AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಬರಗಾಲ ಮಧ್ಯೆ ಜಾನುವಾರುಗಳಿಗೆ ‘ಚರ್ಮಗಂಟು’ ಕಾಟ: ಕಂಗಾಲಾದ ಚಿಕ್ಕೋಡಿ ರೈತರು

Lumpy Skin Disease: ಕಳೆದ ವರ್ಷ ಬೆಳಗಾವಿ ಜಿಲ್ಲೆಯ ಗಡಿ ತಾಲೂಕು ಕೇರೂರು ಗ್ರಾಮವೊಂದರಲ್ಲೇ ಚರ್ಮಗಂಟು ರೋಗದಿಂದ 70 ಜಾನುವಾರುಗಳು ಮೃತಪಟ್ಟಿದ್ದವು. ಸದ್ಯ ಮತ್ತೆ ಜಾನುವಾರುಗಳಿಗೆ ಚರ್ಮಗಂಟು ರೋಗ ಬಂದ ಹಿನ್ನೆಲೆ ರೈತರಲ್ಲಿ ಆತಂಕ ಶುರುವಾಗಿದೆ. ಚರ್ಮಗಂಟು ರೋಗದಿಂದ ಜಾನುವಾರು ಮೃತಪಟ್ಟರೇ ಮರಣೋತ್ತರ ಪರೀಕ್ಷೆ ಮಾಡಿಸಿದರೆ ಮಾತ್ರ ಸರ್ಕಾರದ ವತಿಯಿಂದ ಪರಿಹಾರ ಸಿಗುತ್ತದೆ.

ಭೀಕರ ಬರಗಾಲ ಮಧ್ಯೆ ಜಾನುವಾರುಗಳಿಗೆ 'ಚರ್ಮಗಂಟು' ಕಾಟ: ಕಂಗಾಲಾದ ಚಿಕ್ಕೋಡಿ ರೈತರು
ಚರ್ಮಗಂಟು ರೋಗ (ಸಂಗ್ರಹ ಚಿತ್ರ)
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on:Sep 24, 2023 | 3:02 PM

Share

ಚಿಕ್ಕೋಡಿ, ಸೆಪ್ಟೆಂಬರ್​​ 24: ಕಳೆದ ವರ್ಷ ಜಾನುವಾರುಗಳಿಗೆ ಬಿಟ್ಟು ಬಿಡದೇ ಕಾಡಿದ್ದ ಚರ್ಮಗಂಟು ರೋಗ (Lumpy Skin Disease) ಇದೀಗ ಮತ್ತೆ ಕಾಣಿಸಿಕೊಂಡಿದೆ. ಬೆಳಗಾವಿ ಜಿಲ್ಲೆಯ ಗಡಿ ತಾಲೂಕುಗಳ ರೈತರ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ಕೇರೂರು ಗ್ರಾಮವೊಂದರಲ್ಲೇ ಎಮ್ಮೆ, ಹೋರಿ, ಆಕಳುಗಳು ಸೇರಿದಂತೆ ಆರು ಜಾನುವಾರುಗಳಿಗೆ ಚರ್ಮಗಂಟು ರೋಗ ಬಂದಿದೆ. ಕಳೆದ ವರ್ಷ ಕೇರೂರು ಗ್ರಾಮವೊಂದರಲ್ಲೇ ಚರ್ಮಗಂಟು ರೋಗದಿಂದ 70 ಜಾನುವಾರುಗಳು ಮೃತಪಟ್ಟಿದ್ದವು. ಸದ್ಯ ಮತ್ತೆ ಜಾನುವಾರುಗಳಿಗೆ ಚರ್ಮಗಂಟು ರೋಗ ಬಂದ ಹಿನ್ನೆಲೆ ರೈತರಲ್ಲಿ ಆತಂಕ ಶುರುವಾಗಿದೆ.

ಚರ್ಮಗಂಟು ರೋಗದ ಬಗ್ಗೆ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಕೆ.ಎಸ್.ಘಂಟಿ ಹೇಳಿಕೆ ನೀಡಿದ್ದು, ಕಳೆದ ವರ್ಷ ಚರ್ಮಗಂಟು ರೋಗ ಹೆಚ್ಚಿತ್ತು, ಲಸಿಕೆ ನೀಡಿದ ಬಳಿಕ ಈಗ ಕಡಿಮೆಯಾಗಿದೆ. ಜಾನುವಾರುಗಳಿಗೆ ಗೋಟ್‌ಫಾಕ್ಸ್ ಲಸಿಕೆ ನೀಡಲಾಗುತ್ತಿದೆ. ರೈತರ ಮನೆಗೆ ಭೇಟಿ ನೀಡಿ ಚರ್ಮಗಂಟು ರೋಗ ಬಂದ ಜಾನುವಾರುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ

ಕಳೆದ ವರ್ಷ ಚರ್ಮಗಂಟು ರೋಗದಿಂದ ಕೇರೂರಲ್ಲಿ 70 ಜಾನುವಾರು ಮೃತಪಟ್ಟಿದ್ದವು. ಈಗ ಚರ್ಮಗಂಟು ರೋಗದಿಂದ ಜಾನುವಾರು ಮೃತಪಟ್ಟರೇ ಮರಣೋತ್ತರ ಪರೀಕ್ಷೆ ಮಾಡಿಸಿದರೆ ಮಾತ್ರ ಸರ್ಕಾರದ ವತಿಯಿಂದ ಪರಿಹಾರ ಸಿಗುತ್ತದೆ ಎಂದು ಹೇಳಿದರು.

ಚರ್ಮಗಂಟು ರೋಗ ಜಾನುವಾರುಗಳಿಂದ ಜಾನುವಾರುಗಳಿಗೆ ವ್ಯಾಪಿಸುವ ಸಾಂಕ್ರಾಮಿಕ ರೋಗ. ಉಣ್ಣೆ, ಸೊಳ್ಳೆಯಂತ ಹೊರ ಪರಾವಲಂಬಿ ಜೀವಿಗಳು ಜಾನುವಾರುಗಳ ಬಳಿ ಬರದಂತೆ ತಡೆಯಬೇಕು. ಅದಕ್ಕಾಗಿ ಪಶು ಆಸ್ಪತ್ರೆಯಿಂದ ಔಷಧಿ ನೀಡಲಾಗುತ್ತಿದೆ ಹಾಗೂ ಲಸಿಕೆಯನ್ನು ಸಹ ನೀಡಲಾಗುತ್ತಿದೆ ಎಂದರು.

ಟಿವಿ9 ಬಳಿ ಅಳಲು ತೋಡಿಕೊಂಡ ರೈತ ಮಹಿಳೆ 

ಕಳೆದ ಒಂದು ತಿಂಗಳ ಅಂತರದಲ್ಲಿ ಕೇರೂರು ಗ್ರಾಮದ ರೈತ ಮಹಿಳೆ ಸರಸ್ವತಿ ಭೋಸಲೆಗೆ ಸೇರಿದ ಎಮ್ಮೆ, ನಾಲ್ಕು ಮೇಕೆಗಳು ಮೃತಪಟ್ಟಿವೆ. ಸದ್ಯ ಮನೆಯಲ್ಲಿದ್ದ ಹೋರಿಗೂ ಚರ್ಮಗಂಟು ರೋಗ ಕಾಣಿಸಿಕೊಂಡಿದೆ. ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ನೀಡುವಂತೆ ಸರಸ್ವತಿ ಭೋಸಲೆ ಟಿವಿ9 ಬಳಿ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ಕಮೀಷನರ್ ಆದೇಶಕ್ಕೂ ಡೋಂಟ್ ಕೇರ್, ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು

ಹೋರಿಗೆ ಚರ್ಮಗಂಟು ರೋಗ ಬಂದಿದ್ದು ಮೈಯೆಲ್ಲಾ ಗಂಟು ಎದ್ದಿದೆ. ಕಳೆದ ವಾರ ಇದ್ದಕ್ಕಿದ್ದಂತೆ ಎಮ್ಮೆ ಮೃತಪಟ್ಟಿದೆ. ಮರಣೋತ್ತರ ಪರೀಕ್ಷೆ ಮಾಡಿಸದೇ ಅಂತ್ಯಸಂಸ್ಕಾರ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ಮಾಡಿಸಿದರೆ ಮಾತ್ರ ಪರಿಹಾರ ನೀಡುತ್ತಾರಂತೆ. ಮಳೆ ಇಲ್ಲದೇ ಬರಗಾಲ ಇದ್ದು ಬೆಳೆಯೂ ಬಂದಿಲ್ಲ. ಜಾನುವಾರುಗಳ ನರಕಯಾತನೆ ನೋಡಿ ನಮಗೂ ಕಷ್ಟವಾಗುತ್ತಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:01 pm, Sun, 24 September 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್