಿಟಿ ಎಂಡಿ ವಿರುದ್ಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಡಿಎಚ್‌ಒ(DHO) ಡಾ.ಮಹೇಶ್ ಕೋಣಿ ಕೇಸ್ ದಾಖಲಿಸಿದ್ದಾರೆ. ಪರವಾನಿಗೆ ಇಲ್ಲದೇ ತಮ್ಮ ಕಚೇರಿ ಆವರಣದಲ್ಲಿನ ಜಾಗದಲ್ಲಿ ಅಕ್ರಮ ಕಾಮಗಾರಿ ಮಾಡಿದ್ದಾರೆ. ಮಣ್ಣು ಜೊತೆಗೆ ಮರಕಡಿದು ಅಕ್ರಮವಾಗಿ ಸಾಗಿಸಿದ್ದಾರೆಂದು ಸ್ಮಾರ್ಟ ಸಿಟಿ ಎಂಡಿ ವಿರುದ್ಧ ಸೆಕ್ಷೆನ್ 420, 427, 447ಐಪಿಸಿ ಅಡಿ ಪ್ರಕರಣ ದಾಖಲು ಮಾಡಲಾಗಿದ್ದು, ಈ ಹಿನ್ನಲೆ ಕಾಮಗಾರಿಯನ್ನ ಅರ್ಧಕ್ಕೆ ಸ್ಥಗಿತ ಮಾಡಲಾಗಿದೆ.

2016ರಿಂದ ಸ್ಮಾರ್ಟ್ ಸಿಟಿ ಕಾಮಗಾರಿ ಮಾಡುತ್ತಿದ್ದ ಅಧಿಕಾರಿಗಳು

ಇನ್ನು ಇಲ್ಲಿ ಅಮೂಲ್ಯವಾದ ಮರ, ಪ್ರಾಣಿ ಪಕ್ಷಿಗಳಿರುವುದರಿಂದ ಕಾಮಗಾರಿ ಬೇಡ ಎಂದು ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದರು. ಇದಕ್ಕೆ ಸಂಬಂಧಪಟ್ಟ ಇಲಾಖೆ ಅನುಮತಿ ಪಡೆಯದೇ ಸ್ಮಾರ್ಟ್ ಕಾಮಗಾರಿ ನಡೆಸಿತಾ? ವಿರೋಧದ ನಡುವೆ ಕಾಮಗಾರಿ ನಡೆಸುವ ಹಿಂದಿನ ಉದ್ದೇಶವೇನು ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಸ್ಮಾರ್ಟ್ ಸಿಟಿ ಕಾಮಗಾರಿ ವಿರುದ್ಧ ಮೊದಲ ಕೇಸ್ ದಾಖಲು ಆಗಿದೆ. ಈ ಹಿಂದೆ ಸಚಿವ ಸತೀಶ್ ಜಾರಕಿಹೊಳಿಯವರು ಸ್ಮಾರ್ಟ್ ಸಿಟಿ ಕಾಮಗಾರಿ ಕಳಪೆ ಆಗಿದ್ದು, ಆ ಕುರಿತು ಭ್ರಷ್ಟಾಚಾರ ಆರೋಪದ ಮೇಲೆ ತನಿಖೆ ಮಾಡಿಸುವುದಾಗಿ ಹೇಳಿದ್ದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ಮುಂದುವರೆಯಲಿದೆ ಜಿಸಿಬಿ ಘರ್ಜನೆ, ಪಾಲಿಕೆ ಟಾರ್ಗೆಟ್ ನಲ್ಲಿವೆ 600 ಅಕ್ರಮ ಸ್ಥಳಗಳು

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮವಾಗಿ ನಿವೇಶನ ಹಂಚಿಕೆ ಆರೋಪ; ಅಧಿಕಾರಿಗಳಿಗೆ ಬಂಧನ ಭೀತಿ

ಬೆಳಗಾವಿ: ಜಿಲ್ಲೆಯಲ್ಲಿ ಇಂತಹ ಅಕ್ರಮ ಕಾಮಗಾರಿಗಳು ಇದೇ ಮೊದಲಲ್ಲ, ಇದೆ ಜೂನ್​ ತಿಂಗಳು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮವಾಗಿ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ. ಅಧಿಕಾರಿ ಕಳ್ಳಾಟದ ಕುರಿತು ರಾಜು ಟೋಪಣ್ಣವರ್ ಎಂಬುವವರು ಲೋಕಾಯುಕ್ತದಲ್ಲಿ ದೂರು ಸಲ್ಲಿಸಿದ್ದರು. ಈ ಕುರಿತು ಬುಡಾ ಆಯುಕ್ತ ಪ್ರೀತಮ್ ನಸಲಾಪುರೆ ವಿರುದ್ಧ ಕೇಸ್ ದಾಖಲಿಸಲು ನಾಲ್ಕನೇ ಹೆಚ್ಚುವರಿ ಮತ್ತು ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿತ್ತು.

ದೂರು ಸಲ್ಲಿಸಿದರೂ ಲೋಕಾಯುಕ್ತ ಕೇಸ್ ದಾಖಲಿಸಿಕೊಂಡಿರಲಿಲ್ಲ

ಇನ್ನು ಈ ಕುರಿತು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದರೂ ಕೇಸ್ ದಾಖಲಿಸಿಕೊಂಡಿರಲಿಲ್ಲ. ಈ ಹಿನ್ನೆಲೆ ರಾಜು ಟೋಪಣ್ಣವರ್ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಕುರಿತು ಅಧಿಕಾರಿ ವಿರುದ್ಧ 120ಬಿ, 405, 406, 420, 425, 463, 464, 465, 466, 468, 477a ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಿಸಿ ವಿಚಾರಣೆ ನಡೆಸಿ, ವರದಿ ನೀಡುವಂತೆ ಆದೇಶಿಸಲಾಗಿತ್ತು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:24 pm, Tue, 20 June 23

ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ