ಕೊಲೆ ಪ್ರಕರಣದಲ್ಲಿ ಅಮಾಯಕರ ಬಂಧಿಸಿ 15 ಲಕ್ಷ ಲಂಚ ಪಡೆದು ಕಿರುಕುಳ; ನ್ಯಾಯಕ್ಕಾಗಿ ಆಗ್ರಹಿಸಿ ಕುಟುಂಬಸ್ಥರ ಕಣ್ಣೀರು

ತಮ್ಮ ಮಕ್ಕಳ ಮೇಲಿನ ಕೇಸ್ ಹಿಂಪಡೆಯಲು 15 ಲಕ್ಷ ರೂಪಾಯಿ ಹಣವನ್ನ ಗ್ರಾಮದ ಪಂಚರ ಮಧ್ಯಸ್ಥಿಕೆಯಲ್ಲಿ ಪೊಲೀಸರು ಪಡೆದಿದ್ದಾರೆಂದು ಆರೋಪಿಸಿದ್ದಾರೆ. ಜಮೀನು ಅಡವಿಟ್ಟು ಹಣ ನೀಡಿದ್ದೀವಿ ನ್ಯಾಯ ದೊರಕಿಸಿಕೊಡಿ ಅಂತಾ ಕಣ್ಣೀರು ಹಾಕಿದ್ದಾರೆ.

ಕೊಲೆ ಪ್ರಕರಣದಲ್ಲಿ ಅಮಾಯಕರ ಬಂಧಿಸಿ 15 ಲಕ್ಷ ಲಂಚ ಪಡೆದು ಕಿರುಕುಳ; ನ್ಯಾಯಕ್ಕಾಗಿ ಆಗ್ರಹಿಸಿ ಕುಟುಂಬಸ್ಥರ ಕಣ್ಣೀರು
ಅರ್ಜುನ್, ಕೃಷ್ಣ, ಮೃತ ಮಂಜುನಾಥ ಮತ್ತು ಗೋಕಾಕ್ ಇನ್ಸ್‌ಪೆಕ್ಟರ್ ಗೋಪಾಲ್ ರಾಠೋಡ್
Follow us
| Updated By: ಆಯೇಷಾ ಬಾನು

Updated on: Apr 24, 2022 | 8:42 AM

ಬೆಳಗಾವಿ: ಕೊಲೆ ಪ್ರಕರಣದಲ್ಲಿ ಅಮಾಯಕರ ಬಂಧಿಸಿ 15 ಲಕ್ಷ ಲಂಚ ಪಡೆದು ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಗೋಕಾಕ್ ಇನ್ಸ್‌ಪೆಕ್ಟರ್ ಗೋಪಾಲ್ ರಾಠೋಡ್ ಹಾಗೂ ಸಿಬ್ಬಂದಿ ವಿರುದ್ಧ ಬೆಳಗಾವಿ ಜಿಲ್ಲೆ ಗೋಕಾಕ್‌ನ ಸಿದ್ದಪ್ಪ ಬಬಲಿ ಕುಟುಂಬ ಗಂಭೀರ ಆರೋಪ ಮಾಡಿದೆ. ನ್ಯಾಯಕ್ಕಾಗಿ ಆಗ್ರಹಿಸಿ ವೃದ್ಧ ದಂಪತಿ, ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.

ಇನ್ನು ಮತ್ತೊಂದೆಡೆ ಈ ಘಟನೆ ಸಂಬಂಧ ಕುಟುಂಬಸ್ಥರು ಸಿಎಂ ಬೊಮ್ಮಾಯಿ, ಗೃಹಸಚಿವರಿಗೂ ಪತ್ರ ಬರೆದು ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ. ಗೋಕಾಕ್ ಇನ್ಸ್‌ಪೆಕ್ಟರ್, ಸಿಬ್ಬಂದಿ ವಿರುದ್ಧ ಲೋಕಾಯುಕ್ತ, ಮಹಿಳಾ ಆಯೋಗಕ್ಕೂ ದೂರು ನೀಡಿದ್ದಾರೆ. 2021ರ ಜುಲೈ 17ರಂದು ಗೋಕಾಕ್‌ನ ಮಹಾಂತೇಶ ನಗರ ಬಡಾವಣೆಯಲ್ಲಿ ಮಂಜುನಾಥ ಮುರಕಿಭಾವಿ ಎಂಬುವವರ ಕೊಲೆಯಾಗಿತ್ತು. ಕೊಲೆ ಪ್ರಕರಣದಲ್ಲಿ ಸಿದ್ದಪ್ಪ ಬಬಲಿ ಮಕ್ಕಳಾದ ಕೃಷ್ಣ, ಅರ್ಜುನ್ ಬಂಧನವಾಗಿತ್ತು. ಬಂಧಿತರ ಅಕ್ಕನ ಮಗಳ ಜೊತೆ ಕೊಲೆಯಾದ ಯುವಕ ಮಂಜುನಾಥ ಪ್ರೀತಿಸುತ್ತಿದ್ದ ಆರೋಪವಿದೆ. ಅಕ್ಕನ ಮಗಳ ಮದುವೆಯಾದ ಬಳಿಕವೂ ಮಂಜುನಾಥ ಸಂಪರ್ಕದಲ್ಲಿದ್ದ ಹಿನ್ನೆಲೆ ಮಂಜುನಾಥ ಮುರಕಿಭಾವಿಯನ್ನು ಕೊಲೆ ಮಾಡಿದ್ದಾರೆಂದು ಆರೋಪಿಸಲಾಗಿತ್ತು.

ಆದ್ರೆ ಬಂಧಿತರಿಗೂ, ಕೊಲೆಯಾದ ಯುವಕನಿಗೂ ಯಾವುದೇ ಸಂಬಂಧ ಇಲ್ಲವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಂಜು ಬಸಪ್ಪ ರಂಗನಕೊಪ್ಪ ಎಂಬುವರ ಹೇಳಿಕೆ ಮೇಲೆಯಷ್ಟೇ ಸಿದ್ದಪ್ಪ ಬಬಲಿ ಮಕ್ಕಳಾದ ಕೃಷ್ಣ, ಅರ್ಜುನ್ನ ಪೊಲೀಸರು ಬಂಧಿಸಿದ್ದಾರೆ. ಯಾವುದೇ ಸಾಕ್ಷ್ಯಾಧಾರ ಇಲ್ಲದೇ ಇಬ್ಬರನ್ನೂ ಬಂಧಿಸಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಮಕ್ಕಳ ಮೇಲಿನ ಕೇಸ್ ಹಿಂಪಡೆಯಲು 15 ಲಕ್ಷ ರೂಪಾಯಿ ಹಣವನ್ನ ಗ್ರಾಮದ ಪಂಚರ ಮಧ್ಯಸ್ಥಿಕೆಯಲ್ಲಿ ಪೊಲೀಸರು ಪಡೆದಿದ್ದಾರೆಂದು ಆರೋಪಿಸಿದ್ದಾರೆ. ಜಮೀನು ಅಡವಿಟ್ಟು ಹಣ ನೀಡಿದ್ದೀವಿ ನ್ಯಾಯ ದೊರಕಿಸಿಕೊಡಿ ಅಂತಾ ಕಣ್ಣೀರು ಹಾಕಿದ್ದಾರೆ. ನ್ಯಾಯ ಸಿಗದಿದ್ರೇ ಇಡೀ ಕುಟುಂಬ ಆತ್ಮಹತ್ಯೆ ಹಾದಿ ಹಿಡಿಯುತ್ತೇವೆ. ಇದಕ್ಕೆ ಗೋಕಾಕ್ ಪೊಲೀಸರೇ ಕಾರಣರಾಗ್ತಾರೆಂದು ಕುಟುಂಬಸ್ಥರು ಎಚ್ಚರಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ: Accident: ಭೀಕರ ಅಪಘಾತ; 8 ಮಂದಿ ಸಾವು, 11 ಜನರಿಗೆ ಗಾಯ

Truecaller: ಗೂಗಲ್ ಹೊಸ ನಿಯಮಕ್ಕೆ ಬೆಚ್ಚಿಬಿದ್ದ ಟ್ರೂ ಕಾಲರ್: ಇನ್ಮುಂದೆ ಇರಲ್ಲ ಈ ಫೀಚರ್

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ